ಮನರಂಜನೆ

ಕನ್ನಡದ ಬಗ್ಗೆ ಕಮಲ್‍ ಹಾಸನ್‍ ಹೇಳಿಕೆ; ಶುರುವಾಯ್ತು ‘ಬಾಯ್ಕಾಟ್‍ ಥಗ್‍ ಲೈಫ್‍’ ಅಭಿಯಾನ

‘ಥಗ್‍ ಲೈಫ್‍’ ಚಿತ್ರದ ಪ್ರೀ-ರಿಲೀಸ್‍ ಕಾರ್ಯಕ್ರಮದಲ್ಲಿ ‘ಕನ್ನಡ ಭಾಷೆಯು ತಮಿಳಿನಿಂದ ಹುಟ್ಟಿತು…’ ಎಂದು ಕಮಲ್‍ ಹಾಸನ್‍ ಅವರ ಹೇಳಿಕೆ ಸಾಕಷ್ಟು ವಿವಾದಕ್ಕೀಡಾಗಿದೆ. ಈ ಬಗ್ಗೆ ಸೋಷಿಯಲ್‍ ಮೀಡಿಯಾದಲ್ಲಿ ಟೀಕೆಗಳು ವ್ಯಕ್ತವಾಗುತ್ತಿದ್ದು, ‘ಥಗ್‍ ಲೈಫ್‍’ ಚಿತ್ರವನ್ನು ಕರ್ನಾಟಕದಲ್ಲಿ ಬ್ಯಾನ್‍ ಮಾಡಬೇಕು ಎಂದು ‘ಬಾಯ್ಕಾಟ್‍ ಥಗ್‍ ಲೈಫ್‍’ ಅಭಿಯಾನ ಪ್ರಾರಂಭವಾಗಿದೆ.

ಕನ್ನಡ ಮತ್ತು ಕರ್ನಾಟಕದ ಬಗ್ಗೆ ಸದಾ ಒಳ್ಳೆಯ ಮಾತುಗಳನ್ನಾಡುತ್ತಿದ್ದ ಕಮಲ್ ಹಾಸನ್‍ ಇಷ್ಟಕ್ಕೂ ಹೀಗೆ ಮಾತನಾಡಿದ್ದು ಯಾಕೆ? ಎಂಬ ವಿಷಯ ಇದೀಗ ಚರ್ಚೆ ಆಗುತ್ತಿದೆ. ಎಲ್ಲಾ ಭಾಷೆಗಳೂ ಇನ್ನೊಂದು ಭಾಷೆಯಿಂದ ಯಾವುದೋ ಒಂದು ಕಾರಣಕ್ಕೆ ಸ್ಫೂರ್ತಿ ಪಡೆದಿರುತ್ತವೆ. ಹಾಗಂತ ಯಾವುದೋ ಒಂದು ಭಾಷೆ ಶ್ರೇಷ್ಠ ಎಂದರ್ಥವಲ್ಲ. ಹೀಗಿರುವಾಗ, ಕಮಲ್‍ ಹಾಸನ್‍ ಅವರಿಗೆ ಇಂಥದ್ದೊಂದು ವಿವಾದಾತ್ಮಕ ಹೇಳಿಕೆ ನೀಡುವ ಅವಶ್ಯಕತೆ ಇರಲಿಲ್ಲ.

