ಮನರಂಜನೆ

ಕನ್ನಡದ ಬಗ್ಗೆ ಕಮಲ್‍ ಹಾಸನ್‍ ಹೇಳಿಕೆ; ಶುರುವಾಯ್ತು ‘ಬಾಯ್ಕಾಟ್‍ ಥಗ್‍ ಲೈಫ್‍’ ಅಭಿಯಾನ

‘ಥಗ್‍ ಲೈಫ್‍’ ಚಿತ್ರದ ಪ್ರೀ-ರಿಲೀಸ್‍ ಕಾರ್ಯಕ್ರಮದಲ್ಲಿ ‘ಕನ್ನಡ ಭಾಷೆಯು ತಮಿಳಿನಿಂದ ಹುಟ್ಟಿತು…’ ಎಂದು ಕಮಲ್‍ ಹಾಸನ್‍ ಅವರ ಹೇಳಿಕೆ ಸಾಕಷ್ಟು ವಿವಾದಕ್ಕೀಡಾಗಿದೆ. ಈ ಬಗ್ಗೆ ಸೋಷಿಯಲ್‍ ಮೀಡಿಯಾದಲ್ಲಿ ಟೀಕೆಗಳು ವ್ಯಕ್ತವಾಗುತ್ತಿದ್ದು, ‘ಥಗ್‍ ಲೈಫ್‍’ ಚಿತ್ರವನ್ನು ಕರ್ನಾಟಕದಲ್ಲಿ ಬ್ಯಾನ್‍ ಮಾಡಬೇಕು ಎಂದು ‘ಬಾಯ್ಕಾಟ್‍ ಥಗ್‍ ಲೈಫ್‍’ ಅಭಿಯಾನ ಪ್ರಾರಂಭವಾಗಿದೆ.

ಕನ್ನಡ ಮತ್ತು ಕರ್ನಾಟಕದ ಬಗ್ಗೆ ಸದಾ ಒಳ್ಳೆಯ ಮಾತುಗಳನ್ನಾಡುತ್ತಿದ್ದ ಕಮಲ್ ಹಾಸನ್‍ ಇಷ್ಟಕ್ಕೂ ಹೀಗೆ ಮಾತನಾಡಿದ್ದು ಯಾಕೆ? ಎಂಬ ವಿಷಯ ಇದೀಗ ಚರ್ಚೆ ಆಗುತ್ತಿದೆ. ಎಲ್ಲಾ ಭಾಷೆಗಳೂ ಇನ್ನೊಂದು ಭಾಷೆಯಿಂದ ಯಾವುದೋ ಒಂದು ಕಾರಣಕ್ಕೆ ಸ್ಫೂರ್ತಿ ಪಡೆದಿರುತ್ತವೆ. ಹಾಗಂತ ಯಾವುದೋ ಒಂದು ಭಾಷೆ ಶ್ರೇಷ್ಠ ಎಂದರ್ಥವಲ್ಲ. ಹೀಗಿರುವಾಗ, ಕಮಲ್‍ ಹಾಸನ್‍ ಅವರಿಗೆ ಇಂಥದ್ದೊಂದು ವಿವಾದಾತ್ಮಕ ಹೇಳಿಕೆ ನೀಡುವ ಅವಶ್ಯಕತೆ ಇರಲಿಲ್ಲ.

ಬರೀ ಕಮಲ್‍ ಹಾಸನ್‍ ಅಷ್ಟೇ ಅಲ್ಲ, ಈ ವಿಷಯದಲ್ಲಿ ಶಿವರಾಜಕುಮಾರ್ ಯಾಕೆ ಸುಮ್ಮನಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಏಕೆಂದರೆ, ಕಮಲ್‍ ಹಾಸನ್‍ ಅವರು ಇಂಥದ್ದೊಂದು ಮಾತು ಹೇಳಿದ್ದು ಶಿವರಾಜಕುಮಾರ್ ಎದುರಲ್ಲೇ. ಕಮಲ್‍ ಹಾಸನ್‍ ಇಂಥದ್ದೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದರೂ, ಈ ವಿಷಯವಾಗಿ ಶಿವರಾಜಕುಮಾರ್ ಯಾಕೆ ಮೌನವಹಿಸಿದ್ದಾರೆ, ಯಾಕೆ ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಕೆಲವರು ಸೋಷಿಯಲ್‍ ಮೀಡಿಯಾದಲ್ಲಿ ಪ್ರಶ್ನಿಸಿದ್ದಾರೆ.

