ಮನರಂಜನೆ

ನವೆಂಬರ್ 21ರಂದು ಎರಡು ಚಿತ್ರಗಳ ಜೊತೆಗೆ ಬರ್ತಿದ್ದಾರೆ ಬೃಂದಾ ಆಚಾರ್ಯ

ಹೀರೋಗಳ ಎರಡು ಚಿತ್ರಗಳು ಒಂದೇ ದಿನ ಬಿಡುಗಡೆಯಾಗುವುದು ಹೊಸ ವಿಷಯವಲ್ಲ. ಕೆಲವು ವರ್ಷಗಳ ಹಿಂದೆ ಹೀರೋಗಳು ವರ್ಷಕ್ಕೆ ಎಂಟ್ಹತ್ತು ಸಿನಿಮಾ ಮಾಡುವಾಗ, ಇದು ಸಾಮಾನ್ಯವಾಗಿತ್ತು. ಒಬ್ಬ ಹೀರೋನ ಎರಡು ಚಿತ್ರಗಳು ಒಂದೇ ದಿನ ಬಿಡುಗಡೆಯಾಗುವುದು ಸಹಜವಾಗಿತ್ತ. ಇತ್ತೀಚಿನ ವರ್ಷಗಳಲ್ಲಿ ಇವೆಲ್ಲಾ ಕಡಿಮೆಯಾಗಿದೆ. ಹೀಗಿರುವಾಗಲೇ, ನಟಿ ಬೃಂದಾ ಆಚಾರ್ಯ ಅಭಿನಯದ ಎರಡು ಚಿತ್ರಗಳು ನವೆಂಬರ್ 21ರಂದು ಬಿಡುಗಡೆಯಾಗಲಿವೆ.

ಇತ್ತೀಚೆಗೆ, ‘ಬ್ಯಾಂಕ್‍ ಆಫ್‍ ಭಾಗ್ಯಲಕ್ಷ್ಮೀ’ ಚಿತ್ರದ ಬಿಡುಗಡೆ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾತನಾಡಿರುವ ಅವರು, ‘ಸಾಮಾನ್ಯವಾಗಿ ನಿಮಗೆ ಯಾರು ಸ್ಪರ್ಧೆ ಅಂತ ಕೇಳಿದರೆ, ನನಗೆ ನಾನೇ ಕಾಂಪಿಟೇಶನ್‍ ಅಂತ ಹೇಳುತ್ತಿದ್ದೆ. ನಾನು ಬೇರೆಯವರ ಜೊತೆಗೆ ಸ್ಪರ್ಧೆ ಮಾಡುವುದಿಲ್ಲ, ನನ್ನ ಜೊತೆಗೆ ಸ್ಪರ್ಧೆ ಮಾಡಿಕೊಳ್ಳುತ್ತೇನೆ. ಅದು ನಿಜವಾಗುತ್ತಿದೆ. ನವೆಂಬರ್ 21ರಂದು ನನ್ನ ಅಭಿನಯದ ಎರಡು ಚಿತ್ರಗಳು ಬಿಡುಗಡೆಯಾಗುತ್ತಿವೆ. ಒಂದು ‘ಮಾರುತ’. ಇನ್ನೊಂದು ‘ಬ್ಯಾಂಕ್‍ ಆಫ್‍ ಭಾಗ್ಯಲಕ್ಷ್ಮೀ’. ಎರಡು ಬೇರೆಬೇರೆ ರೀತಿಯ ಸಿನಿಮಾಗಳು ಮತ್ತು ಪಾತ್ರಗಳು’ ಎನ್ನುತ್ತಾರೆ.

