ಮನರಂಜನೆ

ವಿಜಯ್‍ ಕೊನೆಯ ಚಿತ್ರಕ್ಕೆ ವಿಲನ್‍ ಆದ ಬಾಬಿ ಡಿಯೋಲ್‍

ತಮಿಳು ನಟ ‘ಇಳಯ ದಳಪತಿ’ ವಿಜಯ್‍ ಅಭಿನಯದಲ್ಲಿ ಕನ್ನಡದ ಕೆವಿಎನ್‍ ಪ್ರೊಡಕ್ಷನ್ಸ್ ಸಂಸ್ಥೆಯ ವೆಂಕಟ್ ‍ಕೆ. ನಾರಾಯಣ್‍ ಒಂದು ಚಿತ್ರ ನಿರ್ಮಿಸುತ್ತಿರುವುದು ಗೊತ್ತೇ ಇದೆ. ಇತ್ತೀಚೆಗಷ್ಟೇ ಚಿತ್ರದ ಘೋಷಣೆಯೂ ಆಗಿದೆ. ಇದೀಗ ಈ ಚಿತ್ರದಲ್ಲಿ ಬಾಲಿವುಡ್‍ ನಟ ಬಾಬ್ಬಿ ಡಿಯೋಲ್‍ ಖಳನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಇದೆ.

ಬಾಬ್ಬಿ ಡಿಯೋಲ್‍ ಕಳೆದ 29 ವರ್ಷಗಳಿಂದ ಚಿತ್ರರಂಗದಲ್ಲಿದ್ದಾರೆ. 1995ರಲ್ಲಿ ಬಿಡುಗಡೆಯಾದ ‘ಬರ್ಸಾತ್‍’ ಚಿತ್ರದ ಮೂಲಕ ಹೀರೋ ಆದ ಅವರು, ಮುಂದಿನ ಒಂದು ದಶಕ ಸತತವಾಗಿ ಚಿತ್ರಗಳಲ್ಲಿ ನಾಯಕನಾಗಿ ಕಾಣಿಸಿಕೊಂಡರು. ಹಲವು ಚಿತ್ರಗಳ ಸೋಲು ಮತ್ತು ಮಾಸಿದ ಜನಪ್ರಿಯತೆಯಿಂದಾಗಿ ಕ್ರಮೇಣ ಅವರು ನಟಿಸಿದ ಚಿತ್ರಗಳ ಸಂಖ್ಯೆ ಕಡಿಮೆಯಾಯಿತು.

ಹೀಗಿರುವಾಗಲೇ, ಕಳೆದ ವರ್ಷ ಬಿಡುಗಡೆಯಾದ ರಣಬೀರ್‍ ಕಪೂರ್‍ ಅಭಿನಯದ ‘ಅನಿಮಲ್‍’ ಚಿತ್ರದಲ್ಲಿ ಅವರು ಮೊದಲ ಬಾರಿಗೆ ವಿಲನ್‍ ಆಗಿ ಕಾಣಿಸಿಕೊಂಡರು. ಈ ಚಿತ್ರ ದೊಡ್ಡ ಯಶಸ್ಸು ಪಡೆಯುವುದರ ಜೊತೆಗೆ, ಅದರಲ್ಲಿನ ಅವರ ಅಬ್ರಾರ್‍ ಪಾತ್ರ ಹಿಟ್ಟ ಆಯಿತು. ಅಲ್ಲಿಂದ ಬಾಬ್ಬಿ ಬೇಡಿಕೆಯ ನಟನಾಗಿದ್ದಾರೆ. ತೆಲುಗಿನ ‘ಹರಿಹರ ವೀರಮಲ್ಲು’ ಚಿತ್ರದಲ್ಲಿ ನಟಿಸಿದ ಅವರು, ತಮಿಳಿನ ‘ಕಂಗುವಾ’ದಲ್ಲೂ ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಂಡರು. ಈಗ ವಿಜಯ್‍ ಅಭಿನಯದ 69ನೇ ಚಿತ್ರದಲ್ಲೂ ಅವರು ವಿಲನ್‍ ಪಾತ್ರ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಹೆಸರಿಡದ ಚಿತ್ರವನ್ನು ಎಚ್‍. ವಿನೋದ್‍ ನಿರ್ದೇಶನ ಮಾಡುತ್ತಿದ್ದಾರೆ. 500 ಕೋಟಿಗೂ ಅಧಿಕ ಬಜೆಟ್ ನಲ್ಲಿ ಈ ಚಿತ್ರ ತಯಾರಾಗುತ್ತಿದ್ದು, ವಿಜಯ್ ಚಿತ್ರಬದುಕಿನ ಕೊನೆಯ ಚಿತ್ರವಾಗಲಿದೆ ಎಂದು ಹೇಳಲಾಗುತ್ತಿದೆ. ವಿಜಯ್‍ ಈಗಾಗಲೇ ‘ತಮಿಳಿಗ ವೆಟ್ರಿ ಕಳಗಂ’ ಎಂಬ ರಾಜಕೀಯ ಪಕ್ಷವೊಂದನ್ನು ಸ್ಥಾಪಿಸಿದ್ದು, ಈ ಚಿತ್ರದ ನಂತರ ಅವರು ಪೂರ್ಣಪ್ರಮಾಣವಾಗಿ ರಾಜಕೀಯದಲ್ಲಿ ತೊಡಗಿಸಿಕೊಳ್ಳಲಿದ್ದಾರಂತೆ. ವಿಜಯ್ ರಾಜಕೀಯ ಜೀವನಕ್ಕೆ ಹತ್ತಿರವಿರುವ ಕಥೆ ಈ ಚಿತ್ರದಲ್ಲಿದ್ದು, ವಿಜಯ್ ರಾಜಕೀಯ ಭವಿಷ್ಯಕ್ಕೆ ಈ ಚಿತ್ರ ಭವ್ಯ ಮೆಟ್ಟಿಲಾಗಲಿದೆ ಎಂಬ ಸುದ್ದಿ ಇದೆ.

ಕೆವಿಎನ್‍ ಪ್ರೊಡಕ್ಷನ್ಸ್ ಸಂಸ್ಥೆಯು ಸದ್ಯ ಧ್ರುವ ಸರ್ಜಾ ಅಭಿನಯದ ‘ಕೆಡಿ – ದಿ ಡೆವಿಲ್‍’ ಮತ್ತು ಯಶ್‍ ಅಭಿನಯದ ‘ಟಾಕ್ಸಿಕ್‍’ ಚಿತ್ರಗಳನ್ನು ನಿರ್ಮಿಸುತ್ತಿದೆ. ಇವೆರಡೂ ಚಿತ್ರಗಳು ಪ್ಯಾನ್‍ ಇಂಡಿಯಾ ಚಿತ್ರಗಳಾಗಿದ್ದು, ಇದರ ಜೊತೆಗೆ ತಮಿಳಿನಲ್ಲಿ ದೊಡ್ಡ ಬಜೆಟ್‍ನ ಚಿತ್ರವೊಂದನ್ನು ನಿರ್ಮಿಸುವುದಕ್ಕೆ ಸಜ್ಜಾಗಿದೆ.

ಭೂಮಿಕಾ

Recent Posts

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

5 hours ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

5 hours ago

ಕಾರ್ಮಿಕರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…

8 hours ago

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

9 hours ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

10 hours ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

10 hours ago