ಮನರಂಜನೆ

ಕನ್ನಡದ ಬಗ್ಗೆ ಕಮಲ್‍ ಹಾಸನ್‍ ಹೇಳಿಕೆ; ಶುರುವಾಯ್ತು ‘ಬಾಯ್ಕಾಟ್‍ ಥಗ್‍ ಲೈಫ್‍’ ಅಭಿಯಾನ

‘ಥಗ್‍ ಲೈಫ್‍’ ಚಿತ್ರದ ಪ್ರೀ-ರಿಲೀಸ್‍ ಕಾರ್ಯಕ್ರಮದಲ್ಲಿ ‘ಕನ್ನಡ ಭಾಷೆಯು ತಮಿಳಿನಿಂದ ಹುಟ್ಟಿತು…’ ಎಂದು ಕಮಲ್‍ ಹಾಸನ್‍ ಅವರ ಹೇಳಿಕೆ ಸಾಕಷ್ಟು ವಿವಾದಕ್ಕೀಡಾಗಿದೆ. ಈ ಬಗ್ಗೆ ಸೋಷಿಯಲ್‍ ಮೀಡಿಯಾದಲ್ಲಿ ಟೀಕೆಗಳು ವ್ಯಕ್ತವಾಗುತ್ತಿದ್ದು, ‘ಥಗ್‍ ಲೈಫ್‍’ ಚಿತ್ರವನ್ನು ಕರ್ನಾಟಕದಲ್ಲಿ ಬ್ಯಾನ್‍ ಮಾಡಬೇಕು ಎಂದು ‘ಬಾಯ್ಕಾಟ್‍ ಥಗ್‍ ಲೈಫ್‍’ ಅಭಿಯಾನ ಪ್ರಾರಂಭವಾಗಿದೆ.

ಕನ್ನಡ ಮತ್ತು ಕರ್ನಾಟಕದ ಬಗ್ಗೆ ಸದಾ ಒಳ್ಳೆಯ ಮಾತುಗಳನ್ನಾಡುತ್ತಿದ್ದ ಕಮಲ್ ಹಾಸನ್‍ ಇಷ್ಟಕ್ಕೂ ಹೀಗೆ ಮಾತನಾಡಿದ್ದು ಯಾಕೆ? ಎಂಬ ವಿಷಯ ಇದೀಗ ಚರ್ಚೆ ಆಗುತ್ತಿದೆ. ಎಲ್ಲಾ ಭಾಷೆಗಳೂ ಇನ್ನೊಂದು ಭಾಷೆಯಿಂದ ಯಾವುದೋ ಒಂದು ಕಾರಣಕ್ಕೆ ಸ್ಫೂರ್ತಿ ಪಡೆದಿರುತ್ತವೆ. ಹಾಗಂತ ಯಾವುದೋ ಒಂದು ಭಾಷೆ ಶ್ರೇಷ್ಠ ಎಂದರ್ಥವಲ್ಲ. ಹೀಗಿರುವಾಗ, ಕಮಲ್‍ ಹಾಸನ್‍ ಅವರಿಗೆ ಇಂಥದ್ದೊಂದು ವಿವಾದಾತ್ಮಕ ಹೇಳಿಕೆ ನೀಡುವ ಅವಶ್ಯಕತೆ ಇರಲಿಲ್ಲ.

ಬರೀ ಕಮಲ್‍ ಹಾಸನ್‍ ಅಷ್ಟೇ ಅಲ್ಲ, ಈ ವಿಷಯದಲ್ಲಿ ಶಿವರಾಜಕುಮಾರ್ ಯಾಕೆ ಸುಮ್ಮನಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಏಕೆಂದರೆ, ಕಮಲ್‍ ಹಾಸನ್‍ ಅವರು ಇಂಥದ್ದೊಂದು ಮಾತು ಹೇಳಿದ್ದು ಶಿವರಾಜಕುಮಾರ್ ಎದುರಲ್ಲೇ. ಕಮಲ್‍ ಹಾಸನ್‍ ಇಂಥದ್ದೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದರೂ, ಈ ವಿಷಯವಾಗಿ ಶಿವರಾಜಕುಮಾರ್ ಯಾಕೆ ಮೌನವಹಿಸಿದ್ದಾರೆ, ಯಾಕೆ ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಕೆಲವರು ಸೋಷಿಯಲ್‍ ಮೀಡಿಯಾದಲ್ಲಿ ಪ್ರಶ್ನಿಸಿದ್ದಾರೆ.

ಕಮಲ್‍ ಹಾಸನ್‍ ಅವರ ಈ ಹೇಳಿಕೆಯ ಕುರಿತು ಕನ್ನಡ ಚಿತ್ರರಂಗದ ಯಾವೊಬ್ಬ ನಟ-ನಟಿ ಅಥವಾ ಸಂಘ-ಸಂಸ್ಥೆ ಯಾವುದೇ ಹೇಳಿಕೆ ನೀಡಿಲ್ಲ. ಆದರೆ, ಕಮಲ್‍ ಹಾಸನ್‍ ಅವರ ಮಾತುಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಖಂಡಿಸಿದ್ದಾರೆ.

‘ಮಾತೃಭಾಷೆಯನ್ನು ಪ್ರೀತಿಸಬೇಕು, ಆದರೆ ಅದರ ಹೆಸರಿನಲ್ಲಿ ದುರಭಿಮಾನ ಮೆರೆಯುವುದು ಸಂಸ್ಕೃತಿ ಹೀನ ನಡವಳಿಕೆಯಾಗುತ್ತದೆ. ಅದರಲ್ಲೂ ಕಲಾವಿದರಿಗೆ ಪ್ರತಿಯೊಂದು ಭಾಷೆಯನ್ನೂ ಗೌರವಿಸುವ ಸಂಸ್ಕಾರ ಇರಬೇಕು. ಕನ್ನಡವೂ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ನಟಿಸಿರುವ ನಟ ಕಮಲ್‍ ಹಾಸನ್‍, ತಮ್ಮ ತಮಿಳು ಭಾಷೆಯನ್ನು ವೈಭವೀಕರಿಸುವ ಮತ್ತಿನಲ್ಲಿ ನಟ ಶಿವರಾಜ್ ಕುಮಾರ್ ಅವರನ್ನೂ ಕುಳ್ಳಿರಿಸಿಕೊಂಡು ಕನ್ನಡವನ್ನು ಅವಮಾನಿಸಿರುವುದು ಉದ್ಧಟತನ ಹಾಗೂ ದುರಹಂಕಾರದ ಪರಮಾವಧಿಯಾಗಿದೆ’ ಎಂದು ಹೇಳಿದ್ದಾರೆ.

ಒಟ್ಟಾರೆ ಕಮಲ್‍ ಹಾನಸ್‌ ಮಾತುಗಳು ಟೀಕೆಗೆ ಒಳಗಾಗುವುದರ ಜೊತೆಗೆ, ಅವರು ಈ ಕುರಿತು ಕ್ಷಮೆ ಕೇಳದಿದ್ದರೆ ಅವರ ಹೊಸ ಚಿತ್ರವನ್ನು ಬ್ಯಾನ್‍ ಮಾಡಬೇಕು ಎನ್ನುವವರೆಗೂ ವಿಷಯ ಬೆಳೆದಿದೆ. ಇದುವರೆಗೂ ಕಮಲ್‍ ಹಾಸನ್‍ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ವಿಷಯವಾಗಿ ಅವರು ಏನು ಹೇಳುತ್ತಾರೋ ಎಂಬುದನ್ನು ಕಾದು ನೋಡಬೇಕು.

ಆಂದೋಲನ ಡೆಸ್ಕ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

2 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

3 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

3 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

4 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

4 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

4 hours ago