ಹುಡುಗ, ಹುಡುಗಿ ಸುತ್ತ ಹಲವು ಚಿತ್ರಗಳು ಬಂದಿವೆ. ಅವರಿಬ್ಬರ ಕಥೆಯನ್ನು ಪರಿಸರದ ಹಿನ್ನೆಲೆಯಲ್ಲಿ ಹೇಳುವ ಪ್ರಯತ್ನವನ್ನು ಹೊಸ ಚಿತ್ರವೊಂದರಲ್ಲಿ ಮಾಡಲಾಗಿದೆ. ಅದೇ ‘ಸೋಲ್ ಮೇಟ್ಸ್’. ಈ ಚಿತ್ರವನ್ನು ಶಂಕರ್ ಪಿ.ವಿ ನಿರ್ದೇಶಿಸುವುದರ ಜೊತೆಗೆ ನಿರ್ಮಾಣವನ್ನೂ ಮಾಡಿದ್ದಾರೆ.
ಈ ಚಿತ್ರಕ್ಕೆ ಹಂಸಲೇಖ ಸಾಹಿತ್ಯ ಮತ್ತು ಸಂಗೀತವನ್ನು ಸಂಯೋಜಿಸಿದ್ದು, ಈ ಪೈಕಿ ಮೊದಲ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ‘ಕಿಲಕಿಲ…’ ಎಂದು ಸಾಗುವ ಈ ಹಾಡಿಗೆ ಅನಿರುದ್ಧ್ ಶಾಸ್ತ್ರಿ, ಅಂಕಿತಾ ಕುಂಡು ಧನಿಯಾಗಿದ್ದಾರೆ. ಚಿತ್ರದಲ್ಲಿ ಶ್ರೀಜಿತ್ ಸೂರ್ಯ, ಪ್ರಸನ್ನ ಶೆಟ್ಟಿ, ಯಶ್ವಿಕಾ ನಿಷ್ಕಲ, ರಜನಿ, ಯಶ್ ಶೆಟ್ಟಿ, ಶರತ್ ಲೋಹಿತಾಶ್ವ, ಅರವಿಂದ್ ರಾವ್, ಅರುಣಾ ಬಾಲರಾಜ್, ನವೀನ್ ಡಿ ಪಡೀಲ್ ಮುಂತಾದವರು ನಟಿಸಿದ್ದಾರೆ.
‘ಸೋಲ್ ಮೇಟ್ಸ್’ ಕುರಿತು ಮಾತನಾಡುವ ನಿರ್ದೇಶಕ ಶಂಕರ್ ಪಿ.ವಿ, ‘ನನಗೆ ಚಿಕ್ಕ ವಯಸ್ಸಿನಿಂದ ಸಿನಿಮಾ ಹುಚ್ಚು. ನಾನು ಮೊದಲಿಗೆ ನೋಡಿದ ಸಿನಿಮಾ ಅಂದ್ರೆ ಅದು ‘ಪುಟ್ನಂಜ. ಅಲ್ಲಿಂದ ನನ್ನ ಮತ್ತು ಹಂಸಲೇಖ ಅವರ ನಂಟು ಬೆಳೆಯಿತು ಎಂಬುದು ನನ್ನ ನಂಬಿಕೆ.
ನನ್ನ ಮೊದಲ ಸಿನಿಮಾಗೆ ಅವರೇ ಸಂಗೀತ ಸಂಯೋಜಿಸಬೇಕು ಎಂಬುದು ನನ್ನ ಆಸೆಯಾಗಿತ್ತು. ಈ ಚಿತ್ರಕ್ಕೆ ಅವರು ಐದು ಹಾಡುಗಳನ್ನು ಸಂಯೋಜಿಸಿದ್ದಾರೆ. ಚಿತ್ರದ ಕೆಲಸಗಳು ಮುಗಿಯುತ್ತಾ ಬಂದಿದ್ದು, ಸೆಪ್ಟೆಂಬರ್ ತಿಂಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ’ ಎಂದರು,
ಪರಿಸರದ ಹಿನ್ನೆಲೆಯಲ್ಲಿ ಸಾಗುವ ಕಥೆ ಇದು ಎನ್ನುವ ಶಂಕರ್, ‘ನಾನು ಈ ಹಿಂದೆ ಯಾರ ಜೊತೆಗೆ ಕೆಲಸ ಮಾಡಿಲ್ಲ. ಹುಡುಗ, ಹುಡುಗಿ ಪರಿಸರವನ್ನು ಹೇಗೆ ಕಾಪಾಡಿಕೊಳ್ಳಬೇಕು ಎಂಬುದು ಈ ಚಿತ್ರದ ಮೂಲಕ ಹೇಳಿದ್ದೇವೆ. ಪರಿಸರದ ಹಿನ್ನೆಲೆಯಲ್ಲಿ ಒಂದು ಪ್ರೇಮ ಮತ್ತು ಕೌಟುಂಬಿಕ ಕಥೆ ಹೇಳುವುದಕ್ಕೆ ಹೊರಟಿದ್ದೇವೆ.
