ಮನರಂಜನೆ

Biggboss 12 : ʻಎಸ್‌ʼ ಪದ ಬಳಕೆ, ಅಶ್ವಿನಿ ಗೌಡ ವಿರುದ್ಧ ದೂರು ದಾಖಲು..

ಬೆಂಗಳೂರು : ಬಿಗ್ ಬಾಸ್ ಕನ್ನಡ ಸೀಸನ್-12 ಮತ್ತೊಂದು ವಿವಾದಕ್ಕೆ ತುತ್ತಾಗಿದ್ದು, ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲಾಗಿದೆ. ಸಹ ಸ್ಪರ್ಧಿ ರಕ್ಷಿತಾ ಶೆಟ್ಟಿ ಅವರನ್ನು ನಿಂದಿಸಿದ ಆರೋಪದಲ್ಲಿ ಈ ದೂರು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಕಳೆದ ವಾರದ ಎಪಿಸೋಡ್‌ನಲ್ಲಿ ಜಾಹ್ನವಿ ಹಾಗೂ ಅಶ್ವಿನಿ ಗೌಡ ಕೂತು ರಕ್ಷಿತಾ ಬಗ್ಗೆ ಮಾತನಾಡುತ್ತಿದ್ದರು. ಈ ವೇಳೆ ರಕ್ಷಿತಾರನ್ನು ಸ್ಲಮ್ ಎಂದು ಅಶ್ವಿನಿ ಗೌಡ ಕರೆದಿದ್ದರು. ಬಳಿಕ ಎಸ್ ಪದ ಬಳಕೆ ಮಾಡಿದ್ದರು. ಇದೇ ವಿಚಾರವಾಗಿ ಇದೀಗ ಪೊಲೀಸ್ ದೂರು ದಾಖಲಾಗಿದೆ ಎಂದು ಹೇಳಲಾಗಿದೆ.

ಬಿಡದಿ ಪೊಲೀಸ್ ಠಾಣೆಯಲ್ಲಿ ಬಿಗ್‌ಬಾಸ್ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ವಕೀಲರೊಬ್ಬರು ದೂರು ದಾಖಲಿಸಿದ್ದಾರೆ. ಹಿರಿಯ ವಕೀಲ ಪ್ರಶಾಂತ್ ಮೆತಲ್ ಎಂಬುವವರಿಂದ ಅಶ್ವಿನಿ ಗೌಡ ವಿರುದ್ಧ ಜಾತಿ ನಿಂದನೆ, ವ್ಯಕ್ತಿ ನಿಂದನೆ ಆರೋಪದಡಿ ಬಿಡದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನು ಓದಿ: ಹಿರಿಯ ಐಪಿಎಸ್‌ ಅಧಿಕಾರಿ ಅಲೋಕ್‌ ಕುಮಾರ್‌ಗೆ ಬಿಗ್‌ ರಿಲೀಫ್‌

ಬಿಗ್‌ಬಾಸ್ ಮನೆಯಲ್ಲಿ ಸಹಸ್ಪರ್ಧಿ ಬಗ್ಗೆ ಅಶ್ವಿನಿ ಗೌಡ ಅವಹೇಳನಕಾರಿ ಪದ ಬಳಕೆ ಮಾಡಿದ ಆರೋಪದ ಮೇರೆಗೆ ಆಕೆಯ ವಿರುದ್ಧ ಹೈಕೋರ್ಟ್ ವಕೀಲ ಪ್ರಶಾಂತ್ ಮೆತಾಲ್ ದೂರು ನೀಡಿದ್ದಾರೆ. ಇದು ವ್ಯಕ್ತಿ ನಿಂದನೆ ಎಂದು ಆರೋಪಿಸಿರುವ ಅವರು ಕಲರ್ಸ್ ಕನ್ನಡ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್ ಶೋ ಆಯೋಜಕರ ವಿರುದ್ಧವೂ ದೂರು ನೀಡಿದ್ದಾರೆ.

