‘ಡಾರ್ಲಿಂಗ್’ ಕೃಷ್ಣ ಅಭಿನಯದ ಮತ್ತು ಶಶಾಂಕ್ ನಿರ್ದೇಶನದ ‘ಬ್ರ್ಯಾಟ್’ ಚಿತ್ರವು ಪ್ಯಾನ್ ಇಂಡಿಯಾ ಚಿತ್ರವಾಗಿ ಅಕ್ಟೋಬರ್.31ರಂದು ಬಿಡುಗಡೆಯಾಗಲಿದೆ ಎಂಬ ಸುದ್ದಿ ಮೊದಲಿತ್ತು. ಆದರೆ, ಚಿತ್ರವನ್ನು ಮೊದಲು ಕನ್ನಡದಲ್ಲಿ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಮುಂದಾಗಿದೆ. ನಂತರ ನೋಡಿಕೊಂಡು, ಬೇರೆ ಭಾಷೆಗಳಲ್ಲಿ ಬಿಡುಗಡೆ ಮಾಡುವುದಕ್ಕೆ ತೀರ್ಮಾನಿಸಿದೆ.
ಇತ್ತೀಚೆಗೆ ‘ಬ್ರ್ಯಾಟ್’ ಚಿತ್ರದ ಕನ್ನಡ ಅವತರಣಿಕೆಯ ಟ್ರೇಲರ್ ಬಿಡುಡೆಯಾಗಿದೆ. ಸುದೀಪ್ ಬಂದು ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಶಾಂಕ್, ‘‘ಕೌಸಲ್ಯ ಸುಪ್ರಜಾ ರಾಮ’ ನಂತರ ಅದೇ ತರಹದ ಇನ್ನೊಂದು ಸಿನಿಮಾ ಮಾಡಬಹುದಿತ್ತು, ಅದನ್ನು ಬಿಟ್ಟು ಹೊಸ ಚಾಲೆಂಜ್ ತಗೊಂಡಿದ್ದೀವಿ. ನನಗೆ ಯಾವತ್ತೂ ಒಂದು ಜಾನರ್ಗೆ ಅಂಟಿಕೊಳ್ಳುವುದಕ್ಕೆ ಇಷ್ಟವಿಲ್ಲ. ಹಾಗಾಗಿ, ಬೇರೆ ತರಹದ ಪ್ರಯತ್ನ ಮಾಡಿದ್ದೃವೆ. ಇದು ಪ್ಯಾನ್ ಇಂಡಿಯಾ ಸಿನಿಮಾ ಆದರೂ, ಮೊದಲು ಕನ್ನಡದಲ್ಲಿ ಬಿಡುಗಡೆ ಮಾಡ್ತೀವಿ, ನಂತರ ಬೇರೆ ಭಾಷೆಗಳಲ್ಲಿ ನೋಡಿಕೊಂಡು ಬಿಡುಗಡೆ ಮಾಡ್ತೀವಿ’ ಎಂದರು.
ಇದನ್ನು ಓದಿ: ‘ವೃಷಭ’ಗೆ ಟೈಟಲ್ ಸಮಸ್ಯೆ: ಅಳಲು ತೋಡಿಕೊಂಡ ಚಿತ್ರತಂಡ ತಂಡ
ಈ ಚಿತ್ರವು ನಾಯಕ ಕೃಷ್ಣ ಅವರ ಇಮೇಜ್ ಬದಲಾಯಿಸುತ್ತದೆ ಎಂಬ ನಂಬಿಕೆ ಇದೆ ಎನ್ನುವ ಶಶಾಂಕ್, ‘‘ಕೃಷ್ಣ ಆರಡಿ ಇದ್ದಾರೆ. ಅವರೊಬ್ಬ ಆ್ಯಕ್ಷನ್ ಹೀರೋ. ಅವರು ಯಾವತ್ತೂ ನನಗೆ ರೊಮ್ಯಾಂಟಿಕ್ ಹೀರೋ ಆಗಿ ಕಾಣಿಸಲೇ ಇಲ್ಲ, ‘ಲವ್ ಮಾಕ್ಟೇಲ್’ ಹಿಟ್ ಆಗಿ ಅವರು ರೊಮ್ಯಾಂಟಿಕ್ ಹೀರೋ ಆದರು. ‘ಬ್ರ್ಯಾಟ್’ ಚಿತ್ರ ಅವರ ಇಮೇಜ್ ಸಂಪೂರ್ಣ ಬದಲಾಯಿಸುತ್ತದೆ ಎಂಬ ನಂಬಿಕೆ ಇದೆ’ ಎಂದರು.
