ಹುಡುಗ, ಹುಡುಗಿ ಸುತ್ತ ಹಲವು ಚಿತ್ರಗಳು ಬಂದಿವೆ. ಅವರಿಬ್ಬರ ಕಥೆಯನ್ನು ಪರಿಸರದ ಹಿನ್ನೆಲೆಯಲ್ಲಿ ಹೇಳುವ ಪ್ರಯತ್ನವನ್ನು ಹೊಸ ಚಿತ್ರವೊಂದರಲ್ಲಿ ಮಾಡಲಾಗಿದೆ. ಅದೇ ‘ಸೋಲ್ ಮೇಟ್ಸ್’. ಈ ಚಿತ್ರವನ್ನು ಶಂಕರ್ ಪಿ.ವಿ ನಿರ್ದೇಶಿಸುವುದರ ಜೊತೆಗೆ ನಿರ್ಮಾಣವನ್ನೂ ಮಾಡಿದ್ದಾರೆ.
ಈ ಚಿತ್ರಕ್ಕೆ ಹಂಸಲೇಖ ಸಾಹಿತ್ಯ ಮತ್ತು ಸಂಗೀತವನ್ನು ಸಂಯೋಜಿಸಿದ್ದು, ಈ ಪೈಕಿ ಮೊದಲ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ‘ಕಿಲಕಿಲ…’ ಎಂದು ಸಾಗುವ ಈ ಹಾಡಿಗೆ ಅನಿರುದ್ಧ್ ಶಾಸ್ತ್ರಿ, ಅಂಕಿತಾ ಕುಂಡು ಧನಿಯಾಗಿದ್ದಾರೆ. ಚಿತ್ರದಲ್ಲಿ ಶ್ರೀಜಿತ್ ಸೂರ್ಯ, ಪ್ರಸನ್ನ ಶೆಟ್ಟಿ, ಯಶ್ವಿಕಾ ನಿಷ್ಕಲ, ರಜನಿ, ಯಶ್ ಶೆಟ್ಟಿ, ಶರತ್ ಲೋಹಿತಾಶ್ವ, ಅರವಿಂದ್ ರಾವ್, ಅರುಣಾ ಬಾಲರಾಜ್, ನವೀನ್ ಡಿ ಪಡೀಲ್ ಮುಂತಾದವರು ನಟಿಸಿದ್ದಾರೆ.
‘ಸೋಲ್ ಮೇಟ್ಸ್’ ಕುರಿತು ಮಾತನಾಡುವ ನಿರ್ದೇಶಕ ಶಂಕರ್ ಪಿ.ವಿ, ‘ನನಗೆ ಚಿಕ್ಕ ವಯಸ್ಸಿನಿಂದ ಸಿನಿಮಾ ಹುಚ್ಚು. ನಾನು ಮೊದಲಿಗೆ ನೋಡಿದ ಸಿನಿಮಾ ಅಂದ್ರೆ ಅದು ‘ಪುಟ್ನಂಜ. ಅಲ್ಲಿಂದ ನನ್ನ ಮತ್ತು ಹಂಸಲೇಖ ಅವರ ನಂಟು ಬೆಳೆಯಿತು ಎಂಬುದು ನನ್ನ ನಂಬಿಕೆ.
ನನ್ನ ಮೊದಲ ಸಿನಿಮಾಗೆ ಅವರೇ ಸಂಗೀತ ಸಂಯೋಜಿಸಬೇಕು ಎಂಬುದು ನನ್ನ ಆಸೆಯಾಗಿತ್ತು. ಈ ಚಿತ್ರಕ್ಕೆ ಅವರು ಐದು ಹಾಡುಗಳನ್ನು ಸಂಯೋಜಿಸಿದ್ದಾರೆ. ಚಿತ್ರದ ಕೆಲಸಗಳು ಮುಗಿಯುತ್ತಾ ಬಂದಿದ್ದು, ಸೆಪ್ಟೆಂಬರ್ ತಿಂಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ’ ಎಂದರು,
ಪರಿಸರದ ಹಿನ್ನೆಲೆಯಲ್ಲಿ ಸಾಗುವ ಕಥೆ ಇದು ಎನ್ನುವ ಶಂಕರ್, ‘ನಾನು ಈ ಹಿಂದೆ ಯಾರ ಜೊತೆಗೆ ಕೆಲಸ ಮಾಡಿಲ್ಲ. ಹುಡುಗ, ಹುಡುಗಿ ಪರಿಸರವನ್ನು ಹೇಗೆ ಕಾಪಾಡಿಕೊಳ್ಳಬೇಕು ಎಂಬುದು ಈ ಚಿತ್ರದ ಮೂಲಕ ಹೇಳಿದ್ದೇವೆ. ಪರಿಸರದ ಹಿನ್ನೆಲೆಯಲ್ಲಿ ಒಂದು ಪ್ರೇಮ ಮತ್ತು ಕೌಟುಂಬಿಕ ಕಥೆ ಹೇಳುವುದಕ್ಕೆ ಹೊರಟಿದ್ದೇವೆ.
ಕನ್ನಡದಲ್ಲೇ ಒಂದು ಶೀರ್ಷಿಕೆ ಇಡುವುದಕ್ಕೆ ಬಹಳ ಯೋಚನೆ ಮಾಡಿದೆವು. ಆದರೆ, ಸೂಕ್ತ ಪದಗಳು ಸಿಗಲಿಲ್ಲ. ಇವತ್ತಿನ ತಲೆಮಾರಿನವರಿಗೆ ಆಕರ್ಷಿಸುವಂತಹ ಶೀರ್ಷಿಕೆ ಇಡಬೇಕು ಎಂಬ ಕಾರಣಕ್ಕೆ ಈ ಶೀರ್ಷಿಕೆ ಇಟ್ಟಿದ್ದೇವೆ’ ಎಂದರು.
ಶ್ರೀಜಿತ್ ಶೆಟ್ಟಿ ಈ ಚಿತರದಲ್ಲಿ ಸತ್ಯ ಸತ್ಯ ಎಂಬ ಪಾತ್ರವನ್ನು ಮಾಡಿದ್ದಾರಂತೆ. ‘ಹೆಸರಿಗೆ ತಕ್ಕಂತೆ ಆತ ಸತ್ಯವಂತನೇ ಅಲ್ಲದೆ ಮಹಾ ಪರಿಸರ ಪ್ರೇಮಿ. ಇಲ್ಲಿ ‘ಸೋಲ್ ಮೇಟ್ಸ್’ ಅಂದ್ರೆ ಪರಿಸರ ಮತ್ತು ಅವನ ಹುಡುಗಿ. ಇಬ್ಬರೂ ಅವನ ‘ಸೋಲ್ ಮೇಟ್ಸ್’ಗಳಾಗಿ ಇರುತ್ತಾರೆ. ಹಾಗಾಗಿ, ಈ ಶೀರ್ಷಿಕೆ ಚಿತ್ರಕ್ಕೆ ಸರಿಯಾಗಿ ಹೊಂದುತ್ತದೆ’ ಎಂದರು.
‘ಗನ್ಸ್ ಆ್ಯಂಡ್ ರೋಸಸ್’ ಚಿತ್ರದಲ್ಲಿ ನಟಿಸಿದ್ದ ನಿಷ್ಕಲಾ, ಇಲ್ಲಿ ಮೃದು ಮನಸ್ಸಿನ ಹುಡುಗಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರಂತೆ. ‘ಈ ಚಿತ್ರದಲ್ಲಿ ಭೂಮಿ ಎಂಬ ಮೃದು ಮನಸಿನ ಹುಡುಗಿ ಪಾತ್ರವನ್ನು ಮಾಡಿದ್ದೇನೆ. ಈ ಚಿತ್ರದ ಪ್ರತಿಯೊಂದು ಹಾಡು ಬಹಳ ಚೆನ್ನಾಗಿ ಮೂಡಿ ಬಂದಿದೆ’ ಎಂದರು.
ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…
ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್ಡಿಎ…
ಬೆಂಗಳೂರು: ತಮಿಳುನಾಡಿನ ಮತ ಎಣಿಕೆಯಲ್ಲಿ ಟಿವಿಕೆ ಭಾರೀ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆ ಪಕ್ಷದ ಮುಖ್ಯಸ್ಥ ನಟ ವಿಜಯ್ಗೆ ಸಿಎಂ…
ಬಾಗಲಕೋಟೆ : ಹಿರಿಯ ನಾಯಕ ಎಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್…
ತಿರುವನಂತಪುರಂ : ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆ ಸಾಧಿಸುತ್ತಿದ್ದು, ದಶಕದ ನಂತರ ಅಧಿಕಾರಕ್ಕೆ ಮರಳುವ ಸಂಭವನೀಯ…