ಮನರಂಜನೆ

77ನೇ ಕಾನ್ ಫಿಲ್ಮ್ ಫೆಸ್ಟಿವಲ್: ಲಾ ಸಿನೆಫ್‌ ಪ್ರಶಸ್ತಿ ಗೆದ್ದ ಮೈಸೂರಿಗನಿಗೆ ಅಭಿನಂದನೆ ಸಲ್ಲಿಸಿದ ರಾಕಿಂಗ್‌ ಸ್ಟಾರ್‌!

ಫಿಲ್ಮ್‌ ಅಂಡ್‌ ಟೆಲಿವಿಷನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾದ ವಿದ್ಯಾರ್ಥಿಯಾದ ಮೈಸೂರಿಗ ಚಿದಾನಂದ್‌ ಎಸ್‌ ನಾಯಕ್‌ ಅವರ ಸನ್‌ ಫ್ಲವರ್ಸ್‌ ವರ್‌ ದ ಫಸ್ಟ್‌ ಒನ್ಸ್‌ ಟು ನೋ! ಎಂಬ ಕಿರು ಚಿತ್ರಕ್ಕಾಗಿ 77ನೇ ಕಾನ್ ಫಿಲ್ಮ್ ಫೆಸ್ಟಿವಲ್ ನಲ್ಲಿ ಲಾ ಸಿನೆಫ್‌ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ. ಇವರಿಗೆ ಕನ್ನಡದ ಖ್ಯಾತ ನಟ ರಾಕಿಂಗ್‌ ಸ್ಟಾರ್‌ ಯಶ್‌ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಮೇ.23 ರಂದು ಬುನ್ಯುಯಲ್‌ ಥಿಯೇಟರ್‌ನಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗಿದೆ. ಫೈನಲ್‌ ಹಂತಕ್ಕೆ ಒಟ್ಟು 18 ಕಿರು ಚಿತ್ರಗಳು ಆಯ್ಕೆಯಾಗಿದ್ದು, ಎಲ್ಲವನ್ನು ಸೋಲಿಸಿರುವ  ಸನ್‌ ಫ್ಲವರ್ಸ್‌ ವರ್‌ ದ ಫಸ್ಟ್‌ ಒನ್ಸ್‌ ಟು ನೋ! ಚಿತ್ರ ಪ್ರಶಸ್ತಿ ಬಾಚಿಕೊಂಡಿದೆ.

ಇನ್ನು 1 ವರ್ಷದ ಟಿಲಿವಿಷನ್‌ ಕೋರ್ಸ್‌ನ ವಿದ್ಯಾರ್ಥಿಯೊಬ್ಬನ ಚಿತ್ರ ಕ್ಯಾನಸ್‌ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿರುವುದು ಇದೇ ಮೊದಲಾಗಿದೆ.

ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ರಾಕಿಂಗ್‌ ಸ್ಟಾರ್‌ ಯಶ್‌, ಕೇನ್ಸ್‌ ನಲ್ಲಿ ಅತ್ಯುತ್ತಮ ಕಿರುಚಿತ್ರಕ್ಕಾಗಿ ಲಾ ಸಿನೆಫ್‌ ಪ್ರಶಸ್ತಿ ಗೆದ್ದಿದಕ್ಕಾಗಿ ಚಿದಾನಂದ್‌ ಎಸ್‌. ನಾಯಕ್‌ ಹಾಗೂ ಸನ್‌ ಫ್ಲವರ್ಸ್‌ ವೇರ್‌ ದಿ ಫಸ್ಟ್‌ ಒನ್ಸ್‌ ಟು ನೋ! ಗೆ ಅನಂತನಾಂತ ವಂದನೆಗಳು. ನೀವು ಕನ್ನಡ ಜಾನಪದವನ್ನು ಜಾಗತಿಕ ಹಂತಕ್ಕೆ ಕೊಂಡೊಯ್ಯುವುದನ್ನು ಮತ್ತು ಭಾರತೀಯ ಚಿತ್ರರಂಗಕ್ಕೆ ಹೊಸ ಮಾನದಂಡಗಳನ್ನು ಹೊದಿಸುವುದನ್ನು ನೋಡಲು ಬಯಸುತ್ತೇನೆ ಎಂದು ರಾಕಿ ಭಾಯ್‌ ಟ್ವೀಟ್‌ ಮಾಡಿ, ಶುಭ ಕೋರಿದ್ದಾರೆ.

ಲಾ ಸಿನೆಫ್‌ ವಿಭಾಗವು ಹೊಸ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರಪಂಚದಾದ್ಯಂತ ಚಲನಚಿತ್ರ ಶಾಲೆಗಳಿಂದ ಚಿತ್ರಗಳನ್ನು ಗುರುತಿಸುತ್ತದೆ. ಈ ವರ್ಷ ಒಟ್ಟು 18 ಕಿರುಚಿತ್ರಗಳು ಆಯ್ಕೆಯಾಗಿದ್ದು, ಅದರಲ್ಲಿ 14 ಲೈವ್‌ ಅಕ್ಷನ್‌ ಮತ್ತು 4 ಆನಿಮೇಷನ್‌ ಚಿತ್ರಗಳು ಆಯ್ಕೆಯಾಗಿವೆ. ಈ ಸ್ಪರ್ಧೆಯಲ್ಲಿ 2263 ಚಲನಚಿತ್ರಗಳು ಭಾಗವಹಿಸಿದ್ದವು.

ಸನ್‌ ಫ್ಲವರ್ಸ್‌ ವರ್‌ ದ ಫಸ್ಟ್‌ ಒನ್ಸ್‌ ಟು ನೋ! ಕಥೆಯು ವಯಸ್ಸಾದ ಅಜ್ಜಿಯು ಹುಂಜವನ್ನು ಕದಿಯುವ ಕಥೆಯಾಗಿದ್ದು, ಇದು ಸಮುದಾಯವನು ಅಸ್ತವ್ಯಸ್ಥಗೊಳಿಸುತ್ತದೆ. ಹುಂಜವನ್ನು ಮರಳಿ ಪಡೆಯಲು ಭವಿಷ್ಯವಾಣಿಯ ಮೊರೆ ಹೋಗಿ, ಅಲ್ಲಿಂದ ಅಜ್ಜಿಯ ಕುಟುಂಬವನ್ನು ಗಡಿಪಾರು ಮಾಡುತ್ತದೆ. ಇದು ಕಥೆಯ ತಿರುಳಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

4 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

4 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

4 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

4 hours ago

ಒಬ್ಬ ಹುಡುಗ ಯಾವ ಕಾರಣಕ್ಕೆ ʼಗೇʼ ಆಗುತ್ತಾನೆ?

ವಸುಧೇಂದ್ರ ಹುಡುಗನೊಬ್ಬನಿಗೆ ಮತ್ತೊಬ್ಬ ಹುಡುಗನ ಮೇಲೆ ಅದು ಹೇಗೆ ಆಕರ್ಷಣೆ ಮೂಡುತ್ತದೆ? ಅದು ಅವನ ಆಯ್ಕೆಯೆ? ಕಲಿತ ದುಶ್ಚಟವೆ? ವಿಷಮ…

5 hours ago