ಈ ‘ಬ್ರ್ಯಾಟ್’ ಎಂಬ ಪದದಲ್ಲಿರುವ ಒಂದಂಶ ಕೃಷ್ಣನಲ್ಲಿಲ್ಲ ಎನ್ನುವ ಸುದೀಪ್, ‘ಕೃಷ್ಣ ಕ್ರಿಕೆಟ್ ಆಡುತ್ತಾರೆ, ಊಟ ಮಾಡುತ್ತಾರೆ, ಮನೆಗೆ ಹೋಗುತ್ತಾರೆ. ಅದೂ ಅವರ ಮನಗೇ ಹೋಗುತ್ತಾರೆ. ಅವರಿಗೆ ಯಾವ ಅಭ್ಯಾಸಗಳೂ ಇಲ್ಲ. ನಾವು ಅವರನ್ನು ಕ್ಲೀನ್ ಕೃಷ್ಣಪ್ಪ ಎನ್ನುತ್ತೇವೆ. ಅವರನ್ನು ಇಟ್ಟುಕೊಂಡು ಈ ಟೈಟಲ್ ಇಡೋದಕ್ಕೆ ಧೈರ್ಯ ಬೇಕು. ಶಶಾಂಕ್ ತಮ್ಮ ಸಾಮರ್ಥ್ಯಕ್ಕೆ ತಕ್ಕ ಹಾಗೆ ಇನ್ನೂ ಸಿನಿಮಾ ಮಾಡಿಲ್ಲ. ತಲೆಯಿಂದ ಎಲ್ಲರನ್ನೂ ತೆಗೆದು ಹಾಕಿ, ನಿಮಗೋಸ್ಕರ ಕಥೆ ಬರೆಯಿರಿ. ಅದು ನಿಮ್ಮ ಜೀವನದ ದೊಡ್ಡ ಹಿಟ್ ಆಗುತ್ತದೆ’ ಎಂದು ಹಾರೈಸಿದರು.
ಡಾಲ್ಫಿನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಮಂಜುನಾಥ್ ಕಂದಕೂರ್ ನಿರ್ಮಿಸಿರುವ, ಶಶಾಂಕ್ ನಿರ್ದೇಶನದ ‘ಬ್ರ್ಯಾಟ್’ ಚಿತ್ರವು ಅಕ್ಟೊಬರ್ 31ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಕೃಷ್ಣಗೆ ನಾಯಕಿಯಾಗಿ ಮನಿಷಾ ಕುಂದುಕೂರು ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಕೃಷ್ಣ ಮತ್ತು ಮನಿಷಾ ಜೊತೆಗೆ ಡ್ರ್ಯಾಗನ್ ಮಂಜು, ಅಚ್ಯುತ್ ಕುಮಾರ್, ರಮೇಶ್ ಇಂದಿರಾ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಮತ್ತು ಅಭಿಲಾಷ್ ಕಲ್ಲತ್ತಿ ಛಾಯಾಗ್ರಹಣವಿದೆ.
ಬೆಂಗಳೂರು : ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು…
ಹೊಸದಿಲ್ಲಿ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಹಾರ್ಮುಜ್ ಜಲಸಂಧಿ ಬಂದ್ ಆಗುವ ಆತಂಕದಲ್ಲಿದ್ದ ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಜಯ ಸಿಕ್ಕಿದೆ.…
ತಿರುವನಂತಪುರಂ : 2025ರ ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರುತ್ತಿದ್ದ ವೈರಲ್ ಸ್ಟಾರ್ ಮೊನಾಲಿಸಾ ಭೋಸ್ಲೆ ಅವರು ತಮ್ಮ ಪ್ರಿಯಕರ ಮುಹಮ್ಮದ್…
ಸಿಎಂಗೆ ಶಾಸಕ ಗಣೇಶ್ ಪ್ರಸಾದ್ ಮನವಿ; ಸ್ಮಾರಕ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ:…
ಹೊಸದಿಲ್ಲಿ : ಜಾಗತಿಕ ರಾಜಕೀಯ ವಿದ್ಯಮಾನಗಳು ಮತ್ತು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿಯ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ದೇಶದ ಇಂಧನ…
ವನ್ಯಜೀವಿ ಚಿತ್ರಗಳನ್ನು ಮೊಬೈಲ್ನಲ್ಲಿ ಸೆರೆ ಹಿಡಿಯುವ ಅವಕಾಶ ಇಲ್ಲದೆ ಪರಿತಾಪ; ನಿಷೇಧಕ್ಕೆ ಕೆಲವರ ಸಹಮತ • ಚಿರಂಜೀವಿ ಸಿ. ಹುಲ್ಲಹಳ್ಳಿ…