ಮನರಂಜನೆ

ಎರಡು ವಾರ ಮೊದಲೇ ಬರುತ್ತಾನೆ ‘ಬ್ರ್ಯಾಟ್‍’

ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಚಿತ್ರಗಳು ನಿರೀಕ್ಷೆಯಂತೆ ಬಿಡುಗಡೆಯಾಗುತ್ತಿಲ್ಲ. ಮೊದಲು ಒಂದು ದಿನ ಘೋಷಣೆಯಾಗಿ, ಕೊನೆಗೆ ಪೋಸ್ಟ್ಪೋನ್‍ ಆಗಿ, ಇನ್ನೊಂದು ದಿನ ಬಿಡುಗಡೆಯಾಗುವುದು ಸಹಜವಾಗಿದೆ. ಆದರೆ, ‘ಬ್ರ್ಯಾಟ್‍’ ಚಿತ್ರವು ಘೋಷಣೆಯಾದ ದಿನಕ್ಕಿಂತ ಎರಡು ವಾರ ಮೊದಲೇ ಬಿಡುಗಡೆಯಾಗುತ್ತಿದೆ.

‘ಡಾರ್ಲಿಂಗ್‍’ ಕೃಷ್ಣ ಅಭಿನಯದ ‘ಬ್ರ್ಯಾಟ್‍’ ಚಿತ್ರವು ನವೆಂಬರ್.14ರಂದು ಬಿಡಗುಡೆಯಾಗುತ್ತಿದೆ ಎಂದು ಚಿತ್ರತಂಡವು ಕೆಲವೇ ದಿನಗಳ ಹಿಂದೆ ಘೋಷಿಸಿತ್ತು. ಇದೀಗ ಚಿತ್ರವು ಪ್ರೀಪೋನ್‍ ಆಗಿದ್ದು, ಚಿತ್ರವು, ಅಕ್ಟೋಬರ್.31ರಂದೇ ಬಿಡುಗಡೆಯಾಗುತ್ತಿದೆ. ಅಂದು ‘ದುನಿಯಾ’ ವಿಜಯ್‍ ಅಭಿನಯದ ‘ಮಾರುತ’ ಚಿತ್ರ ಸಹ ಬಿಡುಗಡೆಯಾಗುತ್ತಿದೆ.

ಇದನ್ನು ಓದಿ: ಅಕ್ಟೋಬರ್.31ರಂದು ‘ಮಾರುತ’ನಾಗಿ ಬರಲಿದ್ದಾರೆ ‘ದುನಿಯಾ’ ವಿಜಯ್

ಈಗಾಗಲೇ, ‘ಬ್ರ್ಯಾಟ್‍’ ಚಿತ್ರದ ಒಂದು ಹಾಡು ಹಾಗೂ ಟೀಸರ್ ಬಿಡುಗಡೆಯಾಗಿತ್ತು. ಈಗ ಉತ್ತರ ಕರ್ನಾಟಕದ ಪ್ರತಿಭೆ, ಬಾಳು ಬೆಳಗುಂದಿ ಹಾಗೂ ಇಂದು ನಾಗರಾಜ್‍ ಹಾಡಿರುವ ‘ಗಂಗಿ ಗಂಗಿ…’ ಎಂಬ ಐಟಂ ಡ್ಯಾನ್ಸ್ ಬಿಡುಗಡೆಯಾಗಿದೆ. ಈ ಹಾಡಿಗೆ ಬಾಳು ಬೆಳಗುಂದಿ ಅವರೇ ಸಾಹಿತ್ಯ ಬರೆದಿದ್ದು, ಅರ್ಜುನ್‍ ಜನ್ಯ ಸಂಗೀತ ಸಂಯೋಜಿಸಿದ್ದರೆ. ಈ ಹಾಡಿಗೆ ಕೃಷ್ಣ ಮತ್ತು ಅನೈರಾ ಹೆಜ್ಜೆ ಹಾಕಿದ್ದಾರೆ.

ಈ ಹಿಂದೆ ‘ಫಸ್ಟ್ ರ‍್ಯಾಂಕ್ ರಾಜು’ ನಿರ್ಮಿಸಿದ್ದ ಮಂಜುನಾಥ್‍ ಕುಂದಕೂರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಕೃಷ್ಣಗೆ ನಾಯಕಿಯಾಗಿ ಮನಿಷಾ ಕುಂದುಕೂರು ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಕೃಷ್ಣ ಮತ್ತು ಮನಿಷಾ ಜೊತೆಗೆ ಡ್ರ್ಯಾಗನ್‍ ಮಂಜು, ಅಚ್ಯುತ್‍ ಕುಮಾರ್‍, ರಮೇಶ್‍ ಇಂದಿರಾ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅರ್ಜುನ್‍ ಜನ್ಯ ಸಂಗೀತ ಮತ್ತು ಅಭಿಲಾಷ್‍ ಕಲ್ಲತ್ತಿ ಛಾಯಾಗ್ರಹಣವಿದೆ.

‘ಬ್ರ್ಯಾಟ್‍’ ಚಿತ್ರವು ಪ್ಯಾನ್‍ ಇಂಡಿಯಾ ಚಿತ್ರವಾಗಿದ್ದು, ಕನ್ನಡವಲ್ಲದೆ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎವ್ಗನ್ ಬಾವ್ಚಾರ್ ಎಂಬ ಕಣ್ಣಿಲ್ಲದ ಫೋಟೋಗ್ರಾಫರ್!

ಪಂಜು ಗಂಗೊಳ್ಳಿ  ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…

37 mins ago

ಓದುಗರ ಪತ್ರ: ಕಳ್ಳಸಾಗಣೆ ಕಪಿಮುಷ್ಟಿಯಲ್ಲಿ ದೇಶದ ಆರ್ಥಿಕತೆ

ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…

41 mins ago

ಓದುಗರ ಪತ್ರ: ದ್ವಿಚಕ್ರವಾಹನಗಳಿಗೆ ದರ್ಪಣ(ಕನ್ನಡಿ) ಕಡ್ಡಾಯವಾಗಲಿ

ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…

42 mins ago

ಓದುಗರ ಪತ್ರ: ವಾಹನ ನಿಲುಗಡೆ ನಿಷೇಧಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…

44 mins ago

ರಸ್ತೆಗಳು ಅಧ್ವಾನ; ಸವಾರರು ಹೈರಾಣ!

ಪ್ರಶಾಂತ್ ಎಸ್. ಮೈಸೂರು: ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನಗಳ ಸವಾರರು ಜೀವವನ್ನು…

46 mins ago

ವೈಭವದ ಸುತ್ತೂರು ಜಾತ್ರಾ ಮಹೋತ್ಸವ ಸಂಪನ್ನ

ಕೆ.ಬಿ.ರಮೇಶನಾಯಕ ಮೈಸೂರು: ಕಪಿಲಾ ನದಿ ತೀರದ ಸುತ್ತೂರಿನಲ್ಲಿ ಆರುದಿನಗಳ ಕಾಲ ಅತ್ಯಂತ ಸಡಗರ, ಸಂಭ್ರಮದಿಂದ ನಡೆದ ಧಾರ್ಮಿಕ, ಸಾಂಸ್ಕೃತಿಕ, ವೈಜ್ಞಾನಿಕ…

48 mins ago