ಮನರಂಜನೆ

ವಿಜಯ್‍ ಕೊನೆಯ ಚಿತ್ರಕ್ಕೆ ವಿಲನ್‍ ಆದ ಬಾಬಿ ಡಿಯೋಲ್‍

ತಮಿಳು ನಟ ‘ಇಳಯ ದಳಪತಿ’ ವಿಜಯ್‍ ಅಭಿನಯದಲ್ಲಿ ಕನ್ನಡದ ಕೆವಿಎನ್‍ ಪ್ರೊಡಕ್ಷನ್ಸ್ ಸಂಸ್ಥೆಯ ವೆಂಕಟ್ ‍ಕೆ. ನಾರಾಯಣ್‍ ಒಂದು ಚಿತ್ರ ನಿರ್ಮಿಸುತ್ತಿರುವುದು ಗೊತ್ತೇ ಇದೆ. ಇತ್ತೀಚೆಗಷ್ಟೇ ಚಿತ್ರದ ಘೋಷಣೆಯೂ ಆಗಿದೆ. ಇದೀಗ ಈ ಚಿತ್ರದಲ್ಲಿ ಬಾಲಿವುಡ್‍ ನಟ ಬಾಬ್ಬಿ ಡಿಯೋಲ್‍ ಖಳನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಇದೆ.

ಬಾಬ್ಬಿ ಡಿಯೋಲ್‍ ಕಳೆದ 29 ವರ್ಷಗಳಿಂದ ಚಿತ್ರರಂಗದಲ್ಲಿದ್ದಾರೆ. 1995ರಲ್ಲಿ ಬಿಡುಗಡೆಯಾದ ‘ಬರ್ಸಾತ್‍’ ಚಿತ್ರದ ಮೂಲಕ ಹೀರೋ ಆದ ಅವರು, ಮುಂದಿನ ಒಂದು ದಶಕ ಸತತವಾಗಿ ಚಿತ್ರಗಳಲ್ಲಿ ನಾಯಕನಾಗಿ ಕಾಣಿಸಿಕೊಂಡರು. ಹಲವು ಚಿತ್ರಗಳ ಸೋಲು ಮತ್ತು ಮಾಸಿದ ಜನಪ್ರಿಯತೆಯಿಂದಾಗಿ ಕ್ರಮೇಣ ಅವರು ನಟಿಸಿದ ಚಿತ್ರಗಳ ಸಂಖ್ಯೆ ಕಡಿಮೆಯಾಯಿತು.

ಹೀಗಿರುವಾಗಲೇ, ಕಳೆದ ವರ್ಷ ಬಿಡುಗಡೆಯಾದ ರಣಬೀರ್‍ ಕಪೂರ್‍ ಅಭಿನಯದ ‘ಅನಿಮಲ್‍’ ಚಿತ್ರದಲ್ಲಿ ಅವರು ಮೊದಲ ಬಾರಿಗೆ ವಿಲನ್‍ ಆಗಿ ಕಾಣಿಸಿಕೊಂಡರು. ಈ ಚಿತ್ರ ದೊಡ್ಡ ಯಶಸ್ಸು ಪಡೆಯುವುದರ ಜೊತೆಗೆ, ಅದರಲ್ಲಿನ ಅವರ ಅಬ್ರಾರ್‍ ಪಾತ್ರ ಹಿಟ್ಟ ಆಯಿತು. ಅಲ್ಲಿಂದ ಬಾಬ್ಬಿ ಬೇಡಿಕೆಯ ನಟನಾಗಿದ್ದಾರೆ. ತೆಲುಗಿನ ‘ಹರಿಹರ ವೀರಮಲ್ಲು’ ಚಿತ್ರದಲ್ಲಿ ನಟಿಸಿದ ಅವರು, ತಮಿಳಿನ ‘ಕಂಗುವಾ’ದಲ್ಲೂ ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಂಡರು. ಈಗ ವಿಜಯ್‍ ಅಭಿನಯದ 69ನೇ ಚಿತ್ರದಲ್ಲೂ ಅವರು ವಿಲನ್‍ ಪಾತ್ರ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಹೆಸರಿಡದ ಚಿತ್ರವನ್ನು ಎಚ್‍. ವಿನೋದ್‍ ನಿರ್ದೇಶನ ಮಾಡುತ್ತಿದ್ದಾರೆ. 500 ಕೋಟಿಗೂ ಅಧಿಕ ಬಜೆಟ್ ನಲ್ಲಿ ಈ ಚಿತ್ರ ತಯಾರಾಗುತ್ತಿದ್ದು, ವಿಜಯ್ ಚಿತ್ರಬದುಕಿನ ಕೊನೆಯ ಚಿತ್ರವಾಗಲಿದೆ ಎಂದು ಹೇಳಲಾಗುತ್ತಿದೆ. ವಿಜಯ್‍ ಈಗಾಗಲೇ ‘ತಮಿಳಿಗ ವೆಟ್ರಿ ಕಳಗಂ’ ಎಂಬ ರಾಜಕೀಯ ಪಕ್ಷವೊಂದನ್ನು ಸ್ಥಾಪಿಸಿದ್ದು, ಈ ಚಿತ್ರದ ನಂತರ ಅವರು ಪೂರ್ಣಪ್ರಮಾಣವಾಗಿ ರಾಜಕೀಯದಲ್ಲಿ ತೊಡಗಿಸಿಕೊಳ್ಳಲಿದ್ದಾರಂತೆ. ವಿಜಯ್ ರಾಜಕೀಯ ಜೀವನಕ್ಕೆ ಹತ್ತಿರವಿರುವ ಕಥೆ ಈ ಚಿತ್ರದಲ್ಲಿದ್ದು, ವಿಜಯ್ ರಾಜಕೀಯ ಭವಿಷ್ಯಕ್ಕೆ ಈ ಚಿತ್ರ ಭವ್ಯ ಮೆಟ್ಟಿಲಾಗಲಿದೆ ಎಂಬ ಸುದ್ದಿ ಇದೆ.

ಕೆವಿಎನ್‍ ಪ್ರೊಡಕ್ಷನ್ಸ್ ಸಂಸ್ಥೆಯು ಸದ್ಯ ಧ್ರುವ ಸರ್ಜಾ ಅಭಿನಯದ ‘ಕೆಡಿ – ದಿ ಡೆವಿಲ್‍’ ಮತ್ತು ಯಶ್‍ ಅಭಿನಯದ ‘ಟಾಕ್ಸಿಕ್‍’ ಚಿತ್ರಗಳನ್ನು ನಿರ್ಮಿಸುತ್ತಿದೆ. ಇವೆರಡೂ ಚಿತ್ರಗಳು ಪ್ಯಾನ್‍ ಇಂಡಿಯಾ ಚಿತ್ರಗಳಾಗಿದ್ದು, ಇದರ ಜೊತೆಗೆ ತಮಿಳಿನಲ್ಲಿ ದೊಡ್ಡ ಬಜೆಟ್‍ನ ಚಿತ್ರವೊಂದನ್ನು ನಿರ್ಮಿಸುವುದಕ್ಕೆ ಸಜ್ಜಾಗಿದೆ.

ಭೂಮಿಕಾ

Recent Posts

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

3 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

4 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

4 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

4 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

5 hours ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

7 hours ago