ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಚಿತ್ರಗಳು ನಿರೀಕ್ಷೆಯಂತೆ ಬಿಡುಗಡೆಯಾಗುತ್ತಿಲ್ಲ. ಮೊದಲು ಒಂದು ದಿನ ಘೋಷಣೆಯಾಗಿ, ಕೊನೆಗೆ ಪೋಸ್ಟ್ಪೋನ್ ಆಗಿ, ಇನ್ನೊಂದು ದಿನ ಬಿಡುಗಡೆಯಾಗುವುದು ಸಹಜವಾಗಿದೆ. ಆದರೆ, ‘ಬ್ರ್ಯಾಟ್’ ಚಿತ್ರವು ಘೋಷಣೆಯಾದ ದಿನಕ್ಕಿಂತ ಎರಡು ವಾರ ಮೊದಲೇ ಬಿಡುಗಡೆಯಾಗುತ್ತಿದೆ.
‘ಡಾರ್ಲಿಂಗ್’ ಕೃಷ್ಣ ಅಭಿನಯದ ‘ಬ್ರ್ಯಾಟ್’ ಚಿತ್ರವು ನವೆಂಬರ್.14ರಂದು ಬಿಡಗುಡೆಯಾಗುತ್ತಿದೆ ಎಂದು ಚಿತ್ರತಂಡವು ಕೆಲವೇ ದಿನಗಳ ಹಿಂದೆ ಘೋಷಿಸಿತ್ತು. ಇದೀಗ ಚಿತ್ರವು ಪ್ರೀಪೋನ್ ಆಗಿದ್ದು, ಚಿತ್ರವು, ಅಕ್ಟೋಬರ್.31ರಂದೇ ಬಿಡುಗಡೆಯಾಗುತ್ತಿದೆ. ಅಂದು ‘ದುನಿಯಾ’ ವಿಜಯ್ ಅಭಿನಯದ ‘ಮಾರುತ’ ಚಿತ್ರ ಸಹ ಬಿಡುಗಡೆಯಾಗುತ್ತಿದೆ.
ಇದನ್ನು ಓದಿ: ಅಕ್ಟೋಬರ್.31ರಂದು ‘ಮಾರುತ’ನಾಗಿ ಬರಲಿದ್ದಾರೆ ‘ದುನಿಯಾ’ ವಿಜಯ್
ಈಗಾಗಲೇ, ‘ಬ್ರ್ಯಾಟ್’ ಚಿತ್ರದ ಒಂದು ಹಾಡು ಹಾಗೂ ಟೀಸರ್ ಬಿಡುಗಡೆಯಾಗಿತ್ತು. ಈಗ ಉತ್ತರ ಕರ್ನಾಟಕದ ಪ್ರತಿಭೆ, ಬಾಳು ಬೆಳಗುಂದಿ ಹಾಗೂ ಇಂದು ನಾಗರಾಜ್ ಹಾಡಿರುವ ‘ಗಂಗಿ ಗಂಗಿ…’ ಎಂಬ ಐಟಂ ಡ್ಯಾನ್ಸ್ ಬಿಡುಗಡೆಯಾಗಿದೆ. ಈ ಹಾಡಿಗೆ ಬಾಳು ಬೆಳಗುಂದಿ ಅವರೇ ಸಾಹಿತ್ಯ ಬರೆದಿದ್ದು, ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದರೆ. ಈ ಹಾಡಿಗೆ ಕೃಷ್ಣ ಮತ್ತು ಅನೈರಾ ಹೆಜ್ಜೆ ಹಾಕಿದ್ದಾರೆ.
ಈ ಹಿಂದೆ ‘ಫಸ್ಟ್ ರ್ಯಾಂಕ್ ರಾಜು’ ನಿರ್ಮಿಸಿದ್ದ ಮಂಜುನಾಥ್ ಕುಂದಕೂರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಕೃಷ್ಣಗೆ ನಾಯಕಿಯಾಗಿ ಮನಿಷಾ ಕುಂದುಕೂರು ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಕೃಷ್ಣ ಮತ್ತು ಮನಿಷಾ ಜೊತೆಗೆ ಡ್ರ್ಯಾಗನ್ ಮಂಜು, ಅಚ್ಯುತ್ ಕುಮಾರ್, ರಮೇಶ್ ಇಂದಿರಾ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಮತ್ತು ಅಭಿಲಾಷ್ ಕಲ್ಲತ್ತಿ ಛಾಯಾಗ್ರಹಣವಿದೆ.
‘ಬ್ರ್ಯಾಟ್’ ಚಿತ್ರವು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಕನ್ನಡವಲ್ಲದೆ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…