ಮನರಂಜನೆ

ಸೆ.28ರಿಂದ ‘ಬಿಗ್‍ ಬಾಸ್‍- ಸೀಸನ್‍ 12’ ಪ್ರಾರಂಭ: ಸುದೀಪ್‍ ನಿರೂಪಣೆ

‘ಬಿಗ್‍ ಬಾಸ್‍ – ಸೀಸನ್‍ 12’ರ ಪ್ರಾರಂಭ ಯಾವಾಗ ಎಂಬ ಪ್ರಶ್ನೆ ಎಲ್ಲರಲ್ಲೂ ಇದ್ದೇ ಇತ್ತು. ಅದಕ್ಕೆ ಕೊನೆಗೂ ಉತ್ತರ ಸಿಕ್ಕಿದ್ದು, ಸೆ.28ರಿಂದ ‘ಬಿಗ್‍ ಬಾಸ್‍’, ಕಲರ್ಸ್ ಕನ್ನಡದಲ್ಲಿ ಮತ್ತೆ ಪ್ರಾರಂಭವಾಗಲಿದೆ. ಹಾಗೆಂದು ಕಲರ್ಸ್ ಕನ್ನಡ, ಸೋಷಿಯಲ್‍ ಮೀಡಿಯಾದಲ್ಲಿ ಅಧಿಕೃತವಾಗಿ ಘೋಷಿಸಿದೆ.

‘ಬಿಗ್‍ ಬಾಸ್‍ – ಸೀಸನ್‍ 11’ ತಮ್ಮ ಕೊನೆಯ ಸೀಸನ್‍ ಆಗಲಿದೆ ಎಂದು ಕಳೆದ ವರ್ಷದ ಅಕ್ಟೋಬರ್‍ ತಿಂಗಳಲ್ಲೇ ಸುದೀಪ್‍ ಘೋಷಿಸಿದ್ದರು. ಈ ಬಾರಿಯ ಗ್ರಾಂಡ್‍ ಫಿನಾಲೆ ತಮ್ಮ ಕೊನೆಯ ಗ್ರಾಂಡ್‍ ಫಿನಾಲೆ ಆಗಲಿದೆ ಎಂದು ಸಹ ಸುದೀಪ್‍ ಹೇಳಿಕೊಂಡಿದ್ದರು. ಹೀಗಿರುವಾಗಲೇ, ‘ಬಿಗ್‍ ಬಾಸ್‍’ನ 12 ಸೀಸನ್‍ ನಡೆಸಿಕೊಡುವುದಕ್ಕೆ ಅವರು ಮುಂದಾಗಿದ್ದಾರೆ. ಬರೀ ಈ ವರ್ಷವಷ್ಟೇ ಅಲ್ಲ, ಇನ್ನೂ ನಾಲ್ಕು ಸೀಸನ್‍ಗಳ ನಿರೂಪಣೆ ಮಾಡಲಿದ್ದಾರಂತೆ.

ಇತ್ತೀಚೆಗೆ, ‘ಬಿಗ್‍ ಬಾಸ್‍ – ಸೀಸನ್‍ 12’ ಕಾರ್ಯಕ್ರಮದ ಪತ್ರಿಕಾಗೋಷ್ಠಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸುದೀಪ್‍, ‘ನಾನು ಕಾರ್ಯಕ್ರಮವನ್ನು ನಿರೂಪಿಸುವುದಿಲ್ಲ ಎಂದು ಕಳೆದ ವರ್ಷದ ಸೀಸನ್‍ ಪ್ರಾರಂಭದಲ್ಲೇ ಹೇಳಿದ್ದೆ. ಅದಕ್ಕೆ ಕಾರಣವಿತ್ತು. ಈಗ ವಾಪಸ್ಸು ಬರುತ್ತಿರುವುದಕ್ಕೂ ಕಾರಣವಿದೆ. ನಾನು ವಾಪಸ್ಸು ಬರುತ್ತಿರುವುದಕ್ಕೆ ಮುಖ್ಯ ಕಾರಣ, ಜನರ ಪ್ರೀತಿ. ಬಹಳಷ್ಟು ಜನ ನಾನು ಕಾರ್ಯಕ್ರಮವನ್ನು ಮುಂದುವರೆಸಬೇಕು ಎಂದು ಆಸೆ ಪಟ್ಟಿದ್ದಾರೆ. ಕಾರ್ಯಕ್ರಮ ಬೆಳೆಯುತ್ತಿರುವ ರೀತಿ ಮತ್ತು ಜನ ಅದನ್ನು ಪ್ರೀತಿಯಿಂದ ನೋಡುತ್ತಿರುವ ರೀತಿ ನೋಡಿ ನಾನು ವಾಪಸ್ಸು ಬರುವುದಕ್ಕೆ ಒಪ್ಪಿದೆ. ಕಳೆದ ಮೂರು ವರ್ಷಗಳಲ್ಲಿ ಕಾರ್ಯಕ್ರಮ ಬಹಳ ದೊಡ್ಡದಾಗಿ ಬೆಳೆದಿದೆ. ಜನ ಐಪಿಎಲ್‍ ಮಟ್ಟಕ್ಕೆ ಈ ಕಾರ್ಯಕ್ರಮವನ್ನು ನೋಡುತ್ತಾರೆ. ಈ ಕಾರ್ಯಕ್ರಮವನ್ನು ಇನ್ನಷ್ಟು ಚೆನ್ನಾಗಿ ರೂಪಿಸುವುದು ನಮ್ಮ ಜವಾಬ್ದಾರಿ ಸಹ ಹೌದು ಎಂದು ಹೇಳಿದ್ದರು.

ಸದ್ಯ ಬರೀ ಕಾರ್ಯಕ್ರಮದ ಪ್ರಾರಂಭದ ಘೋಷಣೆಯಾಗಿದ್ದು, ಈ ಕಾರ್ಯಕ್ರಮದಲ್ಲಿ ಯಾರೆಲ್ಲಾ ಭಾಗವಹಿಸುತ್ತಾರೆ, ವಿಶೇಷತೆಗಳೇನು ಎಂಬ ವಿಷಯಗಳ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬೀಳಬೇಕಿವೆ.

ಆಂದೋಲನ ಡೆಸ್ಕ್

Recent Posts

ರಾಮನಗರದ ರೈಲ್ವೆ ಪ್ರಯಾಣಿಕರಿಗೆ ಶುಭ ಸಮಾಚಾರ: ಏನದು ಗೊತ್ತಾ.?

ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್‌ ಎಕ್ಸ್‌ಪ್ರೆಸ್‌ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…

8 hours ago

ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್‌ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…

9 hours ago

ತಮಿಳುನಾಡು ಫಲಿತಾಂಶ ತುಂಬಾ ಆಶ್ವರ್ಯಕರವಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…

9 hours ago

ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್‌ ರಾಜೀನಾಮೆ

ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್‌ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…

10 hours ago

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಯುವಕನ ಕೊಲೆ

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್‌ ಠಾಣೆಯಿಂದ ಕೇವಲ…

10 hours ago

ಹನೂರು: ಪಂಪ್‌ಸೆಟ್‌ ಮೋಟಾರ್‌ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್‌ಗಳನ್ನು…

11 hours ago