ಮನರಂಜನೆ

Biggboss 12 : ʻಎಸ್‌ʼ ಪದ ಬಳಕೆ, ಅಶ್ವಿನಿ ಗೌಡ ವಿರುದ್ಧ ದೂರು ದಾಖಲು..

ಬೆಂಗಳೂರು : ಬಿಗ್ ಬಾಸ್ ಕನ್ನಡ ಸೀಸನ್-12 ಮತ್ತೊಂದು ವಿವಾದಕ್ಕೆ ತುತ್ತಾಗಿದ್ದು, ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲಾಗಿದೆ. ಸಹ ಸ್ಪರ್ಧಿ ರಕ್ಷಿತಾ ಶೆಟ್ಟಿ ಅವರನ್ನು ನಿಂದಿಸಿದ ಆರೋಪದಲ್ಲಿ ಈ ದೂರು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಕಳೆದ ವಾರದ ಎಪಿಸೋಡ್‌ನಲ್ಲಿ ಜಾಹ್ನವಿ ಹಾಗೂ ಅಶ್ವಿನಿ ಗೌಡ ಕೂತು ರಕ್ಷಿತಾ ಬಗ್ಗೆ ಮಾತನಾಡುತ್ತಿದ್ದರು. ಈ ವೇಳೆ ರಕ್ಷಿತಾರನ್ನು ಸ್ಲಮ್ ಎಂದು ಅಶ್ವಿನಿ ಗೌಡ ಕರೆದಿದ್ದರು. ಬಳಿಕ ಎಸ್ ಪದ ಬಳಕೆ ಮಾಡಿದ್ದರು. ಇದೇ ವಿಚಾರವಾಗಿ ಇದೀಗ ಪೊಲೀಸ್ ದೂರು ದಾಖಲಾಗಿದೆ ಎಂದು ಹೇಳಲಾಗಿದೆ.

ಬಿಡದಿ ಪೊಲೀಸ್ ಠಾಣೆಯಲ್ಲಿ ಬಿಗ್‌ಬಾಸ್ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ವಕೀಲರೊಬ್ಬರು ದೂರು ದಾಖಲಿಸಿದ್ದಾರೆ. ಹಿರಿಯ ವಕೀಲ ಪ್ರಶಾಂತ್ ಮೆತಲ್ ಎಂಬುವವರಿಂದ ಅಶ್ವಿನಿ ಗೌಡ ವಿರುದ್ಧ ಜಾತಿ ನಿಂದನೆ, ವ್ಯಕ್ತಿ ನಿಂದನೆ ಆರೋಪದಡಿ ಬಿಡದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನು ಓದಿ: ಹಿರಿಯ ಐಪಿಎಸ್‌ ಅಧಿಕಾರಿ ಅಲೋಕ್‌ ಕುಮಾರ್‌ಗೆ ಬಿಗ್‌ ರಿಲೀಫ್‌

ಬಿಗ್‌ಬಾಸ್ ಮನೆಯಲ್ಲಿ ಸಹಸ್ಪರ್ಧಿ ಬಗ್ಗೆ ಅಶ್ವಿನಿ ಗೌಡ ಅವಹೇಳನಕಾರಿ ಪದ ಬಳಕೆ ಮಾಡಿದ ಆರೋಪದ ಮೇರೆಗೆ ಆಕೆಯ ವಿರುದ್ಧ ಹೈಕೋರ್ಟ್ ವಕೀಲ ಪ್ರಶಾಂತ್ ಮೆತಾಲ್ ದೂರು ನೀಡಿದ್ದಾರೆ. ಇದು ವ್ಯಕ್ತಿ ನಿಂದನೆ ಎಂದು ಆರೋಪಿಸಿರುವ ಅವರು ಕಲರ್ಸ್ ಕನ್ನಡ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್ ಶೋ ಆಯೋಜಕರ ವಿರುದ್ಧವೂ ದೂರು ನೀಡಿದ್ದಾರೆ.

ಸಮಾಜದಲ್ಲಿ ಎಲ್ಲರೂ ಒಂದೇ, ಯಾವುದೇ ಜಾತಿ ಭೇದ ಹರಡಬಾರದು. ಅಶ್ವಿನಿ ಗೌಡ ಮಾತನ್ನು ತೆಗೆಯದೇ ಕಾರ್ಯಕ್ರಮ ಪ್ರಸಾರ ಮಾಡಿದ್ದು ತಪ್ಪು. ಇದರಿಂದ ಕೆಟ್ಟ ಸಂದೇಶ ರವಾನೆಯಾಗುತ್ತದೆ ಎಂದು ದೂರುದಾರರು ಆರೋಪಿಸಿದ್ದಾರೆ. ವಕೀಲರು ನೀಡಿದ ದೂರು ಆಧರಿಸಿ ಬಿಡದಿ ಪೊಲೀಸರು ಎನ್‌ಸಿಆರ್ ದಾಖಲಿಸಿಕೊಂಡಿದ್ದಾರೆ.

