ಮನರಂಜನೆ

ನವೆಂಬರ್ 21ರಂದು ಎರಡು ಚಿತ್ರಗಳ ಜೊತೆಗೆ ಬರ್ತಿದ್ದಾರೆ ಬೃಂದಾ ಆಚಾರ್ಯ

ಹೀರೋಗಳ ಎರಡು ಚಿತ್ರಗಳು ಒಂದೇ ದಿನ ಬಿಡುಗಡೆಯಾಗುವುದು ಹೊಸ ವಿಷಯವಲ್ಲ. ಕೆಲವು ವರ್ಷಗಳ ಹಿಂದೆ ಹೀರೋಗಳು ವರ್ಷಕ್ಕೆ ಎಂಟ್ಹತ್ತು ಸಿನಿಮಾ ಮಾಡುವಾಗ, ಇದು ಸಾಮಾನ್ಯವಾಗಿತ್ತು. ಒಬ್ಬ ಹೀರೋನ ಎರಡು ಚಿತ್ರಗಳು ಒಂದೇ ದಿನ ಬಿಡುಗಡೆಯಾಗುವುದು ಸಹಜವಾಗಿತ್ತ. ಇತ್ತೀಚಿನ ವರ್ಷಗಳಲ್ಲಿ ಇವೆಲ್ಲಾ ಕಡಿಮೆಯಾಗಿದೆ. ಹೀಗಿರುವಾಗಲೇ, ನಟಿ ಬೃಂದಾ ಆಚಾರ್ಯ ಅಭಿನಯದ ಎರಡು ಚಿತ್ರಗಳು ನವೆಂಬರ್ 21ರಂದು ಬಿಡುಗಡೆಯಾಗಲಿವೆ.

ಇತ್ತೀಚೆಗೆ, ‘ಬ್ಯಾಂಕ್‍ ಆಫ್‍ ಭಾಗ್ಯಲಕ್ಷ್ಮೀ’ ಚಿತ್ರದ ಬಿಡುಗಡೆ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾತನಾಡಿರುವ ಅವರು, ‘ಸಾಮಾನ್ಯವಾಗಿ ನಿಮಗೆ ಯಾರು ಸ್ಪರ್ಧೆ ಅಂತ ಕೇಳಿದರೆ, ನನಗೆ ನಾನೇ ಕಾಂಪಿಟೇಶನ್‍ ಅಂತ ಹೇಳುತ್ತಿದ್ದೆ. ನಾನು ಬೇರೆಯವರ ಜೊತೆಗೆ ಸ್ಪರ್ಧೆ ಮಾಡುವುದಿಲ್ಲ, ನನ್ನ ಜೊತೆಗೆ ಸ್ಪರ್ಧೆ ಮಾಡಿಕೊಳ್ಳುತ್ತೇನೆ. ಅದು ನಿಜವಾಗುತ್ತಿದೆ. ನವೆಂಬರ್ 21ರಂದು ನನ್ನ ಅಭಿನಯದ ಎರಡು ಚಿತ್ರಗಳು ಬಿಡುಗಡೆಯಾಗುತ್ತಿವೆ. ಒಂದು ‘ಮಾರುತ’. ಇನ್ನೊಂದು ‘ಬ್ಯಾಂಕ್‍ ಆಫ್‍ ಭಾಗ್ಯಲಕ್ಷ್ಮೀ’. ಎರಡು ಬೇರೆಬೇರೆ ರೀತಿಯ ಸಿನಿಮಾಗಳು ಮತ್ತು ಪಾತ್ರಗಳು’ ಎನ್ನುತ್ತಾರೆ.

ಇದನ್ನು ಓದಿ: 2026ರ ಸಂಕ್ರಾಂತಿಗೆ ಬರಲಿದ್ದಾನೆ ‘ಮ್ಯಾಂಗೋ ಪಚ್ಚ’

ಬ್ಯಾಂಕ್‍ ಆಫ್‍ ಭಾಗ್ಯಲಕ್ಷ್ಮೀ ಚಿತ್ರವು ಜನರಿಗೆ ಬಹಳ ಇಷ್ಟವಾಗುತ್ತದೆ ಎಂದು ನಂಬಿರುವ ಬೃಂದಾ, ‘ಇದರಲ್ಲಿ ನನ್ನ ಪಾತ್ರ ವಿಭಿನ್ನವಾಗಿದೆ. ಜನರಿಗೆ ಔಟ್‍ ಆಫ್‍ ದಿ ಬಾಕ್ಸ್ ಏನೋ ಸಿಗುತ್ತದೆ ಎಂಬ ನಂಬಿಕೆಯಿಂದ ಒಪ್ಪಿಕೊಂಡಿರುವ ಚಿತ್ರವಿದು. ಚಿತ್ರ ನೋಡಿದ ಮೇಲೆ, ಅದು ನಿಜ ಎಂದನಿಸಿತು. ಮೊದಲ ಮೀಟಿಂಗ್‍ನಲ್ಲಿ ನಿರ್ದೇಶಕರು ಒಂದು ಗಂಟೆ ತಡವಾಗಿ ಬಂದರು. ಆಗಲೇ ಅವರ ಜೊತೆಗೆ ಕೆಲಸ ಮಾಡದಿರುವುದಕ್ಕೆ ತೀರ್ಮಾನಿಸಿದ್ದೆ. ಆದರೆ, ಕಥೆ ಕೇಳಿದಾಗ, ಚಿತ್ರ ಮಾಡಬೇಕೆಂದು ತೀರ್ಮಾನಿಸಿದೆ. ಇನ್ನು, ಅವರು ಮಾಡಿದ ಟೀಸರ್ ನೋಡಿದ ಮೇಲೆ ತೀರ್ಮಾನ ಇನ್ನಷ್ಟು ಗಟ್ಟಿಯಾಗಿದೆ’ ಎನ್ನುತ್ತಾರೆ.

