ಮೇಘನಾ ಗಾಂವ್ಕರ್ ಸೇರಿದಂತೆ ಕನ್ನಡದ ಕೆಲವು ನಟಿಯರು ಲೇಖಕಿಯರಾಗಿಯೂ ಗುರುತಿಸಿಕೊಂಡಿದ್ದಾರೆ. ಹಲವು ವಿಷಯಗಳನ್ನು ಪುಸ್ತಕ ರೂಪದಲ್ಲಿ ಓದುಗರಿಗೆ ಕೊಟ್ಟಿದ್ದಾರೆ. ಈಗ ಆ ಸಾಲಿಗೆ ಶ್ವೇತಾ ಶ್ರೀವಾತ್ಸವ್ ಸಹ ಸೇರಿದ್ದಾರೆ.
2006ರಲ್ಲಿ ‘ಮುಖಾ ಮುಖಿ’ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ನಟಿ ಶ್ವೇತಾ ಶ್ರೀವಾಸ್ತವ್ ನಂತರದ ವರ್ಷಗಳಲ್ಲಿ ‘ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’, ‘ಕಿರೂಗೂರಿನ ಗಯ್ಯಾಳಿಗಳು’, ‘ರಾಘವೇಂದ್ರ ಸ್ಟೋರ್ಸ್’, ‘ಹೋಪ್’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ. ನಟಿಯಾಗಿ ಪರಿಚಿತರಾಗಿರುವ ಶ್ವೇತಾ ಶ್ರೀವಾಸ್ತವ್ ಈಗ ಲೇಖಕಿಯಾಗಿದ್ದಾರೆ. ತಮ್ಮ ಸಿನಿಪಯಣದ ಅನುಭವಗಳನ್ನು ಪುಸ್ತಕ ರೂಪದಲ್ಲಿ ದಾಖಲಿಸಿದ್ದಾರೆ. ಈ ಪುಸ್ತಕಕ್ಕೆ ‘ರೆಕ್ಕೆ ಇದ್ದರೆ ಸಾಕೆ’ ಎಂದು ಹೆಸರಿಟ್ಟಿದ್ದಾರೆ. ಇಂಗ್ಲಿಷ್ ನಲ್ಲೂ’Against the Grain’ ಎಂಬ ಹೆಸರಿನಲ್ಲಿ ಈ ಪುಸ್ತಕ ಲಭ್ಯವಿದ್ದು, ಇತ್ತೀಚೆಗೆ ಬಿಡುಗಡೆಯಾಗಿದೆ.
ಪುಸ್ತಕದ ಕುರಿತು ಮಾತನಾಡುವ ಶ್ವೇತಾ, ‘ಮಹಿಳೆಯರು ಸಾಧಿಸಿದ ಪ್ರಗತಿಯ ಮಟ್ಟದಿಂದ ಸಮುದಾಯದ ಪ್ರಗತಿಯನ್ನು ಅಳೆಯಬೇಕು ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದರು. ಅಂಬೇಡ್ಕರ್ ಅವರು ಹೇಳಿದ ಮಾತು ಎಲ್ಲಾ ರಂಗಕ್ಕೂ ಅನ್ವಯಿಸುತ್ತದೆ. ಇನ್ನು, ಹೆಣ್ಣುಮಕ್ಕಳು ಮದುವೆ ಆದ ನಂತರ ಚಿತ್ರದಲ್ಲಿ ನಾಯಕಿಯಾಗಿ ನಟಿಸುವುದರ ಕುರಿತು ಚಿತ್ರರಂಗದಲ್ಲಿ ಹಲವು ಅಭಿಪ್ರಾಯಗಳಿವೆ. ಅದಕ್ಕೆ ಕಾರಣ ಏನು? ಹೆಣ್ಣು ಸ್ವಾವಲಂಬಿ ಅಲ್ಲವೇ? ಆಕೆ ಯಾವುದೇ ಕ್ಷೇತ್ರದಲ್ಲಿ ಏನಾದರೂ ಸಾಧಿಸಬೇಕು ಎಂದರೆ, ಆಕೆ ಗಂಡ ಅಥವಾ ತಂದೆಯ ಹೆಸರಿನ ಜೊತೆಗೆ ಗುರುತಿಸಿಕೊಳ್ಳುತ್ತಾಳೆ. ಈ ಪರಿಸ್ಥಿತಿ ಎಲ್ಲಾ ಕಾಲದಲ್ಲೂ ಪ್ರಸ್ತುತ. ಹಾಗಂತ ನಮ್ಮ ಸಾಧನೆಗೆ ಮನೆಯವರ ಸಹಕಾರ ಬೇಡ ಅಂತ ನಾನು ಹೇಳುತ್ತಿಲ್ಲ. ವಾಸ್ತವದ ಬಗ್ಗೆ ಮಾತನಾಡುತ್ತೇನೆ ಅಷ್ಟೆ’ ಎಂಚದರು.
ತಮ್ಮ ಸಿನಿಬದುಕು ಒಂದು ಸಾಧನೆ ಎನ್ನುವ ಶ್ವೇತಾ, ‘ನನ್ನ ಸಿನಿಬದುಕನ್ನು ಸಾಧನೆ ಅಂತ ನಾನು ಕರೆದುಕೊಳ್ಳುತ್ತೇನೆ. ಈ ಸಮಯದಲ್ಲಿ ನಾನು ಎದರಿಸಿದ ಸವಾಲುಗಳು, ಸನ್ನಿವೇಶಗಳು ಹಾಗೂ ಸಂತೋಷದ ವಿಚಾರಗಳು ಎಲ್ಲವನ್ನು ಈ ಪುಸ್ತಕದಲ್ಲಿ ಹೇಳುವ ಪ್ರಯತ್ನ ಮಾಡಿದ್ದೇನೆ. ಇದನ್ನು ಬಯೋಪಿಕ್ ಅಂತಲೂ ಕರೆಯಬಹುದು. ಲೇಖಕಿಯಾಗಿ ಇದು ಮೊದಲ ಹೆಜ್ಜೆ. ಇಂದು ಭಾರತ ಸೇರಿದಂತೆ 15 ದೇಶಗಳಲ್ಲಿ ನನ್ನ ಪುಸ್ತಕ (ಆನ್ ಲೈನ್) ಬಿಡುಗಡೆಯಾಗಿದೆ. ಅಷ್ಟು ದೇಶಗಳಲ್ಲೂ ಪುಸ್ತಕ ದೊರೆಯಲಿದೆ’ ಎಂದರು.
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…