ಮನರಂಜನೆ

ವಿಷ್ಣುವರ್ಧನ್‍ ಅಭಿಮಾನ ಕ್ಷೇತ್ರದ ನೀಲಿನಕ್ಷೆ ಅನಾವರಣ …

ಡಾ. ವಿಷ್ಣುವರ್ಧನ್‌ ಅವರ 75ನೇ ಹುಟ್ಟುಹಬ್ಬದ ಅಂಗವಾಗಿ ಬೆಂಗಳೂರಿನಲ್ಲಿ ಅರ್ಧ ಎಕರೆ ಜಾಗದಲ್ಲಿ ಸಿದ್ಧವಾಗಲಿರುವ ಡಾ. ವಿಷ್ಣುವರ್ಧನ ಅಭಿಮಾನ ಕ್ಷೇತ್ರದ ನೀಲಿ ನಕ್ಷೆ ಬಿಡುಗಡೆಯಾಗಿದೆ.

ವಿಷ್ಣುವರ್ಧನ್‍ ಅವರ ಹುಟ್ಟುಹಬ್ಬದ ಪ್ರಯುಕ್ತ ಅವರ ಸ್ಮಾರಕದ ನೀಲಿನಕ್ಷೆಯನ್ನು ಬಿಡುಗಡೆ ಮಾಡುವುದಾಗಿ ಡಾ. ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್‍ ಹೇಳಿದ್ದರು. ಅದರಂತೆ, ಗುರುವಾರ ಸಂಜೆ ಕಲಾವಿದರ ಸಂಘದಲ್ಲಿ ನಡೆದ ಸಮಾರಂಭದಲ್ಲಿ ಅವರು ನೀಲಿನಕ್ಷೆ ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ: ಎಂಎಲ್‌ಸಿ ವಿಶ್ವನಾಥ್‌ರನ್ನು ತರಾಟೆಗೆ ತೆಗೆದುಕೊಂಡ ಕುರುಬ ಸಮುದಾಯದ ಮುಖಂಡರು

ಸುದೀಪ್‌, ಉದ್ಯಮಿ ಅಶೋಕ್‌ ಖೇಣಿ ಹಾಗೂ ಡಾ. ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್‌ ಅವರು ಜೊತೆಗೂಡಿ ಈ ಅಭಿಮಾನಿ ಕ್ಷೇತ್ರಕ್ಕೆ ಅಗತ್ಯವಿರುವ ಜಾಗವನ್ನು ಖರೀದಿ ಮಾಡಿದ್ದಾರೆ. ಈ ಜಾಗದಲ್ಲಿ ಡಾ. ವಿಷ್ಣು ಅವರ 25 ಅಡಿಯ ಪ್ರತಿಮೆ, ಧ್ಯಾನ ಮಂದಿರ, ಪುಸ್ತಕ ಭಂಡಾರ, ಫೋಟೋ ಗ್ಯಾಲರಿಯನ್ನು ನಿರ್ಮಾಣ ಮಾಡಲಾಗುತ್ತದೆ. ಈ ಸ್ಮಾರಕವನ್ನು ಜ್ಞಾನ, ಧ್ಯಾನ ಮತ್ತು ದರ್ಶನ ಎಂಬ ಪರಿಕಲ್ಪನೆಯಡಿ ನಿರ್ಮಾಣ ಮಾಡಲಾಗುತ್ತಿದೆ.

ವಿಶೇಷವೆಂದರೆ, ಇಲ್ಲಿ ಧ್ಯಾನ ಮಂದಿರದಲ್ಲಿ ವಿಷ್ಣುವರ್ಧನ್‍ ಅವರು ಧ್ಯಾನಸ್ಥ ಭಂಗಿಯಲ್ಲಿರುವ ಪ್ರತಿಮೆ ಇರಲಿದ್ದು, ಮಧ್ಯಾಹ್ನ ಎರಡು ಗಂಟೆ ಸಮಯಕ್ಕೆ ಸೂರ್ಯನ ಕಿರಣಗಳು ವಿಷ್ಣು ಅವರ ಅಮೃತ ಶಿಲೆಯ ಪ್ರತಿಮೆಯ ಮೇಲೆ ಬೀಳುವಂತೆ ಧ್ಯಾನ ಮಂದಿರವನ್ನು ವಿನ್ಯಾಸ ಮಾಡಲಾಗುತ್ತದೆ. ಹಾಗೆಯೇ, ಪ್ರತಿ ಸಂಜೆ 6.30ಕ್ಕೆ ಲೇಸರ್‌ ಶೋ ನಡೆಯುವಂತೆ ವ್ಯವಸ್ಥೆಯನ್ನು ಮಾಡಲಾಗುತ್ತಿದೆ.

