ಮನರಂಜನೆ

ಕನ್ನಡದ ಬಗ್ಗೆ ಕಮಲ್‍ ಹಾಸನ್‍ ಹೇಳಿಕೆ; ಶುರುವಾಯ್ತು ‘ಬಾಯ್ಕಾಟ್‍ ಥಗ್‍ ಲೈಫ್‍’ ಅಭಿಯಾನ

‘ಥಗ್‍ ಲೈಫ್‍’ ಚಿತ್ರದ ಪ್ರೀ-ರಿಲೀಸ್‍ ಕಾರ್ಯಕ್ರಮದಲ್ಲಿ ‘ಕನ್ನಡ ಭಾಷೆಯು ತಮಿಳಿನಿಂದ ಹುಟ್ಟಿತು…’ ಎಂದು ಕಮಲ್‍ ಹಾಸನ್‍ ಅವರ ಹೇಳಿಕೆ ಸಾಕಷ್ಟು ವಿವಾದಕ್ಕೀಡಾಗಿದೆ. ಈ ಬಗ್ಗೆ ಸೋಷಿಯಲ್‍ ಮೀಡಿಯಾದಲ್ಲಿ ಟೀಕೆಗಳು ವ್ಯಕ್ತವಾಗುತ್ತಿದ್ದು, ‘ಥಗ್‍ ಲೈಫ್‍’ ಚಿತ್ರವನ್ನು ಕರ್ನಾಟಕದಲ್ಲಿ ಬ್ಯಾನ್‍ ಮಾಡಬೇಕು ಎಂದು ‘ಬಾಯ್ಕಾಟ್‍ ಥಗ್‍ ಲೈಫ್‍’ ಅಭಿಯಾನ ಪ್ರಾರಂಭವಾಗಿದೆ.

ಕನ್ನಡ ಮತ್ತು ಕರ್ನಾಟಕದ ಬಗ್ಗೆ ಸದಾ ಒಳ್ಳೆಯ ಮಾತುಗಳನ್ನಾಡುತ್ತಿದ್ದ ಕಮಲ್ ಹಾಸನ್‍ ಇಷ್ಟಕ್ಕೂ ಹೀಗೆ ಮಾತನಾಡಿದ್ದು ಯಾಕೆ? ಎಂಬ ವಿಷಯ ಇದೀಗ ಚರ್ಚೆ ಆಗುತ್ತಿದೆ. ಎಲ್ಲಾ ಭಾಷೆಗಳೂ ಇನ್ನೊಂದು ಭಾಷೆಯಿಂದ ಯಾವುದೋ ಒಂದು ಕಾರಣಕ್ಕೆ ಸ್ಫೂರ್ತಿ ಪಡೆದಿರುತ್ತವೆ. ಹಾಗಂತ ಯಾವುದೋ ಒಂದು ಭಾಷೆ ಶ್ರೇಷ್ಠ ಎಂದರ್ಥವಲ್ಲ. ಹೀಗಿರುವಾಗ, ಕಮಲ್‍ ಹಾಸನ್‍ ಅವರಿಗೆ ಇಂಥದ್ದೊಂದು ವಿವಾದಾತ್ಮಕ ಹೇಳಿಕೆ ನೀಡುವ ಅವಶ್ಯಕತೆ ಇರಲಿಲ್ಲ.