ಇದನ್ನು ಓದಿ: 2026ರ ಸಂಕ್ರಾಂತಿಗೆ ಬರಲಿದ್ದಾನೆ ‘ಮ್ಯಾಂಗೋ ಪಚ್ಚ’

ಬ್ಯಾಂಕ್‍ ಆಫ್‍ ಭಾಗ್ಯಲಕ್ಷ್ಮೀ ಚಿತ್ರವು ಜನರಿಗೆ ಬಹಳ ಇಷ್ಟವಾಗುತ್ತದೆ ಎಂದು ನಂಬಿರುವ ಬೃಂದಾ, ‘ಇದರಲ್ಲಿ ನನ್ನ ಪಾತ್ರ ವಿಭಿನ್ನವಾಗಿದೆ. ಜನರಿಗೆ ಔಟ್‍ ಆಫ್‍ ದಿ ಬಾಕ್ಸ್ ಏನೋ ಸಿಗುತ್ತದೆ ಎಂಬ ನಂಬಿಕೆಯಿಂದ ಒಪ್ಪಿಕೊಂಡಿರುವ ಚಿತ್ರವಿದು. ಚಿತ್ರ ನೋಡಿದ ಮೇಲೆ, ಅದು ನಿಜ ಎಂದನಿಸಿತು. ಮೊದಲ ಮೀಟಿಂಗ್‍ನಲ್ಲಿ ನಿರ್ದೇಶಕರು ಒಂದು ಗಂಟೆ ತಡವಾಗಿ ಬಂದರು. ಆಗಲೇ ಅವರ ಜೊತೆಗೆ ಕೆಲಸ ಮಾಡದಿರುವುದಕ್ಕೆ ತೀರ್ಮಾನಿಸಿದ್ದೆ. ಆದರೆ, ಕಥೆ ಕೇಳಿದಾಗ, ಚಿತ್ರ ಮಾಡಬೇಕೆಂದು ತೀರ್ಮಾನಿಸಿದೆ. ಇನ್ನು, ಅವರು ಮಾಡಿದ ಟೀಸರ್ ನೋಡಿದ ಮೇಲೆ ತೀರ್ಮಾನ ಇನ್ನಷ್ಟು ಗಟ್ಟಿಯಾಗಿದೆ’ ಎನ್ನುತ್ತಾರೆ.

ಇದು ತಮ್ಮ ವೃತ್ತಿಜೀವನದ ಇದುವರೆಗೀನ ಬೆಸ್ಟ್ ಚಿತ್ರ ಮತ್ತು ಪಾತ್ರವಾಗಲಿದೆ ಎನ್ನುವ ಬೃಂದಾ, ‘ನಿರ್ದೇಶಕರು ತಾಳ್ಮೆಯಿಂದ ಕೆಲಸ ಮಾಡುತ್ತಾರೆ. ಅವರು ಹಾಗೆ ಕೆಲಸ ಮಾಡುವುದರಿಂದಲೇ, ನಮಗೂ ಅತ್ಯುತ್ತಮ ಕೊಡುವುದಕ್ಕೆ ಸಾಧ್ಯವಾಯಿತು. ದೀಕ್ಷಿತ್‍ ಕೆಲಸದ ಬಗ್ಗೆ ಮಾತನಾಡಬೇಕೆಂದರೆ ಟಿಪ್ಪಣಿ ಬರಬೇಕು. ಅವರ ಜೊತೆಗೆ ಕೆಲಸ ಮಾಡಿದ ಮೇಲೆ, ಯಾಕೆ ಎಲ್ಲರೂ ಅವರನ್ನು ಹೊಗಳುತ್ತಾರೆ ಎಂದು ಗೊತ್ತಾಯಿತು’ ಎಂದು ಹೇಳಿದರು.

‘ಬ್ಯಾಂಕ್‍ ಆಫ್‍ ಭಾಗ್ಯಲಕ್ಷ್ಮೀ’ ಚಿತ್ರದಲ್ಲಿ ದೀಕ್ಷಿತ್‍ ಶೆಟ್ಟಿ ಎದುರು ಬೃಂದಾ ನಟಿಸಿದರೆ, ‘ಮಾರುತ’ ಚಿತ್ರದಲ್ಲಿ ಶ್ರೇಯಸ್‍ ಮಂಜುಗೆ ನಾಯಕಿಯಾಗಿ ಅಭಿನಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

7 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

8 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

9 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

10 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

10 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

11 hours ago