ಮನರಂಜನೆ

77ನೇ ಕಾನ್ ಫಿಲ್ಮ್ ಫೆಸ್ಟಿವಲ್: ಲಾ ಸಿನೆಫ್‌ ಪ್ರಶಸ್ತಿ ಗೆದ್ದ ಮೈಸೂರಿಗನಿಗೆ ಅಭಿನಂದನೆ ಸಲ್ಲಿಸಿದ ರಾಕಿಂಗ್‌ ಸ್ಟಾರ್‌!

ಫಿಲ್ಮ್‌ ಅಂಡ್‌ ಟೆಲಿವಿಷನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾದ ವಿದ್ಯಾರ್ಥಿಯಾದ ಮೈಸೂರಿಗ ಚಿದಾನಂದ್‌ ಎಸ್‌ ನಾಯಕ್‌ ಅವರ ಸನ್‌ ಫ್ಲವರ್ಸ್‌ ವರ್‌ ದ ಫಸ್ಟ್‌ ಒನ್ಸ್‌ ಟು ನೋ! ಎಂಬ ಕಿರು ಚಿತ್ರಕ್ಕಾಗಿ 77ನೇ ಕಾನ್ ಫಿಲ್ಮ್ ಫೆಸ್ಟಿವಲ್ ನಲ್ಲಿ ಲಾ ಸಿನೆಫ್‌ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ. ಇವರಿಗೆ ಕನ್ನಡದ ಖ್ಯಾತ ನಟ ರಾಕಿಂಗ್‌ ಸ್ಟಾರ್‌ ಯಶ್‌ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಮೇ.23 ರಂದು ಬುನ್ಯುಯಲ್‌ ಥಿಯೇಟರ್‌ನಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗಿದೆ. ಫೈನಲ್‌ ಹಂತಕ್ಕೆ ಒಟ್ಟು 18 ಕಿರು ಚಿತ್ರಗಳು ಆಯ್ಕೆಯಾಗಿದ್ದು, ಎಲ್ಲವನ್ನು ಸೋಲಿಸಿರುವ  ಸನ್‌ ಫ್ಲವರ್ಸ್‌ ವರ್‌ ದ ಫಸ್ಟ್‌ ಒನ್ಸ್‌ ಟು ನೋ! ಚಿತ್ರ ಪ್ರಶಸ್ತಿ ಬಾಚಿಕೊಂಡಿದೆ.

ಇನ್ನು 1 ವರ್ಷದ ಟಿಲಿವಿಷನ್‌ ಕೋರ್ಸ್‌ನ ವಿದ್ಯಾರ್ಥಿಯೊಬ್ಬನ ಚಿತ್ರ ಕ್ಯಾನಸ್‌ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿರುವುದು ಇದೇ ಮೊದಲಾಗಿದೆ.

ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ರಾಕಿಂಗ್‌ ಸ್ಟಾರ್‌ ಯಶ್‌, ಕೇನ್ಸ್‌ ನಲ್ಲಿ ಅತ್ಯುತ್ತಮ ಕಿರುಚಿತ್ರಕ್ಕಾಗಿ ಲಾ ಸಿನೆಫ್‌ ಪ್ರಶಸ್ತಿ ಗೆದ್ದಿದಕ್ಕಾಗಿ ಚಿದಾನಂದ್‌ ಎಸ್‌. ನಾಯಕ್‌ ಹಾಗೂ ಸನ್‌ ಫ್ಲವರ್ಸ್‌ ವೇರ್‌ ದಿ ಫಸ್ಟ್‌ ಒನ್ಸ್‌ ಟು ನೋ! ಗೆ ಅನಂತನಾಂತ ವಂದನೆಗಳು. ನೀವು ಕನ್ನಡ ಜಾನಪದವನ್ನು ಜಾಗತಿಕ ಹಂತಕ್ಕೆ ಕೊಂಡೊಯ್ಯುವುದನ್ನು ಮತ್ತು ಭಾರತೀಯ ಚಿತ್ರರಂಗಕ್ಕೆ ಹೊಸ ಮಾನದಂಡಗಳನ್ನು ಹೊದಿಸುವುದನ್ನು ನೋಡಲು ಬಯಸುತ್ತೇನೆ ಎಂದು ರಾಕಿ ಭಾಯ್‌ ಟ್ವೀಟ್‌ ಮಾಡಿ, ಶುಭ ಕೋರಿದ್ದಾರೆ.

ಲಾ ಸಿನೆಫ್‌ ವಿಭಾಗವು ಹೊಸ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರಪಂಚದಾದ್ಯಂತ ಚಲನಚಿತ್ರ ಶಾಲೆಗಳಿಂದ ಚಿತ್ರಗಳನ್ನು ಗುರುತಿಸುತ್ತದೆ. ಈ ವರ್ಷ ಒಟ್ಟು 18 ಕಿರುಚಿತ್ರಗಳು ಆಯ್ಕೆಯಾಗಿದ್ದು, ಅದರಲ್ಲಿ 14 ಲೈವ್‌ ಅಕ್ಷನ್‌ ಮತ್ತು 4 ಆನಿಮೇಷನ್‌ ಚಿತ್ರಗಳು ಆಯ್ಕೆಯಾಗಿವೆ. ಈ ಸ್ಪರ್ಧೆಯಲ್ಲಿ 2263 ಚಲನಚಿತ್ರಗಳು ಭಾಗವಹಿಸಿದ್ದವು.

ಸನ್‌ ಫ್ಲವರ್ಸ್‌ ವರ್‌ ದ ಫಸ್ಟ್‌ ಒನ್ಸ್‌ ಟು ನೋ! ಕಥೆಯು ವಯಸ್ಸಾದ ಅಜ್ಜಿಯು ಹುಂಜವನ್ನು ಕದಿಯುವ ಕಥೆಯಾಗಿದ್ದು, ಇದು ಸಮುದಾಯವನು ಅಸ್ತವ್ಯಸ್ಥಗೊಳಿಸುತ್ತದೆ. ಹುಂಜವನ್ನು ಮರಳಿ ಪಡೆಯಲು ಭವಿಷ್ಯವಾಣಿಯ ಮೊರೆ ಹೋಗಿ, ಅಲ್ಲಿಂದ ಅಜ್ಜಿಯ ಕುಟುಂಬವನ್ನು ಗಡಿಪಾರು ಮಾಡುತ್ತದೆ. ಇದು ಕಥೆಯ ತಿರುಳಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

54 mins ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

2 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

2 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

3 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

4 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

8 hours ago