ತಮಿಳು ನಟ ‘ಇಳಯ ದಳಪತಿ’ ವಿಜಯ್ ಅಭಿನಯದಲ್ಲಿ ಕನ್ನಡದ ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆಯ ವೆಂಕಟ್ ಕೆ. ನಾರಾಯಣ್ ಒಂದು ಚಿತ್ರ ನಿರ್ಮಿಸುತ್ತಿರುವುದು ಗೊತ್ತೇ ಇದೆ. ಇತ್ತೀಚೆಗಷ್ಟೇ ಚಿತ್ರದ ಘೋಷಣೆಯೂ ಆಗಿದೆ. ಇದೀಗ ಈ ಚಿತ್ರದಲ್ಲಿ ಬಾಲಿವುಡ್ ನಟ ಬಾಬ್ಬಿ ಡಿಯೋಲ್ ಖಳನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಇದೆ.
ಬಾಬ್ಬಿ ಡಿಯೋಲ್ ಕಳೆದ 29 ವರ್ಷಗಳಿಂದ ಚಿತ್ರರಂಗದಲ್ಲಿದ್ದಾರೆ. 1995ರಲ್ಲಿ ಬಿಡುಗಡೆಯಾದ ‘ಬರ್ಸಾತ್’ ಚಿತ್ರದ ಮೂಲಕ ಹೀರೋ ಆದ ಅವರು, ಮುಂದಿನ ಒಂದು ದಶಕ ಸತತವಾಗಿ ಚಿತ್ರಗಳಲ್ಲಿ ನಾಯಕನಾಗಿ ಕಾಣಿಸಿಕೊಂಡರು. ಹಲವು ಚಿತ್ರಗಳ ಸೋಲು ಮತ್ತು ಮಾಸಿದ ಜನಪ್ರಿಯತೆಯಿಂದಾಗಿ ಕ್ರಮೇಣ ಅವರು ನಟಿಸಿದ ಚಿತ್ರಗಳ ಸಂಖ್ಯೆ ಕಡಿಮೆಯಾಯಿತು.
ಹೀಗಿರುವಾಗಲೇ, ಕಳೆದ ವರ್ಷ ಬಿಡುಗಡೆಯಾದ ರಣಬೀರ್ ಕಪೂರ್ ಅಭಿನಯದ ‘ಅನಿಮಲ್’ ಚಿತ್ರದಲ್ಲಿ ಅವರು ಮೊದಲ ಬಾರಿಗೆ ವಿಲನ್ ಆಗಿ ಕಾಣಿಸಿಕೊಂಡರು. ಈ ಚಿತ್ರ ದೊಡ್ಡ ಯಶಸ್ಸು ಪಡೆಯುವುದರ ಜೊತೆಗೆ, ಅದರಲ್ಲಿನ ಅವರ ಅಬ್ರಾರ್ ಪಾತ್ರ ಹಿಟ್ಟ ಆಯಿತು. ಅಲ್ಲಿಂದ ಬಾಬ್ಬಿ ಬೇಡಿಕೆಯ ನಟನಾಗಿದ್ದಾರೆ. ತೆಲುಗಿನ ‘ಹರಿಹರ ವೀರಮಲ್ಲು’ ಚಿತ್ರದಲ್ಲಿ ನಟಿಸಿದ ಅವರು, ತಮಿಳಿನ ‘ಕಂಗುವಾ’ದಲ್ಲೂ ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಂಡರು. ಈಗ ವಿಜಯ್ ಅಭಿನಯದ 69ನೇ ಚಿತ್ರದಲ್ಲೂ ಅವರು ವಿಲನ್ ಪಾತ್ರ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಹೆಸರಿಡದ ಚಿತ್ರವನ್ನು ಎಚ್. ವಿನೋದ್ ನಿರ್ದೇಶನ ಮಾಡುತ್ತಿದ್ದಾರೆ. 500 ಕೋಟಿಗೂ ಅಧಿಕ ಬಜೆಟ್ ನಲ್ಲಿ ಈ ಚಿತ್ರ ತಯಾರಾಗುತ್ತಿದ್ದು, ವಿಜಯ್ ಚಿತ್ರಬದುಕಿನ ಕೊನೆಯ ಚಿತ್ರವಾಗಲಿದೆ ಎಂದು ಹೇಳಲಾಗುತ್ತಿದೆ. ವಿಜಯ್ ಈಗಾಗಲೇ ‘ತಮಿಳಿಗ ವೆಟ್ರಿ ಕಳಗಂ’ ಎಂಬ ರಾಜಕೀಯ ಪಕ್ಷವೊಂದನ್ನು ಸ್ಥಾಪಿಸಿದ್ದು, ಈ ಚಿತ್ರದ ನಂತರ ಅವರು ಪೂರ್ಣಪ್ರಮಾಣವಾಗಿ ರಾಜಕೀಯದಲ್ಲಿ ತೊಡಗಿಸಿಕೊಳ್ಳಲಿದ್ದಾರಂತೆ. ವಿಜಯ್ ರಾಜಕೀಯ ಜೀವನಕ್ಕೆ ಹತ್ತಿರವಿರುವ ಕಥೆ ಈ ಚಿತ್ರದಲ್ಲಿದ್ದು, ವಿಜಯ್ ರಾಜಕೀಯ ಭವಿಷ್ಯಕ್ಕೆ ಈ ಚಿತ್ರ ಭವ್ಯ ಮೆಟ್ಟಿಲಾಗಲಿದೆ ಎಂಬ ಸುದ್ದಿ ಇದೆ.
ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆಯು ಸದ್ಯ ಧ್ರುವ ಸರ್ಜಾ ಅಭಿನಯದ ‘ಕೆಡಿ – ದಿ ಡೆವಿಲ್’ ಮತ್ತು ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರಗಳನ್ನು ನಿರ್ಮಿಸುತ್ತಿದೆ. ಇವೆರಡೂ ಚಿತ್ರಗಳು ಪ್ಯಾನ್ ಇಂಡಿಯಾ ಚಿತ್ರಗಳಾಗಿದ್ದು, ಇದರ ಜೊತೆಗೆ ತಮಿಳಿನಲ್ಲಿ ದೊಡ್ಡ ಬಜೆಟ್ನ ಚಿತ್ರವೊಂದನ್ನು ನಿರ್ಮಿಸುವುದಕ್ಕೆ ಸಜ್ಜಾಗಿದೆ.
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…