ಮನರಂಜನೆ

ಶ್ವೇತಾ ಶ್ರೀವಾತ್ಸವ್‍ ಈಗ ಲೇಖಕಿ; ಮೊದಲ ಪುಸ್ತಕ ಬಿಡುಗಡೆ

ಮೇಘನಾ ಗಾಂವ್ಕರ್ ಸೇರಿದಂತೆ ಕನ್ನಡದ ಕೆಲವು ನಟಿಯರು ಲೇಖಕಿಯರಾಗಿಯೂ ಗುರುತಿಸಿಕೊಂಡಿದ್ದಾರೆ. ಹಲವು ವಿಷಯಗಳನ್ನು ಪುಸ್ತಕ ರೂಪದಲ್ಲಿ ಓದುಗರಿಗೆ ಕೊಟ್ಟಿದ್ದಾರೆ. ಈಗ ಆ ಸಾಲಿಗೆ ಶ್ವೇತಾ ಶ್ರೀವಾತ್ಸವ್‍ ಸಹ ಸೇರಿದ್ದಾರೆ.

2006ರಲ್ಲಿ ‘ಮುಖಾ ಮುಖಿ’ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ನಟಿ ಶ್ವೇತಾ ಶ್ರೀವಾಸ್ತವ್ ನಂತರದ ವರ್ಷಗಳಲ್ಲಿ ‘ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’, ‘ಕಿರೂಗೂರಿನ ಗಯ್ಯಾಳಿಗಳು’, ‘ರಾಘವೇಂದ್ರ ಸ್ಟೋರ್ಸ್’, ‘ಹೋಪ್’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ. ನಟಿಯಾಗಿ ಪರಿಚಿತರಾಗಿರುವ ಶ್ವೇತಾ ಶ್ರೀವಾಸ್ತವ್ ಈಗ ಲೇಖಕಿಯಾಗಿದ್ದಾರೆ. ತಮ್ಮ ಸಿನಿಪಯಣದ ಅನುಭವಗಳನ್ನು ಪುಸ್ತಕ ರೂಪದಲ್ಲಿ ದಾಖಲಿಸಿದ್ದಾರೆ. ಈ ಪುಸ್ತಕಕ್ಕೆ ‘ರೆಕ್ಕೆ ಇದ್ದರೆ ಸಾಕೆ’ ಎಂದು ಹೆಸರಿಟ್ಟಿದ್ದಾರೆ. ಇಂಗ್ಲಿಷ್ ನಲ್ಲೂ’Against the Grain’ ಎಂಬ ಹೆಸರಿನಲ್ಲಿ ಈ ಪುಸ್ತಕ ಲಭ್ಯವಿದ್ದು, ಇತ್ತೀಚೆಗೆ ಬಿಡುಗಡೆಯಾಗಿದೆ.

ಪುಸ್ತಕದ ಕುರಿತು ಮಾತನಾಡುವ ಶ್ವೇತಾ, ‘ಮಹಿಳೆಯರು ಸಾಧಿಸಿದ ಪ್ರಗತಿಯ ಮಟ್ಟದಿಂದ ಸಮುದಾಯದ ಪ್ರಗತಿಯನ್ನು ಅಳೆಯಬೇಕು ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದರು. ಅಂಬೇಡ್ಕರ್ ಅವರು ಹೇಳಿದ ಮಾತು ಎಲ್ಲಾ ರಂಗಕ್ಕೂ ಅನ್ವಯಿಸುತ್ತದೆ. ಇನ್ನು, ಹೆಣ್ಣುಮಕ್ಕಳು ಮದುವೆ ಆದ ನಂತರ ಚಿತ್ರದಲ್ಲಿ ನಾಯಕಿಯಾಗಿ ನಟಿಸುವುದರ ಕುರಿತು ಚಿತ್ರರಂಗದಲ್ಲಿ ಹಲವು ಅಭಿಪ್ರಾಯಗಳಿವೆ. ಅದಕ್ಕೆ ಕಾರಣ ಏನು? ಹೆಣ್ಣು ಸ್ವಾವಲಂಬಿ ಅಲ್ಲವೇ? ಆಕೆ ಯಾವುದೇ ಕ್ಷೇತ್ರದಲ್ಲಿ ಏನಾದರೂ ಸಾಧಿಸಬೇಕು ಎಂದರೆ, ಆಕೆ ಗಂಡ ಅಥವಾ ತಂದೆಯ ಹೆಸರಿನ ಜೊತೆಗೆ ಗುರುತಿಸಿಕೊಳ್ಳುತ್ತಾಳೆ. ಈ ಪರಿಸ್ಥಿತಿ ಎಲ್ಲಾ ಕಾಲದಲ್ಲೂ ಪ್ರಸ್ತುತ. ಹಾಗಂತ ನಮ್ಮ ಸಾಧನೆಗೆ ಮನೆಯವರ ಸಹಕಾರ ಬೇಡ ಅಂತ ನಾನು ಹೇಳುತ್ತಿಲ್ಲ. ವಾಸ್ತವದ ಬಗ್ಗೆ ಮಾತನಾಡುತ್ತೇನೆ ಅಷ್ಟೆ’ ಎಂಚದರು.

