ಡಾ. ವಿಷ್ಣುವರ್ಧನ್ ಅವರ 75ನೇ ಹುಟ್ಟುಹಬ್ಬದ ಅಂಗವಾಗಿ ಬೆಂಗಳೂರಿನಲ್ಲಿ ಅರ್ಧ ಎಕರೆ ಜಾಗದಲ್ಲಿ ಸಿದ್ಧವಾಗಲಿರುವ ಡಾ. ವಿಷ್ಣುವರ್ಧನ ಅಭಿಮಾನ ಕ್ಷೇತ್ರದ ನೀಲಿ ನಕ್ಷೆ ಬಿಡುಗಡೆಯಾಗಿದೆ.
ವಿಷ್ಣುವರ್ಧನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಅವರ ಸ್ಮಾರಕದ ನೀಲಿನಕ್ಷೆಯನ್ನು ಬಿಡುಗಡೆ ಮಾಡುವುದಾಗಿ ಡಾ. ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಹೇಳಿದ್ದರು. ಅದರಂತೆ, ಗುರುವಾರ ಸಂಜೆ ಕಲಾವಿದರ ಸಂಘದಲ್ಲಿ ನಡೆದ ಸಮಾರಂಭದಲ್ಲಿ ಅವರು ನೀಲಿನಕ್ಷೆ ಬಿಡುಗಡೆ ಮಾಡಿದ್ದಾರೆ.
ಇದನ್ನೂ ಓದಿ: ಎಂಎಲ್ಸಿ ವಿಶ್ವನಾಥ್ರನ್ನು ತರಾಟೆಗೆ ತೆಗೆದುಕೊಂಡ ಕುರುಬ ಸಮುದಾಯದ ಮುಖಂಡರು
ಸುದೀಪ್, ಉದ್ಯಮಿ ಅಶೋಕ್ ಖೇಣಿ ಹಾಗೂ ಡಾ. ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಅವರು ಜೊತೆಗೂಡಿ ಈ ಅಭಿಮಾನಿ ಕ್ಷೇತ್ರಕ್ಕೆ ಅಗತ್ಯವಿರುವ ಜಾಗವನ್ನು ಖರೀದಿ ಮಾಡಿದ್ದಾರೆ. ಈ ಜಾಗದಲ್ಲಿ ಡಾ. ವಿಷ್ಣು ಅವರ 25 ಅಡಿಯ ಪ್ರತಿಮೆ, ಧ್ಯಾನ ಮಂದಿರ, ಪುಸ್ತಕ ಭಂಡಾರ, ಫೋಟೋ ಗ್ಯಾಲರಿಯನ್ನು ನಿರ್ಮಾಣ ಮಾಡಲಾಗುತ್ತದೆ. ಈ ಸ್ಮಾರಕವನ್ನು ಜ್ಞಾನ, ಧ್ಯಾನ ಮತ್ತು ದರ್ಶನ ಎಂಬ ಪರಿಕಲ್ಪನೆಯಡಿ ನಿರ್ಮಾಣ ಮಾಡಲಾಗುತ್ತಿದೆ.
ವಿಶೇಷವೆಂದರೆ, ಇಲ್ಲಿ ಧ್ಯಾನ ಮಂದಿರದಲ್ಲಿ ವಿಷ್ಣುವರ್ಧನ್ ಅವರು ಧ್ಯಾನಸ್ಥ ಭಂಗಿಯಲ್ಲಿರುವ ಪ್ರತಿಮೆ ಇರಲಿದ್ದು, ಮಧ್ಯಾಹ್ನ ಎರಡು ಗಂಟೆ ಸಮಯಕ್ಕೆ ಸೂರ್ಯನ ಕಿರಣಗಳು ವಿಷ್ಣು ಅವರ ಅಮೃತ ಶಿಲೆಯ ಪ್ರತಿಮೆಯ ಮೇಲೆ ಬೀಳುವಂತೆ ಧ್ಯಾನ ಮಂದಿರವನ್ನು ವಿನ್ಯಾಸ ಮಾಡಲಾಗುತ್ತದೆ. ಹಾಗೆಯೇ, ಪ್ರತಿ ಸಂಜೆ 6.30ಕ್ಕೆ ಲೇಸರ್ ಶೋ ನಡೆಯುವಂತೆ ವ್ಯವಸ್ಥೆಯನ್ನು ಮಾಡಲಾಗುತ್ತಿದೆ.
ನೀಲಿ ನಕ್ಷೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ವೀರಕಪುತ್ರ ಶ್ರೀನಿವಾಸ್, ‘ಡಾ. ವಿಷ್ಣುವರ್ಧನ ಅಭಿಮಾನ ಕ್ಷೇತ್ರ ನಿರ್ಮಾಣವನ್ನು ಮುಂದಿನ ಒಂದು ವರ್ಷದಲ್ಲಿ ಪೂರ್ಣಗೊಳಿಸಲಾಗುವುದು. ಈಗ ಜಾಗದ ಕುರಿತು ಯಾವುದೇ ಮಾಹಿತಿ ನೀಡಲಾಗದು. ಏಕೆಂದರೆ, ಆ ಜಾಗದ ಮಾಹಿತಿ ಸಿಕ್ಕಿದ ತಕ್ಷಣ ವಿಷ್ಣುವರ್ಧನ್ ಅವರ ವಿಷಯದಲ್ಲಿ ವಿವಾದಗಳು ಇದ್ದೇ ಇರುತ್ತವೆ ಎಂಬ ಕಾರಣಕ್ಕೆ ಮುಂಜಾಗ್ರತೆ ಕ್ರಮವಾಗಿ ಆ ಜಾಗವನ್ನು ಈಗ ಬಹಿರಂಗಪಡಿಸಲಾಗುವುದಿಲ್ಲ. ಇದರ ಖರ್ಚು ವೆಚ್ಚಗಳು ಹಾಗೂ ಹಣಕಾಸು ನಿರ್ವಹಣೆ ಮುಂತಾದ ವಿಷಯಗಳು ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ನಡೆಯಲಿವೆ’ ಎಂದು ಹೇಳಿದರು.
ಇದು ಅಭಿಮಾನಿಗಳೇ ನಿರ್ಮಿಸುತ್ತಿರುವ ದೇಶದ ಮೊಟ್ಟ ಮೊದಲ ಸ್ಮಾರಕ ಎನ್ನುವ ಅವರು, ‘ಒಳಗೆ ಹೋದರೆ ಎರಡು ತಾಸು ಅಲ್ಲಿರುವಂತೆ ಹಿಡಿದಿಟ್ಟುಕೊಳ್ಳುವಂತೆ ಸ್ಮಾರಕ ನಿರ್ಮಾಣ ಮಾಡಲಾಗುತ್ತಿದೆ. ಪ್ರತಿ ನವೆಂಬರ್ ಒಂದರಂದು ರಾಜ್ಯೋತ್ಸವದ ಪ್ರಯುಕ್ತ ಧ್ವಜಾ ರೋಹಣ ನಡೆಯಲಿದೆ. ಮುಂದಿನ ಒಂದು ವರ್ಷದಲ್ಲಿ ವಿಷ್ಣುವರ್ಧನ್ ಅಭಿಮಾನ ಕ್ಷೇತ್ರದ ಅನಾವರಣವಾಗಲಿದೆ’ ಎಂದರು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…