ನೀಲಿ ನಕ್ಷೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ವೀರಕಪುತ್ರ ಶ್ರೀನಿವಾಸ್‌, ‘ಡಾ. ವಿಷ್ಣುವರ್ಧನ ಅಭಿಮಾನ ಕ್ಷೇತ್ರ ನಿರ್ಮಾಣವನ್ನು ಮುಂದಿನ ಒಂದು ವರ್ಷದಲ್ಲಿ ಪೂರ್ಣಗೊಳಿಸಲಾಗುವುದು. ಈಗ ಜಾಗದ ಕುರಿತು ಯಾವುದೇ ಮಾಹಿತಿ ನೀಡಲಾಗದು. ಏಕೆಂದರೆ, ಆ ಜಾಗದ ಮಾಹಿತಿ ಸಿಕ್ಕಿದ ತಕ್ಷಣ ವಿಷ್ಣುವರ್ಧನ್‌ ಅವರ ವಿಷಯದಲ್ಲಿ ವಿವಾದಗಳು ಇದ್ದೇ ಇರುತ್ತವೆ ಎಂಬ ಕಾರಣಕ್ಕೆ ಮುಂಜಾಗ್ರತೆ ಕ್ರಮವಾಗಿ ಆ ಜಾಗವನ್ನು ಈಗ ಬಹಿರಂಗಪಡಿಸಲಾಗುವುದಿಲ್ಲ. ಇದರ ಖರ್ಚು ವೆಚ್ಚಗಳು ಹಾಗೂ ಹಣಕಾಸು ನಿರ್ವಹಣೆ ಮುಂತಾದ ವಿಷಯಗಳು ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ನಡೆಯಲಿವೆ’ ಎಂದು ಹೇಳಿದರು.

ಇದು ಅಭಿಮಾನಿಗಳೇ ನಿರ್ಮಿಸುತ್ತಿರುವ ದೇಶದ ಮೊಟ್ಟ ಮೊದಲ ಸ್ಮಾರಕ ಎನ್ನುವ ಅವರು, ‘ಒಳಗೆ ಹೋದರೆ ಎರಡು ತಾಸು ಅಲ್ಲಿರುವಂತೆ ಹಿಡಿದಿಟ್ಟುಕೊಳ್ಳುವಂತೆ ಸ್ಮಾರಕ ನಿರ್ಮಾಣ ಮಾಡಲಾಗುತ್ತಿದೆ. ಪ್ರತಿ ನವೆಂಬರ್‍ ಒಂದರಂದು ರಾಜ್ಯೋತ್ಸವದ ಪ್ರಯುಕ್ತ ಧ್ವಜಾ ರೋಹಣ ನಡೆಯಲಿದೆ. ಮುಂದಿನ ಒಂದು ವರ್ಷದಲ್ಲಿ ವಿಷ್ಣುವರ್ಧನ್‍ ಅಭಿಮಾನ ಕ್ಷೇತ್ರದ ಅನಾವರಣವಾಗಲಿದೆ’ ಎಂದರು.

ಆಂದೋಲನ ಡೆಸ್ಕ್

Recent Posts

ಅಕಾಲಿಕ ಮಳೆ; ಮಾವು ಇಳುವರಿ ಕುಂಠಿತ

ಚಿರಂಜೀವಿ ಸಿ. ಹುಲ್ಲಹಳ್ಳಿ ಬೆಳೆಗಾರ ಕಂಗಾಲು; ನಷ್ಟಕ್ಕೆ ಪರಿಹಾರ ಕಲ್ಪಿಸಲು ರೈತರ ಒತ್ತಾಯ ಮೈಸೂರು: ಮಳೆ ಕೊರತೆ ಮತ್ತು ಹವಾಮಾನ ವೈಪರೀತ್ಯದಿಂದಾಗಿ…

10 mins ago

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

10 hours ago

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

14 hours ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

14 hours ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

15 hours ago