ಮನರಂಜನೆ

ಬೆಂಗಳೂರು ಭೂಗತ ಜಗತ್ತಿನ ಸುತ್ತ ‘ಕ್ಯಾಪಿಟಲ್‍ ಸಿಟಿ’…

ಈ ಹಿಂದೆ ‘ಜಮಾನ’ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿದ್ದ ರಾಜೀವ್‍ ರೆಡ್ಡಿ, ಇದೀಗ ಒಂದು ದೊಡ್ಡ ಗ್ಯಾಪ್‍ನೊಂದಿಗೆ ವಾಪಸ್ಸಾಗಿದ್ದಾರೆ. ಕೋವಿಡ್‍ ಮುಗಿದ ಮೇಲೆ ಅವರ ಅಭಿನಯದಲ್ಲಿ ‘ಕ್ಯಾಪಿಟಲ್‍ ಸಿಟಿ’ ಎಂಬ ಚಿತ್ರ ಪ್ರಾರಂಭವಾಗಿತ್ತು. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಜುಲೈ.04ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

20ಕ್ಕೂ ಹೆಚ್ಚು ಸಮಾನ ಮನಸ್ಕರು ಆರಂಭಿಸಿರುವ ಇನಿಫಿನಿಟಿ ಕ್ರಿಯೇಷನ್ಸ್ ಸಂಸ್ಥೆ ಲಾಂಛನದಲ್ಲಿ ನಿರ್ಮಾಣವಾಗಿರುವ, ‘ಅಪ್ಪು‌ ಪಪ್ಪು’, ‘ಮಸ್ತ್ ಮಜಾ ಮಾಡಿ’, ‘ನಂದ’ ಮುಂತಾದ ಚಿತ್ರಗಳನ್ನು ನಿರ್ದೇಶಿಸಿರುವ ಆರ್.ಅನಂತರಾಜು ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರ ಬಿಡುಗಡೆಯಾಗುತ್ತಿರುವ ಖುಷಿಯನ್ನು ಇತ್ತೀಚೆಗೆ ಚಿತ್ರತಂಡ ಹಂಚಿಕೊಂಡಿತು.

ಮೊದಲು ಮಾತನಾಡಿದ ಖ್ಯಾತ ನಟ ರವಿಶಂಕರ್, ‘ಈ ಚಿತ್ರದ ಜರ್ನಿ ಚೆನ್ನಾಗಿತ್ತು. ಚಿತ್ರದ ತುಣುಕುಗಳನ್ನು ನೋಡಿದಾಗ ನಾಯಕ ರಾಜೀವ್ ರೆಡ್ಡಿ ಅವರ ಅಭಿನಯ ಬಹಳ ಇಷ್ಟವಾಯಿತು. ನನ್ನದು ಈ ಚಿತ್ರದಲ್ಲಿ ವಿಭಿನ್ನ ಪಾತ್ರ. ಜುಲೈ.4ರಂದು ಬಿಡುಗಡೆಯಾಗುತ್ತಿರುವ ಈ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.

‘ಕ್ಯಾಪಿಟಲ್‍ ಸಿಟಿ’ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ಅನಂತರಾಜು, ‘ಇದು ನನ್ನ ನಿರ್ದೇಶನದ 11ನೇ ಚಿತ್ರ. ರವಿಶಂಕರ್ ಅವರು ಬಹಳ ವರ್ಷಗಳ ಪರಿಚಯ. ಆದರೆ, ಅವರ ಜೊತೆಗೆ ಕೆಲಸ ಮಾಡಿರುವುದು ಇದೇ ಮೊದಲು. ಇದೊಂದು ಬೆಂಗಳೂರು ಭೂಗತ ಜಗತ್ತಿನ ಸುತ್ತ ನಡೆಯುವ ಕಥೆ. 90ರ ಕಾಲಘಟ್ಟದ ಕಥೆಯೂ ಹೌದು. ತೊಂದರೆಗೀಡಾದ ನಾಯಕ ಹೇಗೆ ತನ್ನ ಕಷ್ಟವನ್ನು ನಿಭಾಯಿಸಿಕೊಂಡು ಬರುತ್ತಾನೆ ಎನ್ನುವುದೇ ಪ್ರಮುಖ ಕಥಾಹಂದರ. ಆಕ್ಷನ್ ಚಿತ್ರ ಎನಿಸಿದರೂ, ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ.

ಇದೊಂದು ರಿವೆಂಜ್ ಸ್ಟೋರಿ ಎಂದ ನಾಯಕ ರಾಜೀವ್‍ ರೆಡ್ಡಿ, ‘ನಿಮಗೆ ತೊಂದರೆಯಾದಾಗ ನಿಮ್ಮನ್ನು ನೀವು ಹೇಗೆ ಕಾಪಾಡಿಕೊಳ್ಳುತ್ತೀರಾ ಎಂಬುದೇ ಪ್ರಮುಖ ಕಥಾಹಂದರ.‌ ರವಿಶಂಕರ್, ಸುಮನ್ ಮುಂತಾದ ಹಿರಿಯ ಕಲಾವಿದರೊಂದಿಗೆ ಅಭಿನಯಿಸಿದ್ದು ಬಹಳ ಖುಷಿಯಾಗಿದೆ’ ಎಂದರು.

‘ಕ್ಯಾಪಿಟಲ್‍ ಸಿಟಿ’ ಚಿತ್