ಮನರಂಜನೆ

ಹುಡುಗ, ಹುಡುಗಿ ಮತ್ತು ಪರಿಸರ… ‘ಸೋಲ್ ಮೇಟ್ಸ್’ ಚಿತ್ರದ ಹಾಡು ಬಿಡುಗಡೆ

ಹುಡುಗ, ಹುಡುಗಿ ಸುತ್ತ ಹಲವು ಚಿತ್ರಗಳು ಬಂದಿವೆ. ಅವರಿಬ್ಬರ ಕಥೆಯನ್ನು ಪರಿಸರದ ಹಿನ್ನೆಲೆಯಲ್ಲಿ ಹೇಳುವ ಪ್ರಯತ್ನವನ್ನು ಹೊಸ ಚಿತ್ರವೊಂದರಲ್ಲಿ ಮಾಡಲಾಗಿದೆ. ಅದೇ ‘ಸೋಲ್‍ ಮೇಟ್ಸ್’. ಈ ಚಿತ್ರವನ್ನು ಶಂಕರ್ ಪಿ.ವಿ ನಿರ್ದೇಶಿಸುವುದರ ಜೊತೆಗೆ ನಿರ್ಮಾಣವನ್ನೂ ಮಾಡಿದ್ದಾರೆ.

ಈ ಚಿತ್ರಕ್ಕೆ ಹಂಸಲೇಖ ಸಾಹಿತ್ಯ ಮತ್ತು ಸಂಗೀತವನ್ನು ಸಂಯೋಜಿಸಿದ್ದು, ಈ ಪೈಕಿ ಮೊದಲ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ‘ಕಿಲಕಿಲ…’ ಎಂದು ಸಾಗುವ ಈ ಹಾಡಿಗೆ ಅನಿರುದ್ಧ್ ಶಾಸ್ತ್ರಿ, ಅಂಕಿತಾ ಕುಂಡು ಧನಿಯಾಗಿದ್ದಾರೆ. ಚಿತ್ರದಲ್ಲಿ ಶ್ರೀಜಿತ್ ಸೂರ್ಯ, ಪ್ರಸನ್ನ ಶೆಟ್ಟಿ, ಯಶ್ವಿಕಾ ನಿಷ್ಕಲ, ರಜನಿ, ಯಶ್ ಶೆಟ್ಟಿ, ಶರತ್ ಲೋಹಿತಾಶ್ವ, ಅರವಿಂದ್ ರಾವ್, ಅರುಣಾ ಬಾಲರಾಜ್, ನವೀನ್ ಡಿ ಪಡೀಲ್ ಮುಂತಾದವರು ನಟಿಸಿದ್ದಾರೆ.

‘ಸೋಲ್‍ ಮೇಟ್ಸ್’ ಕುರಿತು ಮಾತನಾಡುವ ನಿರ್ದೇಶಕ ಶಂಕರ್ ಪಿ.ವಿ, ‘ನನಗೆ ಚಿಕ್ಕ ವಯಸ್ಸಿನಿಂದ ಸಿನಿಮಾ ಹುಚ್ಚು. ನಾನು ಮೊದಲಿಗೆ ನೋಡಿದ ಸಿನಿಮಾ ಅಂದ್ರೆ ಅದು ‘ಪುಟ್ನಂಜ. ಅಲ್ಲಿಂದ ನನ್ನ ಮತ್ತು ಹಂಸಲೇಖ ಅವರ ನಂಟು ಬೆಳೆಯಿತು ಎಂಬುದು ನನ್ನ ನಂಬಿಕೆ.

ನನ್ನ ಮೊದಲ ಸಿನಿಮಾಗೆ ಅವರೇ ಸಂಗೀತ ಸಂಯೋಜಿಸಬೇಕು ಎಂಬುದು ನನ್ನ ಆಸೆಯಾಗಿತ್ತು. ಈ ಚಿತ್ರಕ್ಕೆ ಅವರು ಐದು ಹಾಡುಗಳನ್ನು ಸಂಯೋಜಿಸಿದ್ದಾರೆ. ಚಿತ್ರದ ಕೆಲಸಗಳು ಮುಗಿಯುತ್ತಾ ಬಂದಿದ್ದು, ಸೆಪ್ಟೆಂಬರ್ ತಿಂಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ’ ಎಂದರು,

