ಮನರಂಜನೆ

ಎರಡು ವಾರ ಮೊದಲೇ ಬರುತ್ತಾನೆ ‘ಬ್ರ್ಯಾಟ್‍’

ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಚಿತ್ರಗಳು ನಿರೀಕ್ಷೆಯಂತೆ ಬಿಡುಗಡೆಯಾಗುತ್ತಿಲ್ಲ. ಮೊದಲು ಒಂದು ದಿನ ಘೋಷಣೆಯಾಗಿ, ಕೊನೆಗೆ ಪೋಸ್ಟ್ಪೋನ್‍ ಆಗಿ, ಇನ್ನೊಂದು ದಿನ ಬಿಡುಗಡೆಯಾಗುವುದು ಸಹಜವಾಗಿದೆ. ಆದರೆ, ‘ಬ್ರ್ಯಾಟ್‍’ ಚಿತ್ರವು ಘೋಷಣೆಯಾದ ದಿನಕ್ಕಿಂತ ಎರಡು ವಾರ ಮೊದಲೇ ಬಿಡುಗಡೆಯಾಗುತ್ತಿದೆ.

‘ಡಾರ್ಲಿಂಗ್‍’ ಕೃಷ್ಣ ಅಭಿನಯದ ‘ಬ್ರ್ಯಾಟ್‍’ ಚಿತ್ರವು ನವೆಂಬರ್.14ರಂದು ಬಿಡಗುಡೆಯಾಗುತ್ತಿದೆ ಎಂದು ಚಿತ್ರತಂಡವು ಕೆಲವೇ ದಿನಗಳ ಹಿಂದೆ ಘೋಷಿಸಿತ್ತು. ಇದೀಗ ಚಿತ್ರವು ಪ್ರೀಪೋನ್‍ ಆಗಿದ್ದು, ಚಿತ್ರವು, ಅಕ್ಟೋಬರ್.31ರಂದೇ ಬಿಡುಗಡೆಯಾಗುತ್ತಿದೆ. ಅಂದು ‘ದುನಿಯಾ’ ವಿಜಯ್‍ ಅಭಿನಯದ ‘ಮಾರುತ’ ಚಿತ್ರ ಸಹ ಬಿಡುಗಡೆಯಾಗುತ್ತಿದೆ.

ಇದನ್ನು ಓದಿ: ಅಕ್ಟೋಬರ್.31ರಂದು ‘ಮಾರುತ’ನಾಗಿ ಬರಲಿದ್ದಾರೆ ‘ದುನಿಯಾ’ ವಿಜಯ್

ಈಗಾಗಲೇ, ‘ಬ್ರ್ಯಾಟ್‍’ ಚಿತ್ರದ ಒಂದು ಹಾಡು ಹಾಗೂ ಟೀಸರ್ ಬಿಡುಗಡೆಯಾಗಿತ್ತು. ಈಗ ಉತ್ತರ ಕರ್ನಾಟಕದ ಪ್ರತಿಭೆ, ಬಾಳು ಬೆಳಗುಂದಿ ಹಾಗೂ ಇಂದು ನಾಗರಾಜ್‍ ಹಾಡಿರುವ ‘ಗಂಗಿ ಗಂಗಿ…’ ಎಂಬ ಐಟಂ ಡ್ಯಾನ್ಸ್ ಬಿಡುಗಡೆಯಾಗಿದೆ. ಈ ಹಾಡಿಗೆ ಬಾಳು ಬೆಳಗುಂದಿ ಅವರೇ ಸಾಹಿತ್ಯ ಬರೆದಿದ್ದು, ಅರ್ಜುನ್‍ ಜನ್ಯ ಸಂಗೀತ ಸಂಯೋಜಿಸಿದ್ದರೆ. ಈ ಹಾಡಿಗೆ ಕೃಷ್ಣ ಮತ್ತು ಅನೈರಾ ಹೆಜ್ಜೆ ಹಾಕಿದ್ದಾರೆ.

ಈ ಹಿಂದೆ ‘ಫಸ್ಟ್ ರ‍್ಯಾಂಕ್ ರಾಜು’ ನಿರ್ಮಿಸಿದ್ದ ಮಂಜುನಾಥ್‍ ಕುಂದಕೂರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಕೃಷ್ಣಗೆ ನಾಯಕಿಯಾಗಿ ಮನಿಷಾ ಕುಂದುಕೂರು ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಕೃಷ್ಣ ಮತ್ತು ಮನಿಷಾ ಜೊತೆಗೆ ಡ್ರ್ಯಾಗನ್‍ ಮಂಜು, ಅಚ್ಯುತ್‍ ಕುಮಾರ್‍, ರಮೇಶ್‍ ಇಂದಿರಾ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅರ್ಜುನ್‍ ಜನ್ಯ ಸಂಗೀತ ಮತ್ತು ಅಭಿಲಾಷ್‍ ಕಲ್ಲತ್ತಿ ಛಾಯಾಗ್ರಹಣವಿದೆ.

‘ಬ್ರ್ಯಾಟ್‍’ ಚಿತ್ರವು ಪ್ಯಾನ್‍ ಇಂಡಿಯಾ ಚಿತ್ರವಾಗಿದ್ದು, ಕನ್ನಡವಲ್ಲದೆ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

10 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

23 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

23 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

23 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

23 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

23 hours ago