ಕನ್ನಡದಲ್ಲೇ ಒಂದು ಶೀರ್ಷಿಕೆ ಇಡುವುದಕ್ಕೆ ಬಹಳ ಯೋಚನೆ ಮಾಡಿದೆವು. ಆದರೆ, ಸೂಕ್ತ ಪದಗಳು ಸಿಗಲಿಲ್ಲ. ಇವತ್ತಿನ ತಲೆಮಾರಿನವರಿಗೆ ಆಕರ್ಷಿಸುವಂತಹ ಶೀರ್ಷಿಕೆ ಇಡಬೇಕು ಎಂಬ ಕಾರಣಕ್ಕೆ ಈ ಶೀರ್ಷಿಕೆ ಇಟ್ಟಿದ್ದೇವೆ’ ಎಂದರು.
ಶ್ರೀಜಿತ್ ಶೆಟ್ಟಿ ಈ ಚಿತರದಲ್ಲಿ ಸತ್ಯ ಸತ್ಯ ಎಂಬ ಪಾತ್ರವನ್ನು ಮಾಡಿದ್ದಾರಂತೆ. ‘ಹೆಸರಿಗೆ ತಕ್ಕಂತೆ ಆತ ಸತ್ಯವಂತನೇ ಅಲ್ಲದೆ ಮಹಾ ಪರಿಸರ ಪ್ರೇಮಿ. ಇಲ್ಲಿ ‘ಸೋಲ್ ಮೇಟ್ಸ್’ ಅಂದ್ರೆ ಪರಿಸರ ಮತ್ತು ಅವನ ಹುಡುಗಿ. ಇಬ್ಬರೂ ಅವನ ‘ಸೋಲ್ ಮೇಟ್ಸ್’ಗಳಾಗಿ ಇರುತ್ತಾರೆ. ಹಾಗಾಗಿ, ಈ ಶೀರ್ಷಿಕೆ ಚಿತ್ರಕ್ಕೆ ಸರಿಯಾಗಿ ಹೊಂದುತ್ತದೆ’ ಎಂದರು.
‘ಗನ್ಸ್ ಆ್ಯಂಡ್ ರೋಸಸ್’ ಚಿತ್ರದಲ್ಲಿ ನಟಿಸಿದ್ದ ನಿಷ್ಕಲಾ, ಇಲ್ಲಿ ಮೃದು ಮನಸ್ಸಿನ ಹುಡುಗಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರಂತೆ. ‘ಈ ಚಿತ್ರದಲ್ಲಿ ಭೂಮಿ ಎಂಬ ಮೃದು ಮನಸಿನ ಹುಡುಗಿ ಪಾತ್ರವನ್ನು ಮಾಡಿದ್ದೇನೆ. ಈ ಚಿತ್ರದ ಪ್ರತಿಯೊಂದು ಹಾಡು ಬಹಳ ಚೆನ್ನಾಗಿ ಮೂಡಿ ಬಂದಿದೆ’ ಎಂದರು.
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ.…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ ಎಂದು ಸಚಿವೆ…
ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ.…
ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ. ನಾಗರಹೊಳೆ ರಾಷ್ಟ್ರೀಯ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್ ಸ್ಟ್ರೋಕ್ ಭೀತಿ ಎದುರಾಗಿದೆ. ಹಲವೆಡೆ…
ಚಾಮರಾಜನಗರ: ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ನಿಂದಾಗಿ ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ…