ಮನರಂಜನೆ

ಹುಡುಗ, ಹುಡುಗಿ ಮತ್ತು ಪರಿಸರ… ‘ಸೋಲ್ ಮೇಟ್ಸ್’ ಚಿತ್ರದ ಹಾಡು ಬಿಡುಗಡೆ

ಹುಡುಗ, ಹುಡುಗಿ ಸುತ್ತ ಹಲವು ಚಿತ್ರಗಳು ಬಂದಿವೆ. ಅವರಿಬ್ಬರ ಕಥೆಯನ್ನು ಪರಿಸರದ ಹಿನ್ನೆಲೆಯಲ್ಲಿ ಹೇಳುವ ಪ್ರಯತ್ನವನ್ನು ಹೊಸ ಚಿತ್ರವೊಂದರಲ್ಲಿ ಮಾಡಲಾಗಿದೆ. ಅದೇ ‘ಸೋಲ್‍ ಮೇಟ್ಸ್’. ಈ ಚಿತ್ರವನ್ನು ಶಂಕರ್ ಪಿ.ವಿ ನಿರ್ದೇಶಿಸುವುದರ ಜೊತೆಗೆ ನಿರ್ಮಾಣವನ್ನೂ ಮಾಡಿದ್ದಾರೆ.

ಈ ಚಿತ್ರಕ್ಕೆ ಹಂಸಲೇಖ ಸಾಹಿತ್ಯ ಮತ್ತು ಸಂಗೀತವನ್ನು ಸಂಯೋಜಿಸಿದ್ದು, ಈ ಪೈಕಿ ಮೊದಲ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ‘ಕಿಲಕಿಲ…’ ಎಂದು ಸಾಗುವ ಈ ಹಾಡಿಗೆ ಅನಿರುದ್ಧ್ ಶಾಸ್ತ್ರಿ, ಅಂಕಿತಾ ಕುಂಡು ಧನಿಯಾಗಿದ್ದಾರೆ. ಚಿತ್ರದಲ್ಲಿ ಶ್ರೀಜಿತ್ ಸೂರ್ಯ, ಪ್ರಸನ್ನ ಶೆಟ್ಟಿ, ಯಶ್ವಿಕಾ ನಿಷ್ಕಲ, ರಜನಿ, ಯಶ್ ಶೆಟ್ಟಿ, ಶರತ್ ಲೋಹಿತಾಶ್ವ, ಅರವಿಂದ್ ರಾವ್, ಅರುಣಾ ಬಾಲರಾಜ್, ನವೀನ್ ಡಿ ಪಡೀಲ್ ಮುಂತಾದವರು ನಟಿಸಿದ್ದಾರೆ.

‘ಸೋಲ್‍ ಮೇಟ್ಸ್’ ಕುರಿತು ಮಾತನಾಡುವ ನಿರ್ದೇಶಕ ಶಂಕರ್ ಪಿ.ವಿ, ‘ನನಗೆ ಚಿಕ್ಕ ವಯಸ್ಸಿನಿಂದ ಸಿನಿಮಾ ಹುಚ್ಚು. ನಾನು ಮೊದಲಿಗೆ ನೋಡಿದ ಸಿನಿಮಾ ಅಂದ್ರೆ ಅದು ‘ಪುಟ್ನಂಜ. ಅಲ್ಲಿಂದ ನನ್ನ ಮತ್ತು ಹಂಸಲೇಖ ಅವರ ನಂಟು ಬೆಳೆಯಿತು ಎಂಬುದು ನನ್ನ ನಂಬಿಕೆ.

ನನ್ನ ಮೊದಲ ಸಿನಿಮಾಗೆ ಅವರೇ ಸಂಗೀತ ಸಂಯೋಜಿಸಬೇಕು ಎಂಬುದು ನನ್ನ ಆಸೆಯಾಗಿತ್ತು. ಈ ಚಿತ್ರಕ್ಕೆ ಅವರು ಐದು ಹಾಡುಗಳನ್ನು ಸಂಯೋಜಿಸಿದ್ದಾರೆ. ಚಿತ್ರದ ಕೆಲಸಗಳು ಮುಗಿಯುತ್ತಾ ಬಂದಿದ್ದು, ಸೆಪ್ಟೆಂಬರ್ ತಿಂಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ’ ಎಂದರು,

