ಮನರಂಜನೆ

ವಿಷ್ಣುವರ್ಧನ್‍ ಅಭಿಮಾನ ಕ್ಷೇತ್ರದ ನೀಲಿನಕ್ಷೆ ಅನಾವರಣ …

ಡಾ. ವಿಷ್ಣುವರ್ಧನ್‌ ಅವರ 75ನೇ ಹುಟ್ಟುಹಬ್ಬದ ಅಂಗವಾಗಿ ಬೆಂಗಳೂರಿನಲ್ಲಿ ಅರ್ಧ ಎಕರೆ ಜಾಗದಲ್ಲಿ ಸಿದ್ಧವಾಗಲಿರುವ ಡಾ. ವಿಷ್ಣುವರ್ಧನ ಅಭಿಮಾನ ಕ್ಷೇತ್ರದ ನೀಲಿ ನಕ್ಷೆ ಬಿಡುಗಡೆಯಾಗಿದೆ.

ವಿಷ್ಣುವರ್ಧನ್‍ ಅವರ ಹುಟ್ಟುಹಬ್ಬದ ಪ್ರಯುಕ್ತ ಅವರ ಸ್ಮಾರಕದ ನೀಲಿನಕ್ಷೆಯನ್ನು ಬಿಡುಗಡೆ ಮಾಡುವುದಾಗಿ ಡಾ. ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್‍ ಹೇಳಿದ್ದರು. ಅದರಂತೆ, ಗುರುವಾರ ಸಂಜೆ ಕಲಾವಿದರ ಸಂಘದಲ್ಲಿ ನಡೆದ ಸಮಾರಂಭದಲ್ಲಿ ಅವರು ನೀಲಿನಕ್ಷೆ ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ: ಎಂಎಲ್‌ಸಿ ವಿಶ್ವನಾಥ್‌ರನ್ನು ತರಾಟೆಗೆ ತೆಗೆದುಕೊಂಡ ಕುರುಬ ಸಮುದಾಯದ ಮುಖಂಡರು

ಸುದೀಪ್‌, ಉದ್ಯಮಿ ಅಶೋಕ್‌ ಖೇಣಿ ಹಾಗೂ ಡಾ. ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್‌ ಅವರು ಜೊತೆಗೂಡಿ ಈ ಅಭಿಮಾನಿ ಕ್ಷೇತ್ರಕ್ಕೆ ಅಗತ್ಯವಿರುವ ಜಾಗವನ್ನು ಖರೀದಿ ಮಾಡಿದ್ದಾರೆ. ಈ ಜಾಗದಲ್ಲಿ ಡಾ. ವಿಷ್ಣು ಅವರ 25 ಅಡಿಯ ಪ್ರತಿಮೆ, ಧ್ಯಾನ ಮಂದಿರ, ಪುಸ್ತಕ ಭಂಡಾರ, ಫೋಟೋ ಗ್ಯಾಲರಿಯನ್ನು ನಿರ್ಮಾಣ ಮಾಡಲಾಗುತ್ತದೆ. ಈ ಸ್ಮಾರಕವನ್ನು ಜ್ಞಾನ, ಧ್ಯಾನ ಮತ್ತು ದರ್ಶನ ಎಂಬ ಪರಿಕಲ್ಪನೆಯಡಿ ನಿರ್ಮಾಣ ಮಾಡಲಾಗುತ್ತಿದೆ.

ವಿಶೇಷವೆಂದರೆ, ಇಲ್ಲಿ ಧ್ಯಾನ ಮಂದಿರದಲ್ಲಿ ವಿಷ್ಣುವರ್ಧನ್‍ ಅವರು ಧ್ಯಾನಸ್ಥ ಭಂಗಿಯಲ್ಲಿರುವ ಪ್ರತಿಮೆ ಇರಲಿದ್ದು, ಮಧ್ಯಾಹ್ನ ಎರಡು ಗಂಟೆ ಸಮಯಕ್ಕೆ ಸೂರ್ಯನ ಕಿರಣಗಳು ವಿಷ್ಣು ಅವರ ಅಮೃತ ಶಿಲೆಯ ಪ್ರತಿಮೆಯ ಮೇಲೆ ಬೀಳುವಂತೆ ಧ್ಯಾನ ಮಂದಿರವನ್ನು ವಿನ್ಯಾಸ ಮಾಡಲಾಗುತ್ತದೆ. ಹಾಗೆಯೇ, ಪ್ರತಿ ಸಂಜೆ 6.30ಕ್ಕೆ ಲೇಸರ್‌ ಶೋ ನಡೆಯುವಂತೆ ವ್ಯವಸ್ಥೆಯನ್ನು ಮಾಡಲಾಗುತ್ತಿದೆ.

