ಮನರಂಜನೆ

ಬಿಗ್‌ಬಾಸ್‌ ಕನ್ನಡ 12ರ ಗ್ರ್ಯಾಂಡ್‌ ಓಪನಿಂಗ್‌ : ಸ್ಟೈಲಿಶ್‌ ಲುಕ್‌ನಲ್ಲಿ ಎಂಟ್ರಿ ಕೊಟ್ಟ ಕಿಚ್ಚ

ಬೆಂಗಳೂರು : ಕನ್ನಡದ ಬಹುನಿರೀಕ್ಷಿತ ರಿಯಾಲಿಟಿ ಶೋ ಬಿಗ್ ಬಾಸ್​ ಕನ್ನಡ ಸೀಸನ್ 12ಗೆ ಭಾನುವಾರ ಸಂಜೆ ಚಾಲನೆ ದೊರಕಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸ್ಟೈಲಿಶ್ ಲುಕ್​ನಲ್ಲಿ ಸ್ಟೇಜ್​ಗೆ ಎಂಟ್ರಿ ಕೊಟ್ಟಿದ್ದಾರೆ.

ಈ ಬಾರಿ ಬಿಗ್‌ಬಾಸ್‌ನ ದೊಡ್ಮನೆಯಂತು ಹೆಸರಿಗೆ ತಕ್ಕಂತೆ ಅರಮನೆಯಂತೆ ಕಂಗೊಳಿಸುತ್ತಿದೆ. ಕರ್ನಾಟಕದ ಶ್ರೀಮಂತ ಇತಿಹಾಸವನ್ನ ಪ್ರತಿಬಿಂಬಿಸುವಂತೆ ಮನೆಯ ವಿನ್ಯಾಸವನ್ನ ತೋರಿಸಲಾಗಿದೆ. ಮೈಸೂರು ದಸರಾದ ಸಂಕೇತವಾದ ಆನೆಯ ಚಿತ್ರಣಗಳು ಮನೆಯ ಎಂಟ್ರನ್ಸ್‌ನಲ್ಲೇ ಇಡಲಾಗಿದೆ.

ಬಿಗ್ ಬಾಸ್ ಗ್ರ್ಯಾಂಡ್ ಓಪನಿಂಗ್‌ಗೆ ಕಿಚ್ಚ ಸುದೀಪ್ ಸಖತ್ ಆಗಿಯೇ ರೆಡಿ ಆಗಿದ್ದಾರೆ. ಮಾರ್ಕ್ ಚಿತ್ರದ ಕರ್ಲಿ ಹೇರ್ ಸ್ಟೈಲ್ ಅಲ್ಲಿಯೇ ಮಿಂಚಿದ್ದಾರೆ. ಈ ಮೊದಲಿನ ಪ್ರೋಮೋದಲ್ಲಿ ಯಾವ ರೀತಿ ಮಿಂಚುತ್ತಿದ್ದರೋ ಅದೇ ರೀತಿನೇ ಇಲ್ಲೂ ಕಾಣಿಸುತ್ತಿದ್ದಾರೆ. ಝಗಮಗಿಸೋ ಕಪ್ಪು ಬಣ್ಣದ ಕಾಸ್ಟೂಮ್ ಧರಿಸಿದ್ದಾರೆ. ಬ್ಲ್ಯಾಕ್ ಥೀಮ್ ಅಲ್ಲಿಯೇ ಇಡೀ ಡ್ರೆಸ್ ರೆಡಿ ಆಗಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಸುದೀಪ್ ಒಬ್ಬೊಬ್ಬ ಸ್ಪರ್ಧಿಗಳನ್ನು ಮನೆಯೊಳಗೆ ಕಳುಹಿಸಲಿದ್ದಾರೆ.

ಇದನ್ನೂ ಓದಿ:-ಕಾಲ್ತುಳಿತ ದುರಂತ | ನಟ ವಿಜಯ್‌ ಬಂಧನಕ್ಕೆ ವ್ಯಾಪಕ ಒತ್ತಡ

ಒಂದು ಅರಮನೆಯನ್ನ ಉಳಿಸಿಕೊಳ್ಳೋದಕ್ಕೆ ಎಷ್ಟೋ ಯುದ್ದಗಳು ನಡೆದಿದೆ. ಈ ಅರಮನೆಯಲ್ಲಿ ತಮ್ಮನ್ನ ತಾವು ಉಳಿಸಿಕೊಳ್ಳೋದಕ್ಕೆ ಬಹಳ ಯುದ್ದಗಳು ನಡೆಯಲಿದೆ. ನಮ್ಮ ನಾಡಿಗೆ ದಸರಾ ಹಬ್ಬ ಶುರುವಾಗಿ, ಒಂದು ವಾರ ಆಯ್ತು. ನಮ್ಮ ಬಿಗ್‌ ಬಾಸ್‌ ಮನೆಯಲ್ಲಿ ಅಸಲಿ ಹಬ್ಬ ಇವಾಗ ಶುರು ಎಂದು ಕಿಚ್ಚ ಸುದೀಪ್ ಪ್ರೋಮೋದಲ್ಲಿ ಹೇಳಿರುವುದು ಈ ಸೀಸನ್​ ರೋಚಕತೆ ಮತ್ತಷ್ಟು ಹೆಚ್ಚಿಸಿದೆ.

ಅಲ್ಲದೆ, ಈ ಬಾರಿ ಬಿಗ್‌ ಬಾಸ್‌ ಲೋಗೋದಲ್ಲಿಯೂ ಕನ್ನಡದ ಸಂಖ್ಯೆಗಳನ್ನು ಬಳಸಲಾಗಿದೆ. ಬಿಗ್‌ಬಾಸ್‌ ಮನೆಯಲ್ಲಿ ಕನ್ನಡ, ಕರ್ನಾಟಕವೇ ಪ್ರಧಾನವಾಗಿದೆ. ಈ ಹಿಂದೆ ಇದೇ ವಿಚಾರವಾಗಿ ಸುದೀಪ್‌ ಬೇಸರ ಹೊರಹಾಕಿದ್ದರು. ಇದೀಗ ಈ ಬಿಗ್‌ ಬಾಸ್‌ ಕನ್ನಡಮಯ ಹಾಗೂ ಐತಿಹಾಸಿಕ ಕರ್ನಾಟಕದ ಬೀಡು ಥೀಮ್‌ನಲ್ಲಿ ವಿನ್ಯಾಸ ಮಾಡಲಾಗಿದೆ. ಇದನ್ನ ಕಂಡು ಅಭಿಮಾನಿಗಳಂತು ಫುಲ್ ಖುಷ್ ಆಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

4 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

4 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

4 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

7 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

7 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

7 hours ago