ಪರಿಸರದ ಹಿನ್ನೆಲೆಯಲ್ಲಿ ಸಾಗುವ ಕಥೆ ಇದು ಎನ್ನುವ ಶಂಕರ್, ‘ನಾನು ಈ ಹಿಂದೆ ಯಾರ ಜೊತೆಗೆ ಕೆಲಸ ಮಾಡಿಲ್ಲ. ಹುಡುಗ, ಹುಡುಗಿ ಪರಿಸರವನ್ನು ಹೇಗೆ ಕಾಪಾಡಿಕೊಳ್ಳಬೇಕು ಎಂಬುದು ಈ ಚಿತ್ರದ ಮೂಲಕ ಹೇಳಿದ್ದೇವೆ. ಪರಿಸರದ ಹಿನ್ನೆಲೆಯಲ್ಲಿ ಒಂದು ಪ್ರೇಮ ಮತ್ತು ಕೌಟುಂಬಿಕ ಕಥೆ ಹೇಳುವುದಕ್ಕೆ ಹೊರಟಿದ್ದೇವೆ.

ಕನ್ನಡದಲ್ಲೇ ಒಂದು ಶೀರ್ಷಿಕೆ ಇಡುವುದಕ್ಕೆ ಬಹಳ ಯೋಚನೆ ಮಾಡಿದೆವು. ಆದರೆ, ಸೂಕ್ತ ಪದಗಳು ಸಿಗಲಿಲ್ಲ. ಇವತ್ತಿನ ತಲೆಮಾರಿನವರಿಗೆ ಆಕರ್ಷಿಸುವಂತಹ ಶೀರ್ಷಿಕೆ ಇಡಬೇಕು ಎಂಬ ಕಾರಣಕ್ಕೆ ಈ ಶೀರ್ಷಿಕೆ ಇಟ್ಟಿದ್ದೇವೆ’ ಎಂದರು.

ಶ್ರೀಜಿತ್‍ ಶೆಟ್ಟಿ ಈ ಚಿತರದಲ್ಲಿ ಸತ್ಯ ಸತ್ಯ ಎಂಬ ಪಾತ್ರವನ್ನು ಮಾಡಿದ್ದಾರಂತೆ. ‘ಹೆಸರಿಗೆ ತಕ್ಕಂತೆ ಆತ ಸತ್ಯವಂತನೇ ಅಲ್ಲದೆ ಮಹಾ ಪರಿಸರ ಪ್ರೇಮಿ. ಇಲ್ಲಿ ‘ಸೋಲ್ ಮೇಟ್ಸ್’ ಅಂದ್ರೆ ಪರಿಸರ ಮತ್ತು ಅವನ ಹುಡುಗಿ. ಇಬ್ಬರೂ ಅವನ ‘ಸೋಲ್ ಮೇಟ್ಸ್’ಗಳಾಗಿ ಇರುತ್ತಾರೆ. ಹಾಗಾಗಿ, ಈ ಶೀರ್ಷಿಕೆ ಚಿತ್ರಕ್ಕೆ ಸರಿಯಾಗಿ ಹೊಂದುತ್ತದೆ’ ಎಂದರು.

‘ಗನ್ಸ್ ಆ್ಯಂಡ್‍ ರೋಸಸ್’ ಚಿತ್ರದಲ್ಲಿ ನಟಿಸಿದ್ದ ನಿಷ್ಕಲಾ, ಇಲ್ಲಿ ಮೃದು ಮನಸ್ಸಿನ ಹುಡುಗಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರಂತೆ. ‘ಈ ಚಿತ್ರದಲ್ಲಿ ಭೂಮಿ ಎಂಬ ಮೃದು ಮನಸಿನ ಹುಡುಗಿ ಪಾತ್ರವನ್ನು ಮಾಡಿದ್ದೇನೆ. ಈ ಚಿತ್ರದ ಪ್ರತಿಯೊಂದು ಹಾಡು ಬಹಳ ಚೆನ್ನಾಗಿ ಮೂಡಿ ಬಂದಿದೆ’ ಎಂದರು.

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

5 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

5 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

6 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

7 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

9 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

9 hours ago