ಇದು ತಮ್ಮ ವೃತ್ತಿಜೀವನದ ಇದುವರೆಗೀನ ಬೆಸ್ಟ್ ಚಿತ್ರ ಮತ್ತು ಪಾತ್ರವಾಗಲಿದೆ ಎನ್ನುವ ಬೃಂದಾ, ‘ನಿರ್ದೇಶಕರು ತಾಳ್ಮೆಯಿಂದ ಕೆಲಸ ಮಾಡುತ್ತಾರೆ. ಅವರು ಹಾಗೆ ಕೆಲಸ ಮಾಡುವುದರಿಂದಲೇ, ನಮಗೂ ಅತ್ಯುತ್ತಮ ಕೊಡುವುದಕ್ಕೆ ಸಾಧ್ಯವಾಯಿತು. ದೀಕ್ಷಿತ್‍ ಕೆಲಸದ ಬಗ್ಗೆ ಮಾತನಾಡಬೇಕೆಂದರೆ ಟಿಪ್ಪಣಿ ಬರಬೇಕು. ಅವರ ಜೊತೆಗೆ ಕೆಲಸ ಮಾಡಿದ ಮೇಲೆ, ಯಾಕೆ ಎಲ್ಲರೂ ಅವರನ್ನು ಹೊಗಳುತ್ತಾರೆ ಎಂದು ಗೊತ್ತಾಯಿತು’ ಎಂದು ಹೇಳಿದರು.

‘ಬ್ಯಾಂಕ್‍ ಆಫ್‍ ಭಾಗ್ಯಲಕ್ಷ್ಮೀ’ ಚಿತ್ರದಲ್ಲಿ ದೀಕ್ಷಿತ್‍ ಶೆಟ್ಟಿ ಎದುರು ಬೃಂದಾ ನಟಿಸಿದರೆ, ‘ಮಾರುತ’ ಚಿತ್ರದಲ್ಲಿ ಶ್ರೇಯಸ್‍ ಮಂಜುಗೆ ನಾಯಕಿಯಾಗಿ ಅಭಿನಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎವ್ಗನ್ ಬಾವ್ಚಾರ್ ಎಂಬ ಕಣ್ಣಿಲ್ಲದ ಫೋಟೋಗ್ರಾಫರ್!

ಪಂಜು ಗಂಗೊಳ್ಳಿ  ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…

3 hours ago

ಓದುಗರ ಪತ್ರ: ಕಳ್ಳಸಾಗಣೆ ಕಪಿಮುಷ್ಟಿಯಲ್ಲಿ ದೇಶದ ಆರ್ಥಿಕತೆ

ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…

3 hours ago

ಓದುಗರ ಪತ್ರ: ದ್ವಿಚಕ್ರವಾಹನಗಳಿಗೆ ದರ್ಪಣ(ಕನ್ನಡಿ) ಕಡ್ಡಾಯವಾಗಲಿ

ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…

3 hours ago

ಓದುಗರ ಪತ್ರ: ವಾಹನ ನಿಲುಗಡೆ ನಿಷೇಧಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…

3 hours ago

ರಸ್ತೆಗಳು ಅಧ್ವಾನ; ಸವಾರರು ಹೈರಾಣ!

ಪ್ರಶಾಂತ್ ಎಸ್. ಮೈಸೂರು: ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನಗಳ ಸವಾರರು ಜೀವವನ್ನು…

3 hours ago

ವೈಭವದ ಸುತ್ತೂರು ಜಾತ್ರಾ ಮಹೋತ್ಸವ ಸಂಪನ್ನ

ಕೆ.ಬಿ.ರಮೇಶನಾಯಕ ಮೈಸೂರು: ಕಪಿಲಾ ನದಿ ತೀರದ ಸುತ್ತೂರಿನಲ್ಲಿ ಆರುದಿನಗಳ ಕಾಲ ಅತ್ಯಂತ ಸಡಗರ, ಸಂಭ್ರಮದಿಂದ ನಡೆದ ಧಾರ್ಮಿಕ, ಸಾಂಸ್ಕೃತಿಕ, ವೈಜ್ಞಾನಿಕ…

3 hours ago