ಬರೀ ಕಮಲ್‍ ಹಾಸನ್‍ ಅಷ್ಟೇ ಅಲ್ಲ, ಈ ವಿಷಯದಲ್ಲಿ ಶಿವರಾಜಕುಮಾರ್ ಯಾಕೆ ಸುಮ್ಮನಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಏಕೆಂದರೆ, ಕಮಲ್‍ ಹಾಸನ್‍ ಅವರು ಇಂಥದ್ದೊಂದು ಮಾತು ಹೇಳಿದ್ದು ಶಿವರಾಜಕುಮಾರ್ ಎದುರಲ್ಲೇ. ಕಮಲ್‍ ಹಾಸನ್‍ ಇಂಥದ್ದೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದರೂ, ಈ ವಿಷಯವಾಗಿ ಶಿವರಾಜಕುಮಾರ್ ಯಾಕೆ ಮೌನವಹಿಸಿದ್ದಾರೆ, ಯಾಕೆ ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಕೆಲವರು ಸೋಷಿಯಲ್‍ ಮೀಡಿಯಾದಲ್ಲಿ ಪ್ರಶ್ನಿಸಿದ್ದಾರೆ.

ಕಮಲ್‍ ಹಾಸನ್‍ ಅವರ ಈ ಹೇಳಿಕೆಯ ಕುರಿತು ಕನ್ನಡ ಚಿತ್ರರಂಗದ ಯಾವೊಬ್ಬ ನಟ-ನಟಿ ಅಥವಾ ಸಂಘ-ಸಂಸ್ಥೆ ಯಾವುದೇ ಹೇಳಿಕೆ ನೀಡಿಲ್ಲ. ಆದರೆ, ಕಮಲ್‍ ಹಾಸನ್‍ ಅವರ ಮಾತುಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಖಂಡಿಸಿದ್ದಾರೆ.

‘ಮಾತೃಭಾಷೆಯನ್ನು ಪ್ರೀತಿಸಬೇಕು, ಆದರೆ ಅದರ ಹೆಸರಿನಲ್ಲಿ ದುರಭಿಮಾನ ಮೆರೆಯುವುದು ಸಂಸ್ಕೃತಿ ಹೀನ ನಡವಳಿಕೆಯಾಗುತ್ತದೆ. ಅದರಲ್ಲೂ ಕಲಾವಿದರಿಗೆ ಪ್ರತಿಯೊಂದು ಭಾಷೆಯನ್ನೂ ಗೌರವಿಸುವ ಸಂಸ್ಕಾರ ಇರಬೇಕು. ಕನ್ನಡವೂ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ನಟಿಸಿರುವ ನಟ ಕಮಲ್‍ ಹಾಸನ್‍, ತಮ್ಮ ತಮಿಳು ಭಾಷೆಯನ್ನು ವೈಭವೀಕರಿಸುವ ಮತ್ತಿನಲ್ಲಿ ನಟ ಶಿವರಾಜ್ ಕುಮಾರ್ ಅವರನ್ನೂ ಕುಳ್ಳಿರಿಸಿಕೊಂಡು ಕನ್ನಡವನ್ನು ಅವಮಾನಿಸಿರುವುದು ಉದ್ಧಟತನ ಹಾಗೂ ದುರಹಂಕಾರದ ಪರಮಾವಧಿಯಾಗಿದೆ’ ಎಂದು ಹೇಳಿದ್ದಾರೆ.

ಒಟ್ಟಾರೆ ಕಮಲ್‍ ಹಾನಸ್‌ ಮಾತುಗಳು ಟೀಕೆಗೆ ಒಳಗಾಗುವುದರ ಜೊತೆಗೆ, ಅವರು ಈ ಕುರಿತು ಕ್ಷಮೆ ಕೇಳದಿದ್ದರೆ ಅವರ ಹೊಸ ಚಿತ್ರವನ್ನು ಬ್ಯಾನ್‍ ಮಾಡಬೇಕು ಎನ್ನುವವರೆಗೂ ವಿಷಯ ಬೆಳೆದಿದೆ. ಇದುವರೆಗೂ ಕಮಲ್‍ ಹಾಸನ್‍ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ವಿಷಯವಾಗಿ ಅವರು ಏನು ಹೇಳುತ್ತಾರೋ ಎಂಬುದನ್ನು ಕಾದು ನೋಡಬೇಕು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

6 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

6 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

6 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

6 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

6 hours ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

6 hours ago