ತಮ್ಮ ಸಿನಿಬದುಕು ಒಂದು ಸಾಧನೆ ಎನ್ನುವ ಶ್ವೇತಾ, ‘ನನ್ನ ಸಿನಿಬದುಕನ್ನು ಸಾಧನೆ ಅಂತ ನಾನು ಕರೆದುಕೊಳ್ಳುತ್ತೇನೆ. ಈ ಸಮಯದಲ್ಲಿ ನಾನು ಎದರಿಸಿದ ಸವಾಲುಗಳು, ಸನ್ನಿವೇಶಗಳು ಹಾಗೂ ಸಂತೋಷದ ವಿಚಾರಗಳು ಎಲ್ಲವನ್ನು ಈ ಪುಸ್ತಕದಲ್ಲಿ ಹೇಳುವ ಪ್ರಯತ್ನ ಮಾಡಿದ್ದೇನೆ. ಇದನ್ನು ಬಯೋಪಿಕ್‌‌ ಅಂತಲೂ ಕರೆಯಬಹುದು. ಲೇಖಕಿಯಾಗಿ ಇದು ಮೊದಲ ಹೆಜ್ಜೆ. ಇಂದು ಭಾರತ ಸೇರಿದಂತೆ 15 ದೇಶಗಳಲ್ಲಿ ನನ್ನ ಪುಸ್ತಕ (ಆನ್ ಲೈನ್) ಬಿಡುಗಡೆಯಾಗಿದೆ. ಅಷ್ಟು ದೇಶಗಳಲ್ಲೂ ಪುಸ್ತಕ ದೊರೆಯಲಿದೆ’ ಎಂದರು.

ಭೂಮಿಕಾ

Recent Posts

ಡಿಜಿಪಿ ರಾಸಲೀಲೆ ವಿಡಿಯೋ ಪ್ರಕರಣಕ್ಕೆ ವಿಪಕ್ಷ ತೀವ್ರ ಟೀಕೆ : ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು : ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ತವ್ಯದ ಸಮಯದಲ್ಲೇ ಬೆಂಗಳೂರಿನಲ್ಲಿರುವ ಡಿಜಿಪಿ…

19 mins ago

ಸಿಎಂ ಸೇರಿ 140 ಶಾಸಕರೂ ನನ್ನ ಬೆಂಬಲಕ್ಕಿದ್ದಾರೆ : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಮುಖ್ಯಮಂತ್ರಿ ಸೇರಿ ಕಾಂಗ್ರೆಸ್ ಪಕ್ಷದ 140 ಶಾಸಕರೂ ನನ್ನ ಬೆಂಬಲಕ್ಕೆ ಇದ್ದಾರೆ. ನಮ್ಮ ನಡುವೆ ಏನು ಚರ್ಚೆಯಾಗಿದೆ…

1 hour ago

ಕೃಷಿಯಷ್ಟೆ ಪಾತ್ರ ವಹಿಸುವ ಮೀನುಗಾರಿಗೆ ಉತ್ತೇಜನ ನೀಡಿ : ಜಿಲ್ಲಾಧಿಕಾರಿ

ಮಂಡ್ಯ : ರೈತರ ಆದಾಯ ಹೆಚ್ಚಿಸುವಲ್ಲಿ ಕೃಷಿಯಷ್ಟೆ ಮಹತ್ವದ ಪಾತ್ರವನ್ನು ಮೀನುಗಾರಿಕೆಯು ವಹಿಸುತ್ತದೆ. ಮೀನು ಸಾಕಾಣಿಕೆ ಕುರಿತು ರೈತರಿಗೆ ತರಬೇತಿ…

2 hours ago

ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೆ ಹೆಚ್ಚಿನ ಒತ್ತು ನೀಡಿ : ಸುರೇಶ್ ಕುಮಾರ್ ಜೈನ್

ಮೈಸೂರು : ರೈತರ ಕೃಷಿ ಉತ್ಪನ್ನಗಳನ್ನು ಕೈಗಾರಿಕೆಗಳ ಸಹಯೋಗದೊಂದಿಗೆ ಮೌಲ್ಯವರ್ಧನೆ ಮಾಡಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಿದರೆ ಕೃಷಿ ಹಾಗೂ ಕೈಗಾರಿಕೆಗಳು…

2 hours ago

ಕಾಲೇಜಿ ವಿದ್ಯಾರ್ಥಿನಿಯರಿಗೂ ಮಧ್ಯಾಹ್ನದ ಬಿಸಿಯೂಟ : ಶಾಸಕ ಜಿ.ಟಿ.ದೇವೇಗೌಡ ಚಾಲನೆ

ಮೈಸೂರು : ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯ ಬಡಾವಣೆಗಳು,ಹಳ್ಳಿಗಳಿಂದ ಆಗಮಿಸಿ ವ್ಯಾಸಂಗ ಮಾಡುವ ಬಡ ವಿದ್ಯಾರ್ಥಿನಿಯರು ಮಧ್ಯಾಹ್ನದ ಹೊತ್ತು ಹಸಿವಿನಿಂದ ಇರಬಾರದೆಂದು…

2 hours ago

ಕಚೇರಿಯಲ್ಲೇ DGP ರಾಮಚಂದ್ರರಾವ್‌ ರಾಸಲೀಲೆ ; ವಿಡಿಯೋ ವೈರಲ್‌

ಬೆಂಗಳೂರು : ರಾಜ್ಯದ ಗೃಹ ಇಲಾಖೆಯಲ್ಲಿ ಹಿಂದೆಂದೂ ಕಂಡು ಕೇಳರಿಯದ ರಾಸಲೀಲೆ ಪ್ರಕರಣ ಹೊರಬಂದಿದ್ದು, ಕಾನೂನು ರಕ್ಷಣೆ ಮಾಡಬೇಕಾದ ಹಿರಿಯ…

3 hours ago