ಸಮಾಜದಲ್ಲಿ ಎಲ್ಲರೂ ಒಂದೇ, ಯಾವುದೇ ಜಾತಿ ಭೇದ ಹರಡಬಾರದು. ಅಶ್ವಿನಿ ಗೌಡ ಮಾತನ್ನು ತೆಗೆಯದೇ ಕಾರ್ಯಕ್ರಮ ಪ್ರಸಾರ ಮಾಡಿದ್ದು ತಪ್ಪು. ಇದರಿಂದ ಕೆಟ್ಟ ಸಂದೇಶ ರವಾನೆಯಾಗುತ್ತದೆ ಎಂದು ದೂರುದಾರರು ಆರೋಪಿಸಿದ್ದಾರೆ. ವಕೀಲರು ನೀಡಿದ ದೂರು ಆಧರಿಸಿ ಬಿಡದಿ ಪೊಲೀಸರು ಎನ್‌ಸಿಆರ್ ದಾಖಲಿಸಿಕೊಂಡಿದ್ದಾರೆ.

ಎಸ್ ಪದದ ವಿವಾದ
ರಕ್ಷಿತಾ ಶೆಟ್ಟಿ ಬಗ್ಗೆ ‘ಸ್ಲಮ್’ ಎಂದು ಅಶ್ವಿನಿ ಗೌಡ ಹೇಳಿದ್ದನ್ನು ಮ್ಯೂಟ್ ಮಾಡಲಾಗಿತ್ತು. ಆದರೆ ಆಕೆಯ ಪದ ಬಳಕೆ ವೀಕ್ಷಕರಿಗೆ ಅರ್ಥವಾಗಿತ್ತು. ಅಷ್ಟೇ ಅಲ್ಲ, ಮತ್ತೆ ಇದೇ ವಿಚಾರವಾಗಿ ಜಾಹ್ನವಿ ಬಳಿಕ ಮಾತನಾಡುತ್ತಾ ‘ಎಸ್‌’ ಅಂತ ಹೇಳ್ದೆ ಅಲ್ವಾ ಎಂದು ಅಶ್ವಿನಿ ಮತ್ತೆ ಅದೇ ಅರ್ಥದಲ್ಲಿ ಮಾತನಾಡಿದ್ದರು. ಜಿಯೋ ಹಾಟ್‌ಸ್ಟರ್‌ನಲ್ಲಿ ಇದು ಸ್ಟ್ರೀಮಿಂಗ್ ಆಗಿತ್ತು. ಬಳಿಕ ಅದನ್ನು ಎಡಿಟ್ ಮಾಡಿ ಅಪ್‌ಲೋಡ್ ಮಾಡಿದ್ದರು. ಆದರೂ ವೀಕ್ಷಕರು ಅದನ್ನು ಗಮನಿಸಿ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಸಿದ್ದರು.

ಅದೇ ದಿನ ರಾತ್ರಿ 11 ಗಂಟೆಗೆ ಮತ್ತೆ ಅಶ್ವಿನಿ ಹಾಗೂ ಜಾಹ್ನವಿ ಇಬ್ಬರೂ ಮಾತನಾಡುವ ವೇಳೆ “ಅವಳಿಗೆ ಫುಲ್ ಶೇಪ್‌ ಔಟ್ ಆಗೋಯ್ತು. ಏನು ಮಾತನಾಡಲಿಲ್ಲ ಇವತ್ತು. ನಾನು ಹೇಳಲಿಲ್ವಾ ಆ S.. ಎಂದು ಅಶ್ವಿನಿ ಮತ್ತೆ ಹೇಳಿದ್ದರು.

ಆಂದೋಲನ ಡೆಸ್ಕ್

Recent Posts

ಮೇ.20ರಿಂದ ಸಾರಿಗೆ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಕೆಎಸ್‌ಆರ್‌ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…

5 hours ago

ಸರ್ಕಾರದ ಸಂಧಾನ ಸಭೆ ವಿಫಲ ; ಪ್ರತಿಭಟನೆ ನಿಶ್ಚಿತ

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…

6 hours ago

ರಷ್ಯಾದಿಂದ ತೈಲ ಆಮದು ಮುಂದುವರಿಸಿದ ಭಾರತ

ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…

7 hours ago

ವಸ್ತುಸಂಗ್ರಹಾಲಯ ದಿನಾಚರಣೆ : ಗಮನಸೆಳೆದ ಸ್ಮಾರಕಗಳು ಮತ್ತು ಪ್ರಾಚ್ಯವಸ್ತುಗಳು

ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…

7 hours ago

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

8 hours ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

10 hours ago