ನೀಲಿ ನಕ್ಷೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ವೀರಕಪುತ್ರ ಶ್ರೀನಿವಾಸ್‌, ‘ಡಾ. ವಿಷ್ಣುವರ್ಧನ ಅಭಿಮಾನ ಕ್ಷೇತ್ರ ನಿರ್ಮಾಣವನ್ನು ಮುಂದಿನ ಒಂದು ವರ್ಷದಲ್ಲಿ ಪೂರ್ಣಗೊಳಿಸಲಾಗುವುದು. ಈಗ ಜಾಗದ ಕುರಿತು ಯಾವುದೇ ಮಾಹಿತಿ ನೀಡಲಾಗದು. ಏಕೆಂದರೆ, ಆ ಜಾಗದ ಮಾಹಿತಿ ಸಿಕ್ಕಿದ ತಕ್ಷಣ ವಿಷ್ಣುವರ್ಧನ್‌ ಅವರ ವಿಷಯದಲ್ಲಿ ವಿವಾದಗಳು ಇದ್ದೇ ಇರುತ್ತವೆ ಎಂಬ ಕಾರಣಕ್ಕೆ ಮುಂಜಾಗ್ರತೆ ಕ್ರಮವಾಗಿ ಆ ಜಾಗವನ್ನು ಈಗ ಬಹಿರಂಗಪಡಿಸಲಾಗುವುದಿಲ್ಲ. ಇದರ ಖರ್ಚು ವೆಚ್ಚಗಳು ಹಾಗೂ ಹಣಕಾಸು ನಿರ್ವಹಣೆ ಮುಂತಾದ ವಿಷಯಗಳು ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ನಡೆಯಲಿವೆ’ ಎಂದು ಹೇಳಿದರು.

ಇದು ಅಭಿಮಾನಿಗಳೇ ನಿರ್ಮಿಸುತ್ತಿರುವ ದೇಶದ ಮೊಟ್ಟ ಮೊದಲ ಸ್ಮಾರಕ ಎನ್ನುವ ಅವರು, ‘ಒಳಗೆ ಹೋದರೆ ಎರಡು ತಾಸು ಅಲ್ಲಿರುವಂತೆ ಹಿಡಿದಿಟ್ಟುಕೊಳ್ಳುವಂತೆ ಸ್ಮಾರಕ ನಿರ್ಮಾಣ ಮಾಡಲಾಗುತ್ತಿದೆ. ಪ್ರತಿ ನವೆಂಬರ್‍ ಒಂದರಂದು ರಾಜ್ಯೋತ್ಸವದ ಪ್ರಯುಕ್ತ ಧ್ವಜಾ ರೋಹಣ ನಡೆಯಲಿದೆ. ಮುಂದಿನ ಒಂದು ವರ್ಷದಲ್ಲಿ ವಿಷ್ಣುವರ್ಧನ್‍ ಅಭಿಮಾನ ಕ್ಷೇತ್ರದ ಅನಾವರಣವಾಗಲಿದೆ’ ಎಂದರು.

ಆಂದೋಲನ ಡೆಸ್ಕ್

Recent Posts

ಅಮೆರಿಕದೊಂದಿಗೆ ಮಾತುಕತೆ ಇಲ್ಲ, ದೀರ್ಘಕಾಲದ ಯುದ್ಧಕ್ಕೆ ಸಿದ್ಧ ; ಇರಾನ್‌

ಹೊಸದಿಲ್ಲಿ : ಇರಾನ್‌ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೆಯನ್ನು ತಳ್ಳಿ ಹಾಕಿರುವ…

10 mins ago

ನಂಜನಗೂಡು | ನಾಲೆಯಲ್ಲಿ ನವಜಾತ ಶಿಶು ಪತ್ತೆ

ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…

59 mins ago

ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ : ಮುಖ್ಯಮಂತ್ರಿ

ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…

2 hours ago

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

3 hours ago

ಮ.ಬೆಟ್ಟ | ಯುಗಾದಿ ಜಾತ್ರೆಗೆ ಪಾದಯಾತ್ರೆಯಲ್ಲಿ ಬರುತ್ತಿರುವ ಭಕ್ತರು

ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ…

3 hours ago

ಮೈಸೂರು | ಕೆಂಪೇಗೌಡ ವೃತ್ತ ಕಾಮಗಾರಿ ಪರಿಶೀಲಿಸಿದ ಸಂಸದ ಯದುವೀರ್‌

ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್…

4 hours ago