ಕಮಲ್‍ ಹಾಸನ್‍ ಅವರ ಈ ಹೇಳಿಕೆಯ ಕುರಿತು ಕನ್ನಡ ಚಿತ್ರರಂಗದ ಯಾವೊಬ್ಬ ನಟ-ನಟಿ ಅಥವಾ ಸಂಘ-ಸಂಸ್ಥೆ ಯಾವುದೇ ಹೇಳಿಕೆ ನೀಡಿಲ್ಲ. ಆದರೆ, ಕಮಲ್‍ ಹಾಸನ್‍ ಅವರ ಮಾತುಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಖಂಡಿಸಿದ್ದಾರೆ.

‘ಮಾತೃಭಾಷೆಯನ್ನು ಪ್ರೀತಿಸಬೇಕು, ಆದರೆ ಅದರ ಹೆಸರಿನಲ್ಲಿ ದುರಭಿಮಾನ ಮೆರೆಯುವುದು ಸಂಸ್ಕೃತಿ ಹೀನ ನಡವಳಿಕೆಯಾಗುತ್ತದೆ. ಅದರಲ್ಲೂ ಕಲಾವಿದರಿಗೆ ಪ್ರತಿಯೊಂದು ಭಾಷೆಯನ್ನೂ ಗೌರವಿಸುವ ಸಂಸ್ಕಾರ ಇರಬೇಕು. ಕನ್ನಡವೂ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ನಟಿಸಿರುವ ನಟ ಕಮಲ್‍ ಹಾಸನ್‍, ತಮ್ಮ ತಮಿಳು ಭಾಷೆಯನ್ನು ವೈಭವೀಕರಿಸುವ ಮತ್ತಿನಲ್ಲಿ ನಟ ಶಿವರಾಜ್ ಕುಮಾರ್ ಅವರನ್ನೂ ಕುಳ್ಳಿರಿಸಿಕೊಂಡು ಕನ್ನಡವನ್ನು ಅವಮಾನಿಸಿರುವುದು ಉದ್ಧಟತನ ಹಾಗೂ ದುರಹಂಕಾರದ ಪರಮಾವಧಿಯಾಗಿದೆ’ ಎಂದು ಹೇಳಿದ್ದಾರೆ.

ಒಟ್ಟಾರೆ ಕಮಲ್‍ ಹಾನಸ್‌ ಮಾತುಗಳು ಟೀಕೆಗೆ ಒಳಗಾಗುವುದರ ಜೊತೆಗೆ, ಅವರು ಈ ಕುರಿತು ಕ್ಷಮೆ ಕೇಳದಿದ್ದರೆ ಅವರ ಹೊಸ ಚಿತ್ರವನ್ನು ಬ್ಯಾನ್‍ ಮಾಡಬೇಕು ಎನ್ನುವವರೆಗೂ ವಿಷಯ ಬೆಳೆದಿದೆ. ಇದುವರೆಗೂ ಕಮಲ್‍ ಹಾಸನ್‍ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ವಿಷಯವಾಗಿ ಅವರು ಏನು ಹೇಳುತ್ತಾರೋ ಎಂಬುದನ್ನು ಕಾದು ನೋಡಬೇಕು.

ಆಂದೋಲನ ಡೆಸ್ಕ್

Recent Posts

ತಮಿಳುನಾಡು| ಸಿಎಂ ಎಂ.ಕೆ.ಸ್ಟಾಲಿನ್‌ಗೆ ಸೋಲು

ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್‌ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…

2 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ: ಕೈ ಅಭ್ಯರ್ಥಿ ಸಮರ್ಥ್‌ ಶಾಮನೂರು ಜಯಭೇರಿ

ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…

3 hours ago

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ…

4 hours ago

ತಮಿಳುನಾಡಿನಲ್ಲಿ ಟಿವಿಕೆಗೆ ಮುನ್ನಡೆ: ವಿಜಯ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು: ತಮಿಳುನಾಡಿನ ಮತ ಎಣಿಕೆಯಲ್ಲಿ ಟಿವಿಕೆ ಭಾರೀ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆ ಪಕ್ಷದ ಮುಖ್ಯಸ್ಥ ನಟ ವಿಜಯ್‌ಗೆ ಸಿಎಂ…

5 hours ago

ಬಾಗಲಕೋಟೆ ಉಪಚುನಾವಣೆ : ‘ಉಮೇಶ್‌ ಮೇಟಿಗೆ ಜಯ ; ಇಲ್ಲಿವೆ ಗೆಲುವಿನ ಅಂಶಗಳು….

ಬಾಗಲಕೋಟೆ : ಹಿರಿಯ ನಾಯಕ ಎಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್…

6 hours ago

ಕೇರಳದಲ್ಲಿ ಯುಡಿಎಫ್‌ ಅಭೂತಪೂರ್ವ ಸಾಧನೆ

ತಿರುವನಂತಪುರಂ : ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆ ಸಾಧಿಸುತ್ತಿದ್ದು, ದಶಕದ ನಂತರ ಅಧಿಕಾರಕ್ಕೆ ಮರಳುವ ಸಂಭವನೀಯ…

6 hours ago