ಎಸ್ ಪದದ ವಿವಾದ
ರಕ್ಷಿತಾ ಶೆಟ್ಟಿ ಬಗ್ಗೆ ‘ಸ್ಲಮ್’ ಎಂದು ಅಶ್ವಿನಿ ಗೌಡ ಹೇಳಿದ್ದನ್ನು ಮ್ಯೂಟ್ ಮಾಡಲಾಗಿತ್ತು. ಆದರೆ ಆಕೆಯ ಪದ ಬಳಕೆ ವೀಕ್ಷಕರಿಗೆ ಅರ್ಥವಾಗಿತ್ತು. ಅಷ್ಟೇ ಅಲ್ಲ, ಮತ್ತೆ ಇದೇ ವಿಚಾರವಾಗಿ ಜಾಹ್ನವಿ ಬಳಿಕ ಮಾತನಾಡುತ್ತಾ ‘ಎಸ್‌’ ಅಂತ ಹೇಳ್ದೆ ಅಲ್ವಾ ಎಂದು ಅಶ್ವಿನಿ ಮತ್ತೆ ಅದೇ ಅರ್ಥದಲ್ಲಿ ಮಾತನಾಡಿದ್ದರು. ಜಿಯೋ ಹಾಟ್‌ಸ್ಟರ್‌ನಲ್ಲಿ ಇದು ಸ್ಟ್ರೀಮಿಂಗ್ ಆಗಿತ್ತು. ಬಳಿಕ ಅದನ್ನು ಎಡಿಟ್ ಮಾಡಿ ಅಪ್‌ಲೋಡ್ ಮಾಡಿದ್ದರು. ಆದರೂ ವೀಕ್ಷಕರು ಅದನ್ನು ಗಮನಿಸಿ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಸಿದ್ದರು.

ಅದೇ ದಿನ ರಾತ್ರಿ 11 ಗಂಟೆಗೆ ಮತ್ತೆ ಅಶ್ವಿನಿ ಹಾಗೂ ಜಾಹ್ನವಿ ಇಬ್ಬರೂ ಮಾತನಾಡುವ ವೇಳೆ “ಅವಳಿಗೆ ಫುಲ್ ಶೇಪ್‌ ಔಟ್ ಆಗೋಯ್ತು. ಏನು ಮಾತನಾಡಲಿಲ್ಲ ಇವತ್ತು. ನಾನು ಹೇಳಲಿಲ್ವಾ ಆ S.. ಎಂದು ಅಶ್ವಿನಿ ಮತ್ತೆ ಹೇಳಿದ್ದರು.

ಆಂದೋಲನ ಡೆಸ್ಕ್

Recent Posts

ಮಕ್ಕಳ ಸಂಕಷ್ಟಕ್ಕೆ ಎಣೆಯಿಲ್ಲ

ಚಿರಂಜೀವಿ ಸಿ. ಹುಲ್ಲಹಳ್ಳಿ  ಮೈಸೂರು: ಸಂಕಷ್ಟದಲ್ಲಿರುವ ಮಕ್ಕಳಿಗೆ ತುರ್ತು ನೆರವು ನೀಡುವ ‘ಮಕ್ಕಳ ಸಹಾಯವಾಣಿ-೧೦೯೮’ಕ್ಕೆ ಜಿಲ್ಲೆಯಲ್ಲಿ ದೂರುಗಳ ಸುರಿಮಳೆಯಾಗುತ್ತಿದೆ. ಕಳೆದ…

41 mins ago

ಬೀದಿ ನಾಯಿಗಳ ಹಾವಳಿ; ಬಸವಳಿದ ಜನತೆ

ಚನ್ನೇಶ ಬಿ.ಇದರಮನಿ ಮೈಸೂರಿನ ಶ್ರೀರಾಂಪುರದಲ್ಲಿ ಆವರಿಸಿರುವ ಶ್ವಾನ ಭೀತಿ ಐದಾರು ಜನರಿಗೆ ಕಚ್ಚಿರುವ ನಾಯಿಗಳು; ಜನರ ಮನವಿಗೆ ಸ್ಪಂದಿಸದ ನಗರಪಾಲಿಕೆ:…

50 mins ago

ದರೋಡೆಗೆ ಪ್ರಶಸ್ತವಾಯಿತೇ ಬೈಪಾಸ್?

ಹೇಮಂತ್‌ಕುಮಾರ್ ಮಂಡ್ಯ: ಭೀಕರ ಅಪಘಾತಗಳ ಹೆಚ್ಚಳದಿಂದ ಕುಖ್ಯಾತಿ ಪಡೆದಿದ್ದ ಬೆಂಗಳೂರು-ಮೈಸೂರು ಹೆದ್ದಾರಿ-ಸರ್ವಿಸ್ ರಸ್ತೆಯು ಈಗ ದರೋಡೆಕೋರರ ತಾಣವಾಗಿ ಬದಲಾಗುತ್ತಿರುವುದು ಕಾರು,…

57 mins ago

ಹನೂರು| ಮೇಕೆ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…

13 hours ago

ಮಲೆ ಮಹದೇಶ್ವರನ ಹುಂಡಿಯಲ್ಲಿ 2.16 ಕೋಟಿ ರೂ. ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…

14 hours ago