ಬರೀ ಕಮಲ್‍ ಹಾಸನ್‍ ಅಷ್ಟೇ ಅಲ್ಲ, ಈ ವಿಷಯದಲ್ಲಿ ಶಿವರಾಜಕುಮಾರ್ ಯಾಕೆ ಸುಮ್ಮನಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಏಕೆಂದರೆ, ಕಮಲ್‍ ಹಾಸನ್‍ ಅವರು ಇಂಥದ್ದೊಂದು ಮಾತು ಹೇಳಿದ್ದು ಶಿವರಾಜಕುಮಾರ್ ಎದುರಲ್ಲೇ. ಕಮಲ್‍ ಹಾಸನ್‍ ಇಂಥದ್ದೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದರೂ, ಈ ವಿಷಯವಾಗಿ ಶಿವರಾಜಕುಮಾರ್ ಯಾಕೆ ಮೌನವಹಿಸಿದ್ದಾರೆ, ಯಾಕೆ ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಕೆಲವರು ಸೋಷಿಯಲ್‍ ಮೀಡಿಯಾದಲ್ಲಿ ಪ್ರಶ್ನಿಸಿದ್ದಾರೆ.

ಕಮಲ್‍ ಹಾಸನ್‍ ಅವರ ಈ ಹೇಳಿಕೆಯ ಕುರಿತು ಕನ್ನಡ ಚಿತ್ರರಂಗದ ಯಾವೊಬ್ಬ ನಟ-ನಟಿ ಅಥವಾ ಸಂಘ-ಸಂಸ್ಥೆ ಯಾವುದೇ ಹೇಳಿಕೆ ನೀಡಿಲ್ಲ. ಆದರೆ, ಕಮಲ್‍ ಹಾಸನ್‍ ಅವರ ಮಾತುಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಖಂಡಿಸಿದ್ದಾರೆ.

‘ಮಾತೃಭಾಷೆಯನ್ನು ಪ್ರೀತಿಸಬೇಕು, ಆದರೆ ಅದರ ಹೆಸರಿನಲ್ಲಿ ದುರಭಿಮಾನ ಮೆರೆಯುವುದು ಸಂಸ್ಕೃತಿ ಹೀನ ನಡವಳಿಕೆಯಾಗುತ್ತದೆ. ಅದರಲ್ಲೂ ಕಲಾವಿದರಿಗೆ ಪ್ರತಿಯೊಂದು ಭಾಷೆಯನ್ನೂ ಗೌರವಿಸುವ ಸಂಸ್ಕಾರ ಇರಬೇಕು. ಕನ್ನಡವೂ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ನಟಿಸಿರುವ ನಟ ಕಮಲ್‍ ಹಾಸನ್‍, ತಮ್ಮ ತಮಿಳು ಭಾಷೆಯನ್ನು ವೈಭವೀಕರಿಸುವ ಮತ್ತಿನಲ್ಲಿ ನಟ ಶಿವರಾಜ್ ಕುಮಾರ್ ಅವರನ್ನೂ ಕುಳ್ಳಿರಿಸಿಕೊಂಡು ಕನ್ನಡವನ್ನು ಅವಮಾನಿಸಿರುವುದು ಉದ್ಧಟತನ ಹಾಗೂ ದುರಹಂಕಾರದ ಪರಮಾವಧಿಯಾಗಿದೆ’ ಎಂದು ಹೇಳಿದ್ದಾರೆ.

ಒಟ್ಟಾರೆ ಕಮಲ್‍ ಹಾನಸ್‌ ಮಾತುಗಳು ಟೀಕೆಗೆ ಒಳಗಾಗುವುದರ ಜೊತೆಗೆ, ಅವರು ಈ ಕುರಿತು ಕ್ಷಮೆ ಕೇಳದಿದ್ದರೆ ಅವರ ಹೊಸ ಚಿತ್ರವನ್ನು ಬ್ಯಾನ್‍ ಮಾಡಬೇಕು ಎನ್ನುವವರೆಗೂ ವಿಷಯ ಬೆಳೆದಿದೆ. ಇದುವರೆಗೂ ಕಮಲ್‍ ಹಾಸನ್‍ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ವಿಷಯವಾಗಿ ಅವರು ಏನು ಹೇಳುತ್ತಾರೋ ಎಂಬುದನ್ನು ಕಾದು ನೋಡಬೇಕು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

20 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

20 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

20 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

20 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

20 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

20 hours ago