ಮನರಂಜನೆ

77ನೇ ಕಾನ್ ಫಿಲ್ಮ್ ಫೆಸ್ಟಿವಲ್: ಲಾ ಸಿನೆಫ್‌ ಪ್ರಶಸ್ತಿ ಗೆದ್ದ ಮೈಸೂರಿಗನಿಗೆ ಅಭಿನಂದನೆ ಸಲ್ಲಿಸಿದ ರಾಕಿಂಗ್‌ ಸ್ಟಾರ್‌!

ಫಿಲ್ಮ್‌ ಅಂಡ್‌ ಟೆಲಿವಿಷನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾದ ವಿದ್ಯಾರ್ಥಿಯಾದ ಮೈಸೂರಿಗ ಚಿದಾನಂದ್‌ ಎಸ್‌ ನಾಯಕ್‌ ಅವರ ಸನ್‌ ಫ್ಲವರ್ಸ್‌ ವರ್‌ ದ ಫಸ್ಟ್‌ ಒನ್ಸ್‌ ಟು ನೋ! ಎಂಬ ಕಿರು ಚಿತ್ರಕ್ಕಾಗಿ 77ನೇ ಕಾನ್ ಫಿಲ್ಮ್ ಫೆಸ್ಟಿವಲ್ ನಲ್ಲಿ ಲಾ ಸಿನೆಫ್‌ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ. ಇವರಿಗೆ ಕನ್ನಡದ ಖ್ಯಾತ ನಟ ರಾಕಿಂಗ್‌ ಸ್ಟಾರ್‌ ಯಶ್‌ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಮೇ.23 ರಂದು ಬುನ್ಯುಯಲ್‌ ಥಿಯೇಟರ್‌ನಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗಿದೆ. ಫೈನಲ್‌ ಹಂತಕ್ಕೆ ಒಟ್ಟು 18 ಕಿರು ಚಿತ್ರಗಳು ಆಯ್ಕೆಯಾಗಿದ್ದು, ಎಲ್ಲವನ್ನು ಸೋಲಿಸಿರುವ  ಸನ್‌ ಫ್ಲವರ್ಸ್‌ ವರ್‌ ದ ಫಸ್ಟ್‌ ಒನ್ಸ್‌ ಟು ನೋ! ಚಿತ್ರ ಪ್ರಶಸ್ತಿ ಬಾಚಿಕೊಂಡಿದೆ.

ಇನ್ನು 1 ವರ್ಷದ ಟಿಲಿವಿಷನ್‌ ಕೋರ್ಸ್‌ನ ವಿದ್ಯಾರ್ಥಿಯೊಬ್ಬನ ಚಿತ್ರ ಕ್ಯಾನಸ್‌ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿರುವುದು ಇದೇ ಮೊದಲಾಗಿದೆ.

ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ರಾಕಿಂಗ್‌ ಸ್ಟಾರ್‌ ಯಶ್‌, ಕೇನ್ಸ್‌ ನಲ್ಲಿ ಅತ್ಯುತ್ತಮ ಕಿರುಚಿತ್ರಕ್ಕಾಗಿ ಲಾ ಸಿನೆಫ್‌ ಪ್ರಶಸ್ತಿ ಗೆದ್ದಿದಕ್ಕಾಗಿ ಚಿದಾನಂದ್‌ ಎಸ್‌. ನಾಯಕ್‌ ಹಾಗೂ ಸನ್‌ ಫ್ಲವರ್ಸ್‌ ವೇರ್‌ ದಿ ಫಸ್ಟ್‌ ಒನ್ಸ್‌ ಟು ನೋ! ಗೆ ಅನಂತನಾಂತ ವಂದನೆಗಳು. ನೀವು ಕನ್ನಡ ಜಾನಪದವನ್ನು ಜಾಗತಿಕ ಹಂತಕ್ಕೆ ಕೊಂಡೊಯ್ಯುವುದನ್ನು ಮತ್ತು ಭಾರತೀಯ ಚಿತ್ರರಂಗಕ್ಕೆ ಹೊಸ ಮಾನದಂಡಗಳನ್ನು ಹೊದಿಸುವುದನ್ನು ನೋಡಲು ಬಯಸುತ್ತೇನೆ ಎಂದು ರಾಕಿ ಭಾಯ್‌ ಟ್ವೀಟ್‌ ಮಾಡಿ, ಶುಭ ಕೋರಿದ್ದಾರೆ.

ಲಾ ಸಿನೆಫ್‌ ವಿಭಾಗವು ಹೊಸ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರಪಂಚದಾದ್ಯಂತ ಚಲನಚಿತ್ರ ಶಾಲೆಗಳಿಂದ ಚಿತ್ರಗಳನ್ನು ಗುರುತಿಸುತ್ತದೆ. ಈ ವರ್ಷ ಒಟ್ಟು 18 ಕಿರುಚಿತ್ರಗಳು ಆಯ್ಕೆಯಾಗಿದ್ದು, ಅದರಲ್ಲಿ 14 ಲೈವ್‌ ಅಕ್ಷನ್‌ ಮತ್ತು 4 ಆನಿಮೇಷನ್‌ ಚಿತ್ರಗಳು ಆಯ್ಕೆಯಾಗಿವೆ. ಈ ಸ್ಪರ್ಧೆಯಲ್ಲಿ 2263 ಚಲನಚಿತ್ರಗಳು ಭಾಗವಹಿಸಿದ್ದವು.

ಸನ್‌ ಫ್ಲವರ್ಸ್‌ ವರ್‌ ದ ಫಸ್ಟ್‌ ಒನ್ಸ್‌ ಟು ನೋ! ಕಥೆಯು ವಯಸ್ಸಾದ ಅಜ್ಜಿಯು ಹುಂಜವನ್ನು ಕದಿಯುವ ಕಥೆಯಾಗಿದ್ದು, ಇದು ಸಮುದಾಯವನು ಅಸ್ತವ್ಯಸ್ಥಗೊಳಿಸುತ್ತದೆ. ಹುಂಜವನ್ನು ಮರಳಿ ಪಡೆಯಲು ಭವಿಷ್ಯವಾಣಿಯ ಮೊರೆ ಹೋಗಿ, ಅಲ್ಲಿಂದ ಅಜ್ಜಿಯ ಕುಟುಂಬವನ್ನು ಗಡಿಪಾರು ಮಾಡುತ್ತದೆ. ಇದು ಕಥೆಯ ತಿರುಳಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

36 mins ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

2 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

2 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

2 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

4 hours ago

ಜಾನಕಿ ಅಮ್ಮ ಮೊದಲು, ಕೊನೆಯ ಹಾಡು ಹಾಡಿದ್ದು, ಗಾಯನ ನಿಲ್ಲಿಸಿದ್ದು ಮೈಸೂರಿನಲ್ಲೇ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಜೀವಮಾನದ ಮೊದಲ ಸಾರ್ವಜನಿಕ ಗಾಯನ ಕಾರ್ಯಕ್ರಮ ಮೈಸೂರಿನಿಂದಲೇ ಆರಂಭವಾಗಿತ್ತು. ಅಚ್ಚರಿಯೆಂದರೆ ಅವರ…

5 hours ago