ಮನರಂಜನೆ

ವಿಜಯ್‍ ಕೊನೆಯ ಚಿತ್ರಕ್ಕೆ ವಿಲನ್‍ ಆದ ಬಾಬಿ ಡಿಯೋಲ್‍

ತಮಿಳು ನಟ ‘ಇಳಯ ದಳಪತಿ’ ವಿಜಯ್‍ ಅಭಿನಯದಲ್ಲಿ ಕನ್ನಡದ ಕೆವಿಎನ್‍ ಪ್ರೊಡಕ್ಷನ್ಸ್ ಸಂಸ್ಥೆಯ ವೆಂಕಟ್ ‍ಕೆ. ನಾರಾಯಣ್‍ ಒಂದು ಚಿತ್ರ ನಿರ್ಮಿಸುತ್ತಿರುವುದು ಗೊತ್ತೇ ಇದೆ. ಇತ್ತೀಚೆಗಷ್ಟೇ ಚಿತ್ರದ ಘೋಷಣೆಯೂ ಆಗಿದೆ. ಇದೀಗ ಈ ಚಿತ್ರದಲ್ಲಿ ಬಾಲಿವುಡ್‍ ನಟ ಬಾಬ್ಬಿ ಡಿಯೋಲ್‍ ಖಳನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಇದೆ.

ಬಾಬ್ಬಿ ಡಿಯೋಲ್‍ ಕಳೆದ 29 ವರ್ಷಗಳಿಂದ ಚಿತ್ರರಂಗದಲ್ಲಿದ್ದಾರೆ. 1995ರಲ್ಲಿ ಬಿಡುಗಡೆಯಾದ ‘ಬರ್ಸಾತ್‍’ ಚಿತ್ರದ ಮೂಲಕ ಹೀರೋ ಆದ ಅವರು, ಮುಂದಿನ ಒಂದು ದಶಕ ಸತತವಾಗಿ ಚಿತ್ರಗಳಲ್ಲಿ ನಾಯಕನಾಗಿ ಕಾಣಿಸಿಕೊಂಡರು. ಹಲವು ಚಿತ್ರಗಳ ಸೋಲು ಮತ್ತು ಮಾಸಿದ ಜನಪ್ರಿಯತೆಯಿಂದಾಗಿ ಕ್ರಮೇಣ ಅವರು ನಟಿಸಿದ ಚಿತ್ರಗಳ ಸಂಖ್ಯೆ ಕಡಿಮೆಯಾಯಿತು.

ಹೀಗಿರುವಾಗಲೇ, ಕಳೆದ ವರ್ಷ ಬಿಡುಗಡೆಯಾದ ರಣಬೀರ್‍ ಕಪೂರ್‍ ಅಭಿನಯದ ‘ಅನಿಮಲ್‍’ ಚಿತ್ರದಲ್ಲಿ ಅವರು ಮೊದಲ ಬಾರಿಗೆ ವಿಲನ್‍ ಆಗಿ ಕಾಣಿಸಿಕೊಂಡರು. ಈ ಚಿತ್ರ ದೊಡ್ಡ ಯಶಸ್ಸು ಪಡೆಯುವುದರ ಜೊತೆಗೆ, ಅದರಲ್ಲಿನ ಅವರ ಅಬ್ರಾರ್‍ ಪಾತ್ರ ಹಿಟ್ಟ ಆಯಿತು. ಅಲ್ಲಿಂದ ಬಾಬ್ಬಿ ಬೇಡಿಕೆಯ ನಟನಾಗಿದ್ದಾರೆ. ತೆಲುಗಿನ ‘ಹರಿಹರ ವೀರಮಲ್ಲು’ ಚಿತ್ರದಲ್ಲಿ ನಟಿಸಿದ ಅವರು, ತಮಿಳಿನ ‘ಕಂಗುವಾ’ದಲ್ಲೂ ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಂಡರು. ಈಗ ವಿಜಯ್‍ ಅಭಿನಯದ 69ನೇ ಚಿತ್ರದಲ್ಲೂ ಅವರು ವಿಲನ್‍ ಪಾತ್ರ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಹೆಸರಿಡದ ಚಿತ್ರವನ್ನು ಎಚ್‍. ವಿನೋದ್‍ ನಿರ್ದೇಶನ ಮಾಡುತ್ತಿದ್ದಾರೆ. 500 ಕೋಟಿಗೂ ಅಧಿಕ ಬಜೆಟ್ ನಲ್ಲಿ ಈ ಚಿತ್ರ ತಯಾರಾಗುತ್ತಿದ್ದು, ವಿಜಯ್ ಚಿತ್ರಬದುಕಿನ ಕೊನೆಯ ಚಿತ್ರವಾಗಲಿದೆ ಎಂದು ಹೇಳಲಾಗುತ್ತಿದೆ. ವಿಜಯ್‍ ಈಗಾಗಲೇ ‘ತಮಿಳಿಗ ವೆಟ್ರಿ ಕಳಗಂ’ ಎಂಬ ರಾಜಕೀಯ ಪಕ್ಷವೊಂದನ್ನು ಸ್ಥಾಪಿಸಿದ್ದು, ಈ ಚಿತ್ರದ ನಂತರ ಅವರು ಪೂರ್ಣಪ್ರಮಾಣವಾಗಿ ರಾಜಕೀಯದಲ್ಲಿ ತೊಡಗಿಸಿಕೊಳ್ಳಲಿದ್ದಾರಂತೆ. ವಿಜಯ್ ರಾಜಕೀಯ ಜೀವನಕ್ಕೆ ಹತ್ತಿರವಿರುವ ಕಥೆ ಈ ಚಿತ್ರದಲ್ಲಿದ್ದು, ವಿಜಯ್ ರಾಜಕೀಯ ಭವಿಷ್ಯಕ್ಕೆ ಈ ಚಿತ್ರ ಭವ್ಯ ಮೆಟ್ಟಿಲಾಗಲಿದೆ ಎಂಬ ಸುದ್ದಿ ಇದೆ.

ಕೆವಿಎನ್‍ ಪ್ರೊಡಕ್ಷನ್ಸ್ ಸಂಸ್ಥೆಯು ಸದ್ಯ ಧ್ರುವ ಸರ್ಜಾ ಅಭಿನಯದ ‘ಕೆಡಿ – ದಿ ಡೆವಿಲ್‍’ ಮತ್ತು ಯಶ್‍ ಅಭಿನಯದ ‘ಟಾಕ್ಸಿಕ್‍’ ಚಿತ್ರಗಳನ್ನು ನಿರ್ಮಿಸುತ್ತಿದೆ. ಇವೆರಡೂ ಚಿತ್ರಗಳು ಪ್ಯಾನ್‍ ಇಂಡಿಯಾ ಚಿತ್ರಗಳಾಗಿದ್ದು, ಇದರ ಜೊತೆಗೆ ತಮಿಳಿನಲ್ಲಿ ದೊಡ್ಡ ಬಜೆಟ್‍ನ ಚಿತ್ರವೊಂದನ್ನು ನಿರ್ಮಿಸುವುದಕ್ಕೆ ಸಜ್ಜಾಗಿದೆ.

ಭೂಮಿಕಾ

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 mins ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago