ಮನರಂಜನೆ

ಕನ್ನಡದ ಬಗ್ಗೆ ಕಮಲ್‍ ಹಾಸನ್‍ ಹೇಳಿಕೆ; ಶುರುವಾಯ್ತು ‘ಬಾಯ್ಕಾಟ್‍ ಥಗ್‍ ಲೈಫ್‍’ ಅಭಿಯಾನ

‘ಥಗ್‍ ಲೈಫ್‍’ ಚಿತ್ರದ ಪ್ರೀ-ರಿಲೀಸ್‍ ಕಾರ್ಯಕ್ರಮದಲ್ಲಿ ‘ಕನ್ನಡ ಭಾಷೆಯು ತಮಿಳಿನಿಂದ ಹುಟ್ಟಿತು…’ ಎಂದು ಕಮಲ್‍ ಹಾಸನ್‍ ಅವರ ಹೇಳಿಕೆ ಸಾಕಷ್ಟು ವಿವಾದಕ್ಕೀಡಾಗಿದೆ. ಈ ಬಗ್ಗೆ ಸೋಷಿಯಲ್‍ ಮೀಡಿಯಾದಲ್ಲಿ ಟೀಕೆಗಳು ವ್ಯಕ್ತವಾಗುತ್ತಿದ್ದು, ‘ಥಗ್‍ ಲೈಫ್‍’ ಚಿತ್ರವನ್ನು ಕರ್ನಾಟಕದಲ್ಲಿ ಬ್ಯಾನ್‍ ಮಾಡಬೇಕು ಎಂದು ‘ಬಾಯ್ಕಾಟ್‍ ಥಗ್‍ ಲೈಫ್‍’ ಅಭಿಯಾನ ಪ್ರಾರಂಭವಾಗಿದೆ.

ಕನ್ನಡ ಮತ್ತು ಕರ್ನಾಟಕದ ಬಗ್ಗೆ ಸದಾ ಒಳ್ಳೆಯ ಮಾತುಗಳನ್ನಾಡುತ್ತಿದ್ದ ಕಮಲ್ ಹಾಸನ್‍ ಇಷ್ಟಕ್ಕೂ ಹೀಗೆ ಮಾತನಾಡಿದ್ದು ಯಾಕೆ? ಎಂಬ ವಿಷಯ ಇದೀಗ ಚರ್ಚೆ ಆಗುತ್ತಿದೆ. ಎಲ್ಲಾ ಭಾಷೆಗಳೂ ಇನ್ನೊಂದು ಭಾಷೆಯಿಂದ ಯಾವುದೋ ಒಂದು ಕಾರಣಕ್ಕೆ ಸ್ಫೂರ್ತಿ ಪಡೆದಿರುತ್ತವೆ. ಹಾಗಂತ ಯಾವುದೋ ಒಂದು ಭಾಷೆ ಶ್ರೇಷ್ಠ ಎಂದರ್ಥವಲ್ಲ. ಹೀಗಿರುವಾಗ, ಕಮಲ್‍ ಹಾಸನ್‍ ಅವರಿಗೆ ಇಂಥದ್ದೊಂದು ವಿವಾದಾತ್ಮಕ ಹೇಳಿಕೆ ನೀಡುವ ಅವಶ್ಯಕತೆ ಇರಲಿಲ್ಲ.

ಬರೀ ಕಮಲ್‍ ಹಾಸನ್‍ ಅಷ್ಟೇ ಅಲ್ಲ, ಈ ವಿಷಯದಲ್ಲಿ ಶಿವರಾಜಕುಮಾರ್ ಯಾಕೆ ಸುಮ್ಮನಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಏಕೆಂದರೆ, ಕಮಲ್‍ ಹಾಸನ್‍ ಅವರು ಇಂಥದ್ದೊಂದು ಮಾತು ಹೇಳಿದ್ದು ಶಿವರಾಜಕುಮಾರ್ ಎದುರಲ್ಲೇ. ಕಮಲ್‍ ಹಾಸನ್‍ ಇಂಥದ್ದೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದರೂ, ಈ ವಿಷಯವಾಗಿ ಶಿವರಾಜಕುಮಾರ್ ಯಾಕೆ ಮೌನವಹಿಸಿದ್ದಾರೆ, ಯಾಕೆ ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಕೆಲವರು ಸೋಷಿಯಲ್‍ ಮೀಡಿಯಾದಲ್ಲಿ ಪ್ರಶ್ನಿಸಿದ್ದಾರೆ.

ಕಮಲ್‍ ಹಾಸನ್‍ ಅವರ ಈ ಹೇಳಿಕೆಯ ಕುರಿತು ಕನ್ನಡ ಚಿತ್ರರಂಗದ ಯಾವೊಬ್ಬ ನಟ-ನಟಿ ಅಥವಾ ಸಂಘ-ಸಂಸ್ಥೆ ಯಾವುದೇ ಹೇಳಿಕೆ ನೀಡಿಲ್ಲ. ಆದರೆ, ಕಮಲ್‍ ಹಾಸನ್‍ ಅವರ ಮಾತುಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಖಂಡಿಸಿದ್ದಾರೆ.

‘ಮಾತೃಭಾಷೆಯನ್ನು ಪ್ರೀತಿಸಬೇಕು, ಆದರೆ ಅದರ ಹೆಸರಿನಲ್ಲಿ ದುರಭಿಮಾನ ಮೆರೆಯುವುದು ಸಂಸ್ಕೃತಿ ಹೀನ ನಡವಳಿಕೆಯಾಗುತ್ತದೆ. ಅದರಲ್ಲೂ ಕಲಾವಿದರಿಗೆ ಪ್ರತಿಯೊಂದು ಭಾಷೆಯನ್ನೂ ಗೌರವಿಸುವ ಸಂಸ್ಕಾರ ಇರಬೇಕು. ಕನ್ನಡವೂ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ನಟಿಸಿರುವ ನಟ ಕಮಲ್‍ ಹಾಸನ್‍, ತಮ್ಮ ತಮಿಳು ಭಾಷೆಯನ್ನು ವೈಭವೀಕರಿಸುವ ಮತ್ತಿನಲ್ಲಿ ನಟ ಶಿವರಾಜ್ ಕುಮಾರ್ ಅವರನ್ನೂ ಕುಳ್ಳಿರಿಸಿಕೊಂಡು ಕನ್ನಡವನ್ನು ಅವಮಾನಿಸಿರುವುದು ಉದ್ಧಟತನ ಹಾಗೂ ದುರಹಂಕಾರದ ಪರಮಾವಧಿಯಾಗಿದೆ’ ಎಂದು ಹೇಳಿದ್ದಾರೆ.

ಒಟ್ಟಾರೆ ಕಮಲ್‍ ಹಾನಸ್‌ ಮಾತುಗಳು ಟೀಕೆಗೆ ಒಳಗಾಗುವುದರ ಜೊತೆಗೆ, ಅವರು ಈ ಕುರಿತು ಕ್ಷಮೆ ಕೇಳದಿದ್ದರೆ ಅವರ ಹೊಸ ಚಿತ್ರವನ್ನು ಬ್ಯಾನ್‍ ಮಾಡಬೇಕು ಎನ್ನುವವರೆಗೂ ವಿಷಯ ಬೆಳೆದಿದೆ. ಇದುವರೆಗೂ ಕಮಲ್‍ ಹಾಸನ್‍ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ವಿಷಯವಾಗಿ ಅವರು ಏನು ಹೇಳುತ್ತಾರೋ ಎಂಬುದನ್ನು ಕಾದು ನೋಡಬೇಕು.

