ಮನರಂಜನೆ

ಒಂದೇ ಚಿತ್ರದಲ್ಲಿ ಆಮೀರ್, ಸಲ್ಮಾನ್‍ ಮತ್ತು ಶಾರೂಖ್‍ ನಟಿಸುವ ಸಾಧ್ಯತೆ

ಬಾಲಿವುಡ್‍ನ ಜನಪ್ರಿಯ ನಟರಾದ ಆಮೀರ್‍ ಖಾನ್‍, ಸಲ್ಮಾನ್‍ ಖಾನ್‍ ಮತ್ತು ಶಾರೂಖ್‍ ಖಾನ್‍ ಅವರನ್ನು ಒಂದೇ ಚಿತ್ರದಲ್ಲಿ ಒಟ್ಟಿಗೆ ನೋಡಬೇಕು ಎಂಬುದು ಅವರ ಅಭಿಮಾನಿಗಳ ಆಸೆ. ಬರೀ ಅಭಿಮಾನಿಗಳಷ್ಟೇ ಅಲ್ಲ, ಮೂವರನ್ನೂ ಒಟ್ಟಿಗೆ ತೆರೆಯ ಮೇಲೆ ತರಬೇಕು ಎಂಬುದು ಹಲವು ನಿರ್ಮಾಪಕರು ಮತ್ತು ನಿರ್ದೇಶಕರ ಆಸೆ.

ಈಗ ಮೂವರೂ ಖಾನ್‍ಗಳು ಒಂದೇ ಚಿತ್ರದಲ್ಲಿ ಒಟ್ಟಿಗೆ ನಟಿಸುವ ಸಾಧ್ಯತೆ ಇದೆ. ಈ ವಿಷಯವನ್ನು ಸ್ವತಃ ಆಮೀರ್‍‍ ಖಾನ್‍ ಹೇಳಿಕೊಂಡಿದ್ದಾರೆ. ಸೌದಿ ಅರೇಬಿಯಾದ ಜೆಡ್ಡಾದಲ್ಲಿ ನಡೆಯುತ್ತಿರುವ ರೆಡ್‍ ಸೀ ಫಿಲ್ಮ್ ಫೆಸ್ಟಿವಲ್‍ನಲ್ಲಿ ಭಾಗವಹಿಸಿ ಮಾತನಾಡಿರುವ ಆಮೀರ್‍, ಮೂವರು ಖಾನ್‍ಗಳು ಒಂದೇ ಚಿತ್ರದಲ್ಲಿ ಒಟ್ಟಿಗೆ ನಟಿಸುವ ಸಾಧ್ಯತೆ ಇದೆ ಎಂದು ಹೇಳಿಕೊಂಡಿದ್ದಾರೆ.

ಈ ಕುರಿತು ಮಾತನಾಡಿರುವ ಆಮೀರ್‍, ‘ಸುಮಾರು ಆರು ತಿಂಗಳ ಹಿಂದೆ ನಾವು ಮೂವರು, ಒಟ್ಟಿಗೆ ಭೇಟಿಯಾಗಿದ್ದೆವು. ಈ ಸಂದರ್ಭದಲ್ಲಿ, ನಾವು ಮೂವರು ಒಟ್ಟಿಗೆ ಚಿತ್ರ ಮಾಡದಿದ್ದರೆ ಅಭಿಮಾನಿಗಳಿ ಮೋಸ ಮಾಡಿದಂತಾಗುತ್ತದೆ, ನಾವು ಒಟ್ಟಿಗೆ ನಟಿಸಿದರೆ ಹೇಗೆ ಎಂದು ಕೇಳಿದೆ. ಅವರಿಬ್ಬರೂ ಒಪ್ಪಿದರು. ಒಟ್ಟಿಗೆ ಕೆಲಸ ಮಾಡೋಣ ಎಂದು ಆಶ್ವಾಸನೆ ನೀಡಿದರು. ನಾವು ಒಟ್ಟಿಗೆ ನಟಿಸಬೇಕು ಎಂದರೆ, ಅದಕ್ಕೊಂದು ಸೂಕ್ತವಾದ ಕಥೆ ಬೇಕು. ಅಂತಹ ಕಥೆಯ ಹುಡುಕಾಟದಲ್ಲಿ ನಾವಿದ್ದೇವೆ’ ಎಂದು ಆಮೀರ್‍ ಹೇಳಿದ್ದಾರೆ.

ಅಂದ ಹಾಗೆ, ಆಮೀರ್‍ ಖಾನ್‍, ಸಲ್ಮಾನ್‍ ಖಾನ್‍ ಮತ್ತು ಶಾರೂಖ್‍ ಖಾನ್‍ ಮೂವರೂ ಅನಂತ್‍ ಅಂಬಾನಿ ಮದುವೆಯಲ್ಲಿ ‘ನಾಟ್ಟು ನಾಟ್ಟು’ ಹಾಡಿಗೆ ಹೆಜ್ಜೆ ಹಾಕಿದ್ದರು. ಮೂವರು ಒಟ್ಟಿಗೆ ಹೆಜ್ಜೆ ಹಾಕುವುದನ್ನು ನೋಡಿ ಅಭಿಮಾನಿಗಳು ಖುಷಿಯಾಗಿದ್ದರು.

ಈ ಹಿಂದೆ, ಆಮೀರ್ ಖಾನ್‍ ಮತ್ತು ಸಲ್ಮಾನ್ ಖಾನ್, ‘ಅಂದಾಜ್‍ ಅಪ್ನಾ ಅಪ್ನಾ’ ಚಿತ್ರದಲ್ಲಿ ‍ಒಟ್ಟಿಗೆ ನಟಿಸಿದ್ದಾರೆ. ಶಾರೂಖ್‍ ಖಾನ್‍ ಮತ್ತು ಸಲ್ಮಾನ್‍, ‘ಕರಣ್‍ ಅರ್ಜುನ್‍’ ಮುಂತಾದ ಚಿತ್ರಗಳಲ್ಲಿ ಒಟ್ಟಿಗೆ ತೆರೆ ಹಂಚಿಕೊಂಡಿದ್ದಾರೆ. ಆಮೀರ್‍ ಮತ್ತು ಶಾರೂಖ್‍ ಖಾನ್‍ ಒಟ್ಟಿಗೆ ನಟಿಸುವುದಕ್ಕೆ ಸಾಧ್ಯವಾಗಿಲ್ಲ. ಹಾಗೆಯೇ, ಮೂವರೂ ಒಟ್ಟಿಗೆ ನಟಿಸಿರಲಿಲ್ಲ. ಈಗ ಅದು ಸಾಧ್ಯವಾಗುತ್ತದೋ, ಇಲ್ಲವೋ ಎಂಬುದನ್ನು ಕಾದು ನೋಡಬೇಕಿದೆ.

ಭೂಮಿಕಾ

Recent Posts

ಓದುಗರ ಪತ್ರ: ಕೊಲ್ಲಿ ರಾಷ್ಟ್ರಗಳಲ್ಲಿ ಮುಂದುವರಿದ ಆತಂಕ

ಮಧ್ಯ ಪ್ರಾಚ್ಯದಲ್ಲಿ ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕದಿಂದ ನಡೆಯುತ್ತಿರುವ ದಾಳಿ ಹಾಗೂ ಯುಎಇ, ಬಹರೇನ್, ಕುವೈತ್ ಮೊದಲಾದ ರಾಷ್ಟ್ರಗಳಲ್ಲಿರುವ…

10 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಸಫುರಾ ಖಾನ್ ಎಂಬ ಆಟೋ ಓಡಿಸುವ ಕನಸುಗಾರ್ತಿ

೩೦ ವರ್ಷ ಪ್ರಾಯದ ಸಫುರಾ ಖಾನ್‌ರ ತಂದೆ ತಾಯಿ ಚೆನ್ನೆ ಯಿಂದ ಕರ್ನಾಟಕಕ್ಕೆ ವಲಸೆ ಬಂದಾಗ ಆಕೆ ಇನ್ನೂ ಮಗುವಾಗಿದ್ದರು.…

13 mins ago

ರಾಷ್ಟ್ರಿಯ ಹೆದ್ದಾರಿ ಅಗಲೀಕರಣ ವಿಳಂಬ: ಆರೋಪ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಗುಂಡ್ಲುಪೇಟೆಯಿಂದ ನಂಜನಗೂಡು ತನಕ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು ರಸ್ತೆಯ ಎರಡೂ ಬದಿಗಳನ್ನು ಅಗೆದು…

18 mins ago

ಮೂಗನಕೊಪ್ಪಲಿನಲ್ಲಿ ಮಾದರಿ ಚಾಕಿ ಸಾಕಾಣಿಕಾ ಕೇಂದ್ರ

ಮಾಮರಶಿ ರೇಷ್ಮೆ ಕೃಷಿಯಿಂದಲೇ ಉದ್ಯಮ ಕಟ್ಟಿದ ರೇಷ್ಮೆ ತ್ಯಾಗರಾಜು ೨೦೦ಕ್ಕೂ ಹೆಚ್ಚು ಮಂದಿಗೆ ಉದ್ಯೋಗ ನೀಡಿದ ರೈತನ ಮಗ ಮಳವಳ್ಳಿ:…

21 mins ago

ಆದಾಯದ ಹಳಿಗೆ ಮರಳಿದ ಮೃಗಾಲಯ

ಕೆ.ಬಿ.ರಮೇಶನಾಯಕ ಮೈಸೂರು: ದಕ್ಷಿಣ ಭಾರತದಲ್ಲೇ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಶ್ರೀ ಚಾಮರಾಜೇಂದ್ರ ಮೃಗಾಲಯವು ಕೋವಿಡ್ ಸಮಯದಲ್ಲಿ ಆದಾಯ ಕುಸಿತದಿಂದ ಕಂಗೆಟ್ಟರೂ…

25 mins ago

ಲೆಬನಾನಿನ ನಾಶಕ್ಕೆ ಕಾರಣವಾಗುತ್ತಿರುವ ಹೆಜ್ಬುಲ್ಲಾ ಎಂಬ ದೇವರ ಪಕ್ಷ!

ಶೇಷಾದ್ರಿ ಗಂಜೂರು ಇರಾನ್ ಮತ್ತು ಇಸ್ರೇಲ್ ನಡುವಿನ ಸಮರ ನಾಲ್ಕನೇ ದಿನ ಪೂರ್ಣಗೊಳಿಸಿದೆ. ಯುದ್ಧದ ಬೀಸಿಗೆ ಸಿಲುಕಿ ಮುಖ್ಯವಾಗಿ ೧೨…

29 mins ago