ಮನರಂಜನೆ

ಸೆ.28ರಿಂದ ‘ಬಿಗ್‍ ಬಾಸ್‍- ಸೀಸನ್‍ 12’ ಪ್ರಾರಂಭ: ಸುದೀಪ್‍ ನಿರೂಪಣೆ

‘ಬಿಗ್‍ ಬಾಸ್‍ – ಸೀಸನ್‍ 12’ರ ಪ್ರಾರಂಭ ಯಾವಾಗ ಎಂಬ ಪ್ರಶ್ನೆ ಎಲ್ಲರಲ್ಲೂ ಇದ್ದೇ ಇತ್ತು. ಅದಕ್ಕೆ ಕೊನೆಗೂ ಉತ್ತರ ಸಿಕ್ಕಿದ್ದು, ಸೆ.28ರಿಂದ ‘ಬಿಗ್‍ ಬಾಸ್‍’, ಕಲರ್ಸ್ ಕನ್ನಡದಲ್ಲಿ ಮತ್ತೆ ಪ್ರಾರಂಭವಾಗಲಿದೆ. ಹಾಗೆಂದು ಕಲರ್ಸ್ ಕನ್ನಡ, ಸೋಷಿಯಲ್‍ ಮೀಡಿಯಾದಲ್ಲಿ ಅಧಿಕೃತವಾಗಿ ಘೋಷಿಸಿದೆ.

‘ಬಿಗ್‍ ಬಾಸ್‍ – ಸೀಸನ್‍ 11’ ತಮ್ಮ ಕೊನೆಯ ಸೀಸನ್‍ ಆಗಲಿದೆ ಎಂದು ಕಳೆದ ವರ್ಷದ ಅಕ್ಟೋಬರ್‍ ತಿಂಗಳಲ್ಲೇ ಸುದೀಪ್‍ ಘೋಷಿಸಿದ್ದರು. ಈ ಬಾರಿಯ ಗ್ರಾಂಡ್‍ ಫಿನಾಲೆ ತಮ್ಮ ಕೊನೆಯ ಗ್ರಾಂಡ್‍ ಫಿನಾಲೆ ಆಗಲಿದೆ ಎಂದು ಸಹ ಸುದೀಪ್‍ ಹೇಳಿಕೊಂಡಿದ್ದರು. ಹೀಗಿರುವಾಗಲೇ, ‘ಬಿಗ್‍ ಬಾಸ್‍’ನ 12 ಸೀಸನ್‍ ನಡೆಸಿಕೊಡುವುದಕ್ಕೆ ಅವರು ಮುಂದಾಗಿದ್ದಾರೆ. ಬರೀ ಈ ವರ್ಷವಷ್ಟೇ ಅಲ್ಲ, ಇನ್ನೂ ನಾಲ್ಕು ಸೀಸನ್‍ಗಳ ನಿರೂಪಣೆ ಮಾಡಲಿದ್ದಾರಂತೆ.

ಇತ್ತೀಚೆಗೆ, ‘ಬಿಗ್‍ ಬಾಸ್‍ – ಸೀಸನ್‍ 12’ ಕಾರ್ಯಕ್ರಮದ ಪತ್ರಿಕಾಗೋಷ್ಠಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸುದೀಪ್‍, ‘ನಾನು ಕಾರ್ಯಕ್ರಮವನ್ನು ನಿರೂಪಿಸುವುದಿಲ್ಲ ಎಂದು ಕಳೆದ ವರ್ಷದ ಸೀಸನ್‍ ಪ್ರಾರಂಭದಲ್ಲೇ ಹೇಳಿದ್ದೆ. ಅದಕ್ಕೆ ಕಾರಣವಿತ್ತು. ಈಗ ವಾಪಸ್ಸು ಬರುತ್ತಿರುವುದಕ್ಕೂ ಕಾರಣವಿದೆ. ನಾನು ವಾಪಸ್ಸು ಬರುತ್ತಿರುವುದಕ್ಕೆ ಮುಖ್ಯ ಕಾರಣ, ಜನರ ಪ್ರೀತಿ. ಬಹಳಷ್ಟು ಜನ ನಾನು ಕಾರ್ಯಕ್ರಮವನ್ನು ಮುಂದುವರೆಸಬೇಕು ಎಂದು ಆಸೆ ಪಟ್ಟಿದ್ದಾರೆ. ಕಾರ್ಯಕ್ರಮ ಬೆಳೆಯುತ್ತಿರುವ ರೀತಿ ಮತ್ತು ಜನ ಅದನ್ನು ಪ್ರೀತಿಯಿಂದ ನೋಡುತ್ತಿರುವ ರೀತಿ ನೋಡಿ ನಾನು ವಾಪಸ್ಸು ಬರುವುದಕ್ಕೆ ಒಪ್ಪಿದೆ. ಕಳೆದ ಮೂರು ವರ್ಷಗಳಲ್ಲಿ ಕಾರ್ಯಕ್ರಮ ಬಹಳ ದೊಡ್ಡದಾಗಿ ಬೆಳೆದಿದೆ. ಜನ ಐಪಿಎಲ್‍ ಮಟ್ಟಕ್ಕೆ ಈ ಕಾರ್ಯಕ್ರಮವನ್ನು ನೋಡುತ್ತಾರೆ. ಈ ಕಾರ್ಯಕ್ರಮವನ್ನು ಇನ್ನಷ್ಟು ಚೆನ್ನಾಗಿ ರೂಪಿಸುವುದು ನಮ್ಮ ಜವಾಬ್ದಾರಿ ಸಹ ಹೌದು ಎಂದು ಹೇಳಿದ್ದರು.

ಸದ್ಯ ಬರೀ ಕಾರ್ಯಕ್ರಮದ ಪ್ರಾರಂಭದ ಘೋಷಣೆಯಾಗಿದ್ದು, ಈ ಕಾರ್ಯಕ್ರಮದಲ್ಲಿ ಯಾರೆಲ್ಲಾ ಭಾಗವಹಿಸುತ್ತಾರೆ, ವಿಶೇಷತೆಗಳೇನು ಎಂಬ ವಿಷಯಗಳ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬೀಳಬೇಕಿವೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

14 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

14 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

14 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

14 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

15 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

15 hours ago