ಶಶಾಂಕ್ ನಿರ್ದೇಶನದ ‘ಬ್ರ್ಯಾಟ್’ ಬಿಡುಗಡೆಯಗಿ ಎರಡು ವಾರಗಳಾಗಿ, ಮೂರನೇ ವಾರಲ್ಲಿ ಪ್ರದರ್ಶನ ಕಾಣುತ್ತಿದೆ. ಆದರೆ, ಚಿತ್ರ ಹೆಚ್ಚೇನೂ ಸದ್ದು ಮಾಡುತ್ತಿಲ್ಲ. ಈ ನಿಟ್ಟಿನಲ್ಲಿ ಶಶಾಂಕ್, ಚಿತ್ರ ನೋಡುವುದಕ್ಕೆ ಪ್ರೇಕ್ಷಕರನ್ನು ಆಹ್ವಾನಿಸಿದ್ದಾರೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಒಂದು ಪೋಸ್ಟ್ ಹಾಕಿದ್ದಾರೆ.
‘ನನ್ನ ನಿರ್ದೇಶನದ ಮತ್ತು ಕೃಷ್ಣ ಅಭಿನಯದ ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರವನ್ನು OTT ಮತ್ತು ಯೂಟ್ಯೂಬ್ನಲ್ಲಿ ನೋಡಿ, ಚಿತ್ರಮಂದಿರದಲ್ಲಿ ನೋಡುವುದನ್ನು ಮಿಸ್ ಮಾಡಿಕೊಂಡೆವು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ಪ್ರೇಕ್ಷಕರೇ, ಇದೀಗ ನಮ್ಮದೇ ತಂಡದ ‘ಬ್ರ್ಯಾಟ್’ ಚಿತ್ರ ಪ್ರೇಕ್ಷಕರು ಮತ್ತು ವಿಮರ್ಶಕರ ಪ್ರಶಂಸೆಗಳಿಸಿ ಮೂರನೇ ವಾರದಲ್ಲಿ ಪ್ರದರ್ಶನಗೊಳ್ಳುತ್ತಿದೆ. ಈ ಚಿತ್ರವನ್ನು ಚಿತ್ರಮಂದಿರದಲ್ಲಿ ನೋಡುವುದನ್ನು ಮಿಸ್ ಮಾಡಿಕೊಳ್ಳದಿರಿ’ ಎಂದು ಬರೆದುಕೊಂಡಿದ್ದಾರೆ.
ಡಾಲ್ಫಿನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಮಂಜುನಾಥ್ ಕಂದಕೂರ್ ನಿರ್ಮಿಸಿರುವ, ಶಶಾಂಕ್ ನಿರ್ದೇಶನದ ‘ಬ್ರ್ಯಾಟ್’ ಚಿತ್ರವು ಅಕ್ಟೊಬರ್.31ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಕೃಷ್ಣಗೆ ನಾಯಕಿಯಾಗಿ ಮನಿಷಾ ಕುಂದುಕೂರು ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಕೃಷ್ಣ ಮತ್ತು ಮನಿಷಾ ಜೊತೆಗೆ ಡ್ರ್ಯಾಗನ್ ಮಂಜು, ಅಚ್ಯುತ್ ಕುಮಾರ್, ರಮೇಶ್ ಇಂದಿರಾ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಮತ್ತು ಅಭಿಲಾಷ್ ಕಲ್ಲತ್ತಿ ಛಾಯಾಗ್ರಹಣವಿದೆ.
ಮಕ್ಕಳೊಂದಿಗೆ ಸರ್ಕಾರಿ ಕಾಲೇಜುಗಳತ್ತ ಮುಖ ಮಾಡಿದ ಪೋಷಕರು ಗಿರೀಶ್ ಹುಣಸೂರು ಮೈಸೂರು : ೨೦೨೫-೨೬ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ…
ದಕ್ಷಿಣದ ರಾಜ್ಯಗಳಲ್ಲಿ ತನ್ನ ಪಾರುಪತ್ಯ ಭದ್ರಗೊಳಿಸಲು ಬಿಜೆಪಿಗೆ ಕರ್ನಾಟಕ ಅವಶ್ಯ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ…
ತಮಿಳುನಾಡಿನ ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆ ಮೂಲಕ ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ ಮಿತ್ರ ಪಕ್ಷಗಳ…
ಕಟ್ಟಡವನ್ನು ಜೀರ್ಣೋದ್ಧಾರ ಮಾಡಬೇಕೋ? ನೆಲಸಮಗೊಳಿಸಿ ಹೊಸದಾಗಿ ನಿರ್ಮಿಸಬೇಕೋ? ಸುಪ್ರೀಂ ತೀರ್ಪು ಎದುರು ನೋಡುತ್ತಿರುವ ಪಾಲಿಕೆ ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು :…
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…