ಸೂರ್ಯ ಅಭಿನಯದ ಬಹುನಿರೀಕ್ಷಿತ ತಮಿಳು ಚಿತ್ರ ‘ಕಂಗುವಾ’, ಅಕ್ಟೋಬರ್ 10ರಂದು ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಚಿತ್ರದ ಅಂತಿಮ ಕೆಲಸಗಳಲ್ಲಿ ಚಿತ್ರತಂಡ ತೊಡಗಿಸಿಕೊಂಡಿದ್ದು, ಸದ್ಯದಲ್ಲೇ ಚಿತ್ರದ ಪ್ರಚಾರ ಶುರುವಾಗಲಿದೆ. ಈ ಮಧ್ಯೆ, ಚಿತ್ರದಲ್ಲಿ ಸೂರ್ಯ ಸಹೋದರ ಕಾರ್ತಿ ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ ಎಂಬ ದೊಡ್ಡ ಸುದ್ದಿ ಬಂದಿದೆ.
ಸೂರ್ಯ ಮತ್ತು ಕಾರ್ತಿ ಬಹಳ ವರ್ಷಗಳಲ್ಲಿ ತಮಿಳು ಚಿತ್ರರಂಗದಲ್ಲಿ ನಟರಾಗಿ ಗುರುತಿಸಿಕೊಂಡಿದ್ದಾರೆ. ಆದರೆ, ಯಾವತ್ತೂ ಜೊತೆಯಾಗಿ ನಟಿಸಿರಲಿಲ್ಲ. ಹಾಗೆ ನಟಿಸುವುದಕ್ಕೆ ಅವಕಾಶವೂ ಸಿಕ್ಕಿರಲಿಲ್ಲವೆನ್ನಿ. ಈಗ ‘ಕಂಗುವಾ’ ಚಿತ್ರದಲ್ಲಿ ಸೂರ್ಯ ನಾಯಕನಾದರೆ, ಕಾರ್ತಿ ವಿಲನ್ ಆಗಿ ನಟಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಸೂರ್ಯ ಮತ್ತು ಕಾರ್ತಿ ಜೊತೆಯಾಗಿ ನಟಿಸುತ್ತಿರುವ ವಿಷಯವನ್ನು ಚಿತ್ರತಂಡ ಇದುವರೆಗೂ ಎಲ್ಲೂ ಹೇಳಿಕೊಂಡಿಲ್ಲ. ಇತ್ತೀಚೆಗೆ ಸಂದರ್ಶನದಲ್ಲಿ ಮಾತನಾಡುವ ಚಿತ್ರದ ಗೀತರಚನೆಕಾರರಾದ ವಿವೇಕ, ಕಾರ್ತಿ ಸಹ ‘ಕಂಗುವ’ ಚಿತ್ರದಲ್ಲಿ ನಟಿಸಿರುವ ಸುಳಿವು ನೀಡಿದ್ದಾರೆ.
ಸೂರ್ಯ ಮತ್ತು ಕಾರ್ತಿಯನ್ನು ಒಟ್ಟಿಗೆ ಒಂದೇ ಚಿತ್ರದಲ್ಲಿ ತೋರಿಸಬೇಕು ಎಂಬುದು ಹಲವು ನಿರ್ದೇಶಕರ ಕನಸಾಗಿತ್ತು. ಆದರೆ, ಅಂಥದ್ದೊಂದು ಅವಕಾಶ ಇದುವರೆಗೂ ಕೂಡಿಬಂದಿರಲಿಲ್ಲ. ಈಗ ನಿರ್ದೇಶಕ ಶಿವಗೆ ಅಂಥದ್ದೊಂದು ಅವಕಾಶ ಸಿಕ್ಕಿದ್ದು, ಅವರು ‘ಕಂಗುವ’ ಚಿತ್ರದಲ್ಲಿ ಬಳಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಅಂದಹಾಗೆ, ‘ಕಂಗುವ’ ಒಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಐದು ಭಾಷೆಗಳಲ್ಲಿ ಮೂಡಿ ಬರುತ್ತಿದೆ. ವಿಶೇಷವೆಂದರೆ, ಈ ಚಿತ್ರದ ಮೂಲಕ ಬಾಲಿವುಡ್ ನಟರಾದ ದಿಶಾ ಪಠಾಣಿ ಮತ್ತು ಬಾಬ್ಬಿ ಡಿಯೋಲ್ ಇಬ್ಬರೂ ತಮಿಳು ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಚಿತ್ರದ ನಾಯಕಿಯಾಗಿ ದಿಶಾ ಕಾಣಿಸಿಕೊಂಡರೆ, ವಿಲನ್ ಆಗಿ ಬಾಬ್ಬಿ ಡಿಯೋಲ್ ಇದ್ದಾರೆ. ಜೊತೆಗೆ ಜಗಪತಿ ಬಾಬು, ಯೋಗಿ ಬಾಬು, ಆನಂದರಾಜ್, ರೆಡಿನ್ ಕಿಂಗ್ಸ್ಲೇ ಮುಂತಾದವರು ನಟಿಸಿದ್ದಾರೆ. 300 ಕೋಟಿ ರೂ ಬಜೆಟ್ನ ಈ ಚಿತ್ರವನ್ನು ಕರ್ನಾಟಕದಲ್ಲಿ ಕೆ.ವಿ.ಎನ್. ಪ್ರೊಡಕ್ಷನ್ಸ್ ಸಂಸ್ಥೆಯು ನಿರ್ಮಿಸುತ್ತಿದೆ.
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…
ದಿಸ್ಪುರ್: ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…
ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…
ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…