ಮನರಂಜನೆ

ಎರಡು ವಾರ ಮೊದಲೇ ಬರುತ್ತಾನೆ ‘ಬ್ರ್ಯಾಟ್‍’

ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಚಿತ್ರಗಳು ನಿರೀಕ್ಷೆಯಂತೆ ಬಿಡುಗಡೆಯಾಗುತ್ತಿಲ್ಲ. ಮೊದಲು ಒಂದು ದಿನ ಘೋಷಣೆಯಾಗಿ, ಕೊನೆಗೆ ಪೋಸ್ಟ್ಪೋನ್‍ ಆಗಿ, ಇನ್ನೊಂದು ದಿನ ಬಿಡುಗಡೆಯಾಗುವುದು ಸಹಜವಾಗಿದೆ. ಆದರೆ, ‘ಬ್ರ್ಯಾಟ್‍’ ಚಿತ್ರವು ಘೋಷಣೆಯಾದ ದಿನಕ್ಕಿಂತ ಎರಡು ವಾರ ಮೊದಲೇ ಬಿಡುಗಡೆಯಾಗುತ್ತಿದೆ.

‘ಡಾರ್ಲಿಂಗ್‍’ ಕೃಷ್ಣ ಅಭಿನಯದ ‘ಬ್ರ್ಯಾಟ್‍’ ಚಿತ್ರವು ನವೆಂಬರ್.14ರಂದು ಬಿಡಗುಡೆಯಾಗುತ್ತಿದೆ ಎಂದು ಚಿತ್ರತಂಡವು ಕೆಲವೇ ದಿನಗಳ ಹಿಂದೆ ಘೋಷಿಸಿತ್ತು. ಇದೀಗ ಚಿತ್ರವು ಪ್ರೀಪೋನ್‍ ಆಗಿದ್ದು, ಚಿತ್ರವು, ಅಕ್ಟೋಬರ್.31ರಂದೇ ಬಿಡುಗಡೆಯಾಗುತ್ತಿದೆ. ಅಂದು ‘ದುನಿಯಾ’ ವಿಜಯ್‍ ಅಭಿನಯದ ‘ಮಾರುತ’ ಚಿತ್ರ ಸಹ ಬಿಡುಗಡೆಯಾಗುತ್ತಿದೆ.

ಇದನ್ನು ಓದಿ: ಅಕ್ಟೋಬರ್.31ರಂದು ‘ಮಾರುತ’ನಾಗಿ ಬರಲಿದ್ದಾರೆ ‘ದುನಿಯಾ’ ವಿಜಯ್

ಈಗಾಗಲೇ, ‘ಬ್ರ್ಯಾಟ್‍’ ಚಿತ್ರದ ಒಂದು ಹಾಡು ಹಾಗೂ ಟೀಸರ್ ಬಿಡುಗಡೆಯಾಗಿತ್ತು. ಈಗ ಉತ್ತರ ಕರ್ನಾಟಕದ ಪ್ರತಿಭೆ, ಬಾಳು ಬೆಳಗುಂದಿ ಹಾಗೂ ಇಂದು ನಾಗರಾಜ್‍ ಹಾಡಿರುವ ‘ಗಂಗಿ ಗಂಗಿ…’ ಎಂಬ ಐಟಂ ಡ್ಯಾನ್ಸ್ ಬಿಡುಗಡೆಯಾಗಿದೆ. ಈ ಹಾಡಿಗೆ ಬಾಳು ಬೆಳಗುಂದಿ ಅವರೇ ಸಾಹಿತ್ಯ ಬರೆದಿದ್ದು, ಅರ್ಜುನ್‍ ಜನ್ಯ ಸಂಗೀತ ಸಂಯೋಜಿಸಿದ್ದರೆ. ಈ ಹಾಡಿಗೆ ಕೃಷ್ಣ ಮತ್ತು ಅನೈರಾ ಹೆಜ್ಜೆ ಹಾಕಿದ್ದಾರೆ.

ಈ ಹಿಂದೆ ‘ಫಸ್ಟ್ ರ‍್ಯಾಂಕ್ ರಾಜು’ ನಿರ್ಮಿಸಿದ್ದ ಮಂಜುನಾಥ್‍ ಕುಂದಕೂರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಕೃಷ್ಣಗೆ ನಾಯಕಿಯಾಗಿ ಮನಿಷಾ ಕುಂದುಕೂರು ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಕೃಷ್ಣ ಮತ್ತು ಮನಿಷಾ ಜೊತೆಗೆ ಡ್ರ್ಯಾಗನ್‍ ಮಂಜು, ಅಚ್ಯುತ್‍ ಕುಮಾರ್‍, ರಮೇಶ್‍ ಇಂದಿರಾ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅರ್ಜುನ್‍ ಜನ್ಯ ಸಂಗೀತ ಮತ್ತು ಅಭಿಲಾಷ್‍ ಕಲ್ಲತ್ತಿ ಛಾಯಾಗ್ರಹಣವಿದೆ.

‘ಬ್ರ್ಯಾಟ್‍’ ಚಿತ್ರವು ಪ್ಯಾನ್‍ ಇಂಡಿಯಾ ಚಿತ್ರವಾಗಿದ್ದು, ಕನ್ನಡವಲ್ಲದೆ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

2 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

2 hours ago

ಪೊಲಿಟಿಕಲ್‌ ಪ್ರೊಫೆಸರ್‌ ಇಲ್ಲದ 2 ವರ್ಷ

ಸ್ವಾಭಿಮಾನಕ್ಕೆ ಧಕ್ಕೆಯಾದರೆ ಬಂಡೇಳುವುದು ವಿ.ಶ್ರೀನಿವಾಸ ಪ್ರಸಾದ್‌ ಅವರ ಜಾಯಮಾನ ಸಿ.ಹರಕುಮಾರ್ ಸ್ವಾಭಿಮಾನದ ರಾಜಕಾರಣಕ್ಕೆ ಪರ್ಯಾಯವೆಂಬಂತಿದ್ದ ವಿ.ಶ್ರೀನಿವಾಸ ಪ್ರಸಾದ್ ರವರು ನಮ್ಮನ್ನಗಲಿ…

6 hours ago

ಆಂದೋಲನ ವಿಶೇಷ | ವಿಪಕ್ಷ ಮುಕ್ತ ಭಾರತ ; ಬಿಜೆಪಿ ಕನಸು?

ಐಟಿ, ಇಡಿ ಬಳಸಿಕೊಂಡು ಬೆದರಿಸುವ ತಂತ್ರ. ಬಿಜೆಪಿ ಸೇರ್ಪಡೆಯಾದ ನಂತರ ಎಲ್ಲ ಆರೋಪಿಗಳಿಂದ ಮುಕ್ತಿ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ…

6 hours ago

ಪ.ಬಂಗಾಳ ವಿಧಾನಸಭೆ ಚುನಾವಣೆ : 142 ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ಆರಂಭ

ಕೋಲ್ಕತ್ತ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಬುಧವಾರ(ಏ.29) ಬೆಳಿಗ್ಗೆ 7 ಗಂಟೆಗೆ…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 29 ಬುಧವಾರ

7 hours ago