ಆಂದೋಲನ ಡೆಸ್ಕ್

Recent Posts

ಕೊಡಗು| 13 ದಿನಗಳ ಅವಧಿಯಲ್ಲಿ ಕಾಡಾನೆ ದಾಳಿಗೆ ಮೂರನೇ ಬಲಿ: ಕಾಫಿ ಬೆಳೆಗಾರ ದಾರುಣ ಸಾವು

ಕೊಡಗು: ಕೊಡಗಿನಲ್ಲಿ ಕಾಡಾನೆ - ಮಾನವ ಸಂಘರ್ಷ ಅವ್ಯಾಹತವಾಗಿ ಮುಂದುವರೆದಿದ್ದು ಕಾಫಿ ಬೆಳೆಗಾರರೊಬ್ಬರು ಹತರಾಗಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಹಳೇ ಸಿದ್ದಾಪುರದ…

2 mins ago

ಮಂಡ್ಯ ಕೋರ್ಟ್‌ಗೆ ಮತ್ತೆ ಬಾಂಬ್ ಬೆದರಿಕೆ : ಸ್ಥಳಕ್ಕೆ ಪೊಲೀಸ್-ಬಾಂಬ್ ಸ್ಕ್ವಾಡ್ ದೌಡು

ಮಂಡ್ಯ : ಮಂಡ್ಯ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದ್ದು, ಇ-ಮೇಲ್ ಮೂಲಕ “ಕೋರ್ಟ್‌ನಲ್ಲಿ ಬಾಂಬ್ ಇಟ್ಟಿದ್ದೇವೆ” ಎಂದು…

58 mins ago

ಯುದ್ಧ ನಿಲ್ಲಿಸಲು 3 ಷರತ್ತು ಮುಂದಿಟ್ಟ ಇರಾನ್‌!

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಲ್ಲೇ ಅಮೆರಿಕಾ ಹಾಗೂ ಇಸ್ರೇಲ್ ಜೊತೆ ನಡೆಯುತ್ತಿರುವ ಸಂಘರ್ಷವನ್ನು ಅಂತ್ಯಗೊಳಿಸಲು…

1 hour ago

ಅಮೆರಿಕ ತೈಲ ಟ್ಯಾಂಕರ್ ಮೇಲೆ ಇರಾನ್ ಡ್ರೋನ್ ದಾಳಿ, ಭಾರತೀಯ ನಾವಿಕ ಸಾವು

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಪರಿಸ್ಥಿತಿ ದಿನದಿಂದ ದಿನಕ್ಕೆ ಮತ್ತಷ್ಟು ಉದ್ವಿಗ್ನವಾಗುತ್ತಿದೆ. ಇರಾನ್ ಹಾಗೂ ಅಮೆರಿಕ-ಇಸ್ರೇಲ್ ನಡುವಿನ ಸಂಘರ್ಷದ…

1 hour ago

ವಿಶ್ವಕಪ್‌ ಗೆದ್ದ ಬಳಿಕ ರೈಲು ಹತ್ತಿ ಬಂದ ಶಿವಂ ದುಬೆ!

ಮುಂಬೈ : ಭಾರತ ತಂಡ ಟಿ20 ವಿಶ್ವಕಪ್ 2026ರಲ್ಲಿ ನ್ಯೂಜಿಲೆಂಡ್‌ನ್ನು 96 ರನ್‌ಗಳಿಂದ ಮಣಿಸಿ ಐತಿಹಾಸಿಕ ಗೆಲುವು ಸಾಧಿಸಿದೆ. ಫೈನಲ್‌ನಲ್ಲಿ…

2 hours ago

ಫಾರುಕ್ ಹತ್ಯೆ ಯತ್ನ : ಆರೋಪಿ ಕಮಲ್‌ ಸಿಂಗ್‌ ಹೇಳಿದ್ದೇನು?

ಜಮ್ಮು : ರಾಷ್ಟ್ರೀಯ ಸಮ್ಮೇಳನ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಡಾ. ಫಾರುಕ್ ಅಬ್ದುಲ್ಲಾ ಅವರ ಮೇಲೆ ಬುಧವಾರ ಸಂಜೆ…

2 hours ago