ಪರಿಸರದ ಹಿನ್ನೆಲೆಯಲ್ಲಿ ಸಾಗುವ ಕಥೆ ಇದು ಎನ್ನುವ ಶಂಕರ್, ‘ನಾನು ಈ ಹಿಂದೆ ಯಾರ ಜೊತೆಗೆ ಕೆಲಸ ಮಾಡಿಲ್ಲ. ಹುಡುಗ, ಹುಡುಗಿ ಪರಿಸರವನ್ನು ಹೇಗೆ ಕಾಪಾಡಿಕೊಳ್ಳಬೇಕು ಎಂಬುದು ಈ ಚಿತ್ರದ ಮೂಲಕ ಹೇಳಿದ್ದೇವೆ. ಪರಿಸರದ ಹಿನ್ನೆಲೆಯಲ್ಲಿ ಒಂದು ಪ್ರೇಮ ಮತ್ತು ಕೌಟುಂಬಿಕ ಕಥೆ ಹೇಳುವುದಕ್ಕೆ ಹೊರಟಿದ್ದೇವೆ.

ಕನ್ನಡದಲ್ಲೇ ಒಂದು ಶೀರ್ಷಿಕೆ ಇಡುವುದಕ್ಕೆ ಬಹಳ ಯೋಚನೆ ಮಾಡಿದೆವು. ಆದರೆ, ಸೂಕ್ತ ಪದಗಳು ಸಿಗಲಿಲ್ಲ. ಇವತ್ತಿನ ತಲೆಮಾರಿನವರಿಗೆ ಆಕರ್ಷಿಸುವಂತಹ ಶೀರ್ಷಿಕೆ ಇಡಬೇಕು ಎಂಬ ಕಾರಣಕ್ಕೆ ಈ ಶೀರ್ಷಿಕೆ ಇಟ್ಟಿದ್ದೇವೆ’ ಎಂದರು.

ಶ್ರೀಜಿತ್‍ ಶೆಟ್ಟಿ ಈ ಚಿತರದಲ್ಲಿ ಸತ್ಯ ಸತ್ಯ ಎಂಬ ಪಾತ್ರವನ್ನು ಮಾಡಿದ್ದಾರಂತೆ. ‘ಹೆಸರಿಗೆ ತಕ್ಕಂತೆ ಆತ ಸತ್ಯವಂತನೇ ಅಲ್ಲದೆ ಮಹಾ ಪರಿಸರ ಪ್ರೇಮಿ. ಇಲ್ಲಿ ‘ಸೋಲ್ ಮೇಟ್ಸ್’ ಅಂದ್ರೆ ಪರಿಸರ ಮತ್ತು ಅವನ ಹುಡುಗಿ. ಇಬ್ಬರೂ ಅವನ ‘ಸೋಲ್ ಮೇಟ್ಸ್’ಗಳಾಗಿ ಇರುತ್ತಾರೆ. ಹಾಗಾಗಿ, ಈ ಶೀರ್ಷಿಕೆ ಚಿತ್ರಕ್ಕೆ ಸರಿಯಾಗಿ ಹೊಂದುತ್ತದೆ’ ಎಂದರು.

‘ಗನ್ಸ್ ಆ್ಯಂಡ್‍ ರೋಸಸ್’ ಚಿತ್ರದಲ್ಲಿ ನಟಿಸಿದ್ದ ನಿಷ್ಕಲಾ, ಇಲ್ಲಿ ಮೃದು ಮನಸ್ಸಿನ ಹುಡುಗಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರಂತೆ. ‘ಈ ಚಿತ್ರದಲ್ಲಿ ಭೂಮಿ ಎಂಬ ಮೃದು ಮನಸಿನ ಹುಡುಗಿ ಪಾತ್ರವನ್ನು ಮಾಡಿದ್ದೇನೆ. ಈ ಚಿತ್ರದ ಪ್ರತಿಯೊಂದು ಹಾಡು ಬಹಳ ಚೆನ್ನಾಗಿ ಮೂಡಿ ಬಂದಿದೆ’ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಯೂಟ ಶ್ಲಾಘನೀಯ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…

1 hour ago

ಓದುಗರ ಪತ್ರ: ಪೊಲೀಸ್ ಅಧಿಕಾರಿಯ ಅಸಭ್ಯ ವರ್ತನೆ ಅಕ್ಷಮ್ಯ

ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…

1 hour ago

ಓದುಗರ ಪತ್ರ: ಅಮೆರಿಕ ಅಧ್ಯಕ್ಷರ ಹುಚ್ಚುತನ

ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…

1 hour ago

ಕಾಡ್ಗಿಚ್ಚು ತಡೆಗೆ ನಾನಾ ಮುಂಜಾಗ್ರತಾ ಕ್ರಮ

ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…

1 hour ago

ಬಾಚಳ್ಳಿ ಆಂಜನೇಯಸ್ವಾಮಿ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆ

ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…

2 hours ago