ಕಳೆದ ವರ್ಷದ ಕೊನೆಯಲ್ಲಿ ಪ್ರಾರಂಭವಾಗಿದ್ದ ‘Congratulations ಬ್ರದರ್’ ಚಿತ್ರವು ಇದೀಗ ಬಿಡುಗಡೆಯ ಹಂತಕ್ಕೆ ಬಂದಿದೆ. ನವೆಂಬರ್.21ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಚಿತ್ರತಂಡ ಚಾಮರಾಜನಗರದಿಂದ ಬೀದರ್ವರೆಗೂ ಎಲ್ಲಾ ಜಿಲ್ಲೆಗಳಿಗೂ ಭೇಟಿ ಕೊಟ್ಟು, ಚಿತ್ರದ ಪ್ರಚಾರ ನಡೆಸಲಿದೆ.
‘Congratulations ಬ್ರದರ್’ ಹೊಸಬರ ಸಿನಿಮಾ. ಈ ಚಿತ್ರವನ್ನು ಪ್ರಶಾಂತ್ ಕಲ್ಲೂರ್ ನಿರ್ಮಿಸಿದರೆ, ಪ್ರತಾಪ್ ಗಂಧರ್ವ ನಿರ್ದೇಶನ ಮಾಡಿದ್ದಾರೆ. ನಾಯಕ ರಕ್ಷಿತ್ ನಾಗ್, ನಾಯಕಿ ಅನೂಷಾ ಎಲ್ಲರೂ ಹೊಸಬರೇ. ಚಿತ್ರತಂಡದಲ್ಲಿ ಹಳಬರೆಂದರೆ ಅದು ನಿರ್ದೇಶಕ ಹರಿ ಸಂತೋಷ್. ‘ಅಲೆಮಾರಿ’ ಮುಂತಾದ ಚಿತ್ರಗಳನ್ನು ನಿರ್ದೇಶಿಸಿರುವ ಹರಿ ಸಂತೋಷ್, ಈ ಚಿತ್ರಕ್ಕೆ ಕ್ರಿಯೇಟಿವ್ ಹೆಡ್ ಆಗಿ ಕೆಲಸ ಮಾಡಿದ್ದಾರೆ. ಜೊತೆಗೆ, ಚಿತ್ರದ ಕಥೆಯೂ ಅವರದ್ದೇ.
ಚಿತ್ರದ ಬಿಡುಗಡೆಗೂ ಮುನ್ನ ಚಿತ್ರತಂಡದವರು ಬೇರೆ ಜಿಲ್ಲೆಗಳಿಗೆ ಹೋಗಿ ಪತ್ರಿಕಾಗೋಷ್ಠಿಗಳನ್ನು ಮಾಡಿ, ಚಿತ್ರದ ಪ್ರಚಾರ ಮಾಡುವುದು ಸಾಮಾನ್ಯ. ‘Congratulations ಬ್ರದರ್’ ಚಿತ್ರತಂಡವು ಈ ನಿಟ್ಟಿನಲ್ಲಿ ಪ್ರಚಾರದ ವಾಹನವೊಂದನ್ನು ಸಿದ್ಧ ಮಾಡಿದೆ. ಚಿತ್ರತಂಡದವರು ಈ ವಾಹನದ ಜೊತೆಗೆ ಹೋಗಿ, ಚಿತ್ರದ ಬಗ್ಗೆ ಪ್ರಚಾರ ಮಾಡಿಬರಲಿದೆ. ನಿರ್ಮಾಪಕ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು ಇತ್ತೀಚೆಗೆ ವೀರೇಶ ಚಿತ್ರಮಂದಿರದಲ್ಲಿ ಈ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.
ಇದನ್ನೂ ಓದಿ:-ಇದು ಏಳನೇ ತರಗತಿ ಹುಡುಗಿಯ ಹೋರಾಟದ ಕಥೆ …
ಪ್ರಚಾರದ ಕುರಿತು ಮಾತನಾಡುವ ಹರಿ ಸಂತೋಷ್, ‘ನಮ್ಮ ಚಿತ್ರ ಬಿಡುಗಡೆಯ ಹಂತ ತಲುಪಿದೆ. ನವೆಂಬರ್ 21 ಕ್ಕೆ ಚಿತ್ರ ಬಿಡುಗಡೆಯಾಗಲಿದೆ. ಅದರ ಪೂರ್ವಭಾವಿಯಾಗಿ ಕಲಾವಿದರು ಕರ್ನಾಟಕದಾದ್ಯಂತ ಪ್ರವಾಸ ಮಾಡಲಿದ್ದಾರೆ. ಎಲ್ಲಾ ಜಿಲ್ಲೆಗಳಿಗೂ ತೆರಳಿ ಅಲ್ಲಿನ ಜನರನ್ನು, ವಿಶೇಷವಾಗಿ ಯುವ ಸಮುದಾಯವನ್ನು ಭೇಟಿ ಮಾಡಿ ಮಾತನಾಡಲಿದ್ದಾರೆ’ ಎಂದರು.
‘Congratulations ಬ್ರದರ್’ ಚಿತ್ರದಲ್ಲಿ ರಕ್ಷಿತ್ ನಾಗ್, ಅನುಷಾ, ಸಂಜನಾ ದಾಸ್, ಚೇತನ್ ದುರ್ಗ ಮುಂತಾದವರು ನಟಿಸಿದ್ದು, ಸೂರಜ್ ಜೋಯಿಸ್ ಸಂಗೀತ ಮತ್ತು ಎಂ.ಜಿ. ಗುರುಪ್ರಸಾದ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…