ಶಶಾಂಕ್ ನಿರ್ದೇಶನದ ‘ಬ್ರ್ಯಾಟ್’ ಬಿಡುಗಡೆಯಗಿ ಎರಡು ವಾರಗಳಾಗಿ, ಮೂರನೇ ವಾರಲ್ಲಿ ಪ್ರದರ್ಶನ ಕಾಣುತ್ತಿದೆ. ಆದರೆ, ಚಿತ್ರ ಹೆಚ್ಚೇನೂ ಸದ್ದು ಮಾಡುತ್ತಿಲ್ಲ. ಈ ನಿಟ್ಟಿನಲ್ಲಿ ಶಶಾಂಕ್, ಚಿತ್ರ ನೋಡುವುದಕ್ಕೆ ಪ್ರೇಕ್ಷಕರನ್ನು ಆಹ್ವಾನಿಸಿದ್ದಾರೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಒಂದು ಪೋಸ್ಟ್ ಹಾಕಿದ್ದಾರೆ.
‘ನನ್ನ ನಿರ್ದೇಶನದ ಮತ್ತು ಕೃಷ್ಣ ಅಭಿನಯದ ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರವನ್ನು OTT ಮತ್ತು ಯೂಟ್ಯೂಬ್ನಲ್ಲಿ ನೋಡಿ, ಚಿತ್ರಮಂದಿರದಲ್ಲಿ ನೋಡುವುದನ್ನು ಮಿಸ್ ಮಾಡಿಕೊಂಡೆವು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ಪ್ರೇಕ್ಷಕರೇ, ಇದೀಗ ನಮ್ಮದೇ ತಂಡದ ‘ಬ್ರ್ಯಾಟ್’ ಚಿತ್ರ ಪ್ರೇಕ್ಷಕರು ಮತ್ತು ವಿಮರ್ಶಕರ ಪ್ರಶಂಸೆಗಳಿಸಿ ಮೂರನೇ ವಾರದಲ್ಲಿ ಪ್ರದರ್ಶನಗೊಳ್ಳುತ್ತಿದೆ. ಈ ಚಿತ್ರವನ್ನು ಚಿತ್ರಮಂದಿರದಲ್ಲಿ ನೋಡುವುದನ್ನು ಮಿಸ್ ಮಾಡಿಕೊಳ್ಳದಿರಿ’ ಎಂದು ಬರೆದುಕೊಂಡಿದ್ದಾರೆ.
ಡಾಲ್ಫಿನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಮಂಜುನಾಥ್ ಕಂದಕೂರ್ ನಿರ್ಮಿಸಿರುವ, ಶಶಾಂಕ್ ನಿರ್ದೇಶನದ ‘ಬ್ರ್ಯಾಟ್’ ಚಿತ್ರವು ಅಕ್ಟೊಬರ್.31ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಕೃಷ್ಣಗೆ ನಾಯಕಿಯಾಗಿ ಮನಿಷಾ ಕುಂದುಕೂರು ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಕೃಷ್ಣ ಮತ್ತು ಮನಿಷಾ ಜೊತೆಗೆ ಡ್ರ್ಯಾಗನ್ ಮಂಜು, ಅಚ್ಯುತ್ ಕುಮಾರ್, ರಮೇಶ್ ಇಂದಿರಾ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಮತ್ತು ಅಭಿಲಾಷ್ ಕಲ್ಲತ್ತಿ ಛಾಯಾಗ್ರಹಣವಿದೆ.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…