ಮನರಂಜನೆ

ಒಂದೇ ಚಿತ್ರದಲ್ಲಿ ಆಮೀರ್, ಸಲ್ಮಾನ್‍ ಮತ್ತು ಶಾರೂಖ್‍ ನಟಿಸುವ ಸಾಧ್ಯತೆ

ಬಾಲಿವುಡ್‍ನ ಜನಪ್ರಿಯ ನಟರಾದ ಆಮೀರ್‍ ಖಾನ್‍, ಸಲ್ಮಾನ್‍ ಖಾನ್‍ ಮತ್ತು ಶಾರೂಖ್‍ ಖಾನ್‍ ಅವರನ್ನು ಒಂದೇ ಚಿತ್ರದಲ್ಲಿ ಒಟ್ಟಿಗೆ ನೋಡಬೇಕು ಎಂಬುದು ಅವರ ಅಭಿಮಾನಿಗಳ ಆಸೆ. ಬರೀ ಅಭಿಮಾನಿಗಳಷ್ಟೇ ಅಲ್ಲ, ಮೂವರನ್ನೂ ಒಟ್ಟಿಗೆ ತೆರೆಯ ಮೇಲೆ ತರಬೇಕು ಎಂಬುದು ಹಲವು ನಿರ್ಮಾಪಕರು ಮತ್ತು ನಿರ್ದೇಶಕರ ಆಸೆ.

ಈಗ ಮೂವರೂ ಖಾನ್‍ಗಳು ಒಂದೇ ಚಿತ್ರದಲ್ಲಿ ಒಟ್ಟಿಗೆ ನಟಿಸುವ ಸಾಧ್ಯತೆ ಇದೆ. ಈ ವಿಷಯವನ್ನು ಸ್ವತಃ ಆಮೀರ್‍‍ ಖಾನ್‍ ಹೇಳಿಕೊಂಡಿದ್ದಾರೆ. ಸೌದಿ ಅರೇಬಿಯಾದ ಜೆಡ್ಡಾದಲ್ಲಿ ನಡೆಯುತ್ತಿರುವ ರೆಡ್‍ ಸೀ ಫಿಲ್ಮ್ ಫೆಸ್ಟಿವಲ್‍ನಲ್ಲಿ ಭಾಗವಹಿಸಿ ಮಾತನಾಡಿರುವ ಆಮೀರ್‍, ಮೂವರು ಖಾನ್‍ಗಳು ಒಂದೇ ಚಿತ್ರದಲ್ಲಿ ಒಟ್ಟಿಗೆ ನಟಿಸುವ ಸಾಧ್ಯತೆ ಇದೆ ಎಂದು ಹೇಳಿಕೊಂಡಿದ್ದಾರೆ.

ಈ ಕುರಿತು ಮಾತನಾಡಿರುವ ಆಮೀರ್‍, ‘ಸುಮಾರು ಆರು ತಿಂಗಳ ಹಿಂದೆ ನಾವು ಮೂವರು, ಒಟ್ಟಿಗೆ ಭೇಟಿಯಾಗಿದ್ದೆವು. ಈ ಸಂದರ್ಭದಲ್ಲಿ, ನಾವು ಮೂವರು ಒಟ್ಟಿಗೆ ಚಿತ್ರ ಮಾಡದಿದ್ದರೆ ಅಭಿಮಾನಿಗಳಿ ಮೋಸ ಮಾಡಿದಂತಾಗುತ್ತದೆ, ನಾವು ಒಟ್ಟಿಗೆ ನಟಿಸಿದರೆ ಹೇಗೆ ಎಂದು ಕೇಳಿದೆ. ಅವರಿಬ್ಬರೂ ಒಪ್ಪಿದರು. ಒಟ್ಟಿಗೆ ಕೆಲಸ ಮಾಡೋಣ ಎಂದು ಆಶ್ವಾಸನೆ ನೀಡಿದರು. ನಾವು ಒಟ್ಟಿಗೆ ನಟಿಸಬೇಕು ಎಂದರೆ, ಅದಕ್ಕೊಂದು ಸೂಕ್ತವಾದ ಕಥೆ ಬೇಕು. ಅಂತಹ ಕಥೆಯ ಹುಡುಕಾಟದಲ್ಲಿ ನಾವಿದ್ದೇವೆ’ ಎಂದು ಆಮೀರ್‍ ಹೇಳಿದ್ದಾರೆ.

ಅಂದ ಹಾಗೆ, ಆಮೀರ್‍ ಖಾನ್‍, ಸಲ್ಮಾನ್‍ ಖಾನ್‍ ಮತ್ತು ಶಾರೂಖ್‍ ಖಾನ್‍ ಮೂವರೂ ಅನಂತ್‍ ಅಂಬಾನಿ ಮದುವೆಯಲ್ಲಿ ‘ನಾಟ್ಟು ನಾಟ್ಟು’ ಹಾಡಿಗೆ ಹೆಜ್ಜೆ ಹಾಕಿದ್ದರು. ಮೂವರು ಒಟ್ಟಿಗೆ ಹೆಜ್ಜೆ ಹಾಕುವುದನ್ನು ನೋಡಿ ಅಭಿಮಾನಿಗಳು ಖುಷಿಯಾಗಿದ್ದರು.

ಈ ಹಿಂದೆ, ಆಮೀರ್ ಖಾನ್‍ ಮತ್ತು ಸಲ್ಮಾನ್ ಖಾನ್, ‘ಅಂದಾಜ್‍ ಅಪ್ನಾ ಅಪ್ನಾ’ ಚಿತ್ರದಲ್ಲಿ ‍ಒಟ್ಟಿಗೆ ನಟಿಸಿದ್ದಾರೆ. ಶಾರೂಖ್‍ ಖಾನ್‍ ಮತ್ತು ಸಲ್ಮಾನ್‍, ‘ಕರಣ್‍ ಅರ್ಜುನ್‍’ ಮುಂತಾದ ಚಿತ್ರಗಳಲ್ಲಿ ಒಟ್ಟಿಗೆ ತೆರೆ ಹಂಚಿಕೊಂಡಿದ್ದಾರೆ. ಆಮೀರ್‍ ಮತ್ತು ಶಾರೂಖ್‍ ಖಾನ್‍ ಒಟ್ಟಿಗೆ ನಟಿಸುವುದಕ್ಕೆ ಸಾಧ್ಯವಾಗಿಲ್ಲ. ಹಾಗೆಯೇ, ಮೂವರೂ ಒಟ್ಟಿಗೆ ನಟಿಸಿರಲಿಲ್ಲ. ಈಗ ಅದು ಸಾಧ್ಯವಾಗುತ್ತದೋ, ಇಲ್ಲವೋ ಎಂಬುದನ್ನು ಕಾದು ನೋಡಬೇಕಿದೆ.

ಭೂಮಿಕಾ

Recent Posts

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

2 hours ago

ಕಾಂಗೋದಲ್ಲಿ ಎಬೋಲಾ ಅಟ್ಟಹಾಸ: 1000 ಗಡಿ ದಾಟಿದ ಸೋಂಕಿತರ ಸಂಖ್ಯೆ

ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್‌ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…

4 hours ago

ಗಾಣಾಳು ಜಲಪಾತದಲ್ಲಿ ಈಜಲು ಹೋದ ಯುವಕ ಸಾವು

ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…

4 hours ago

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

4 hours ago

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳ?

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…

5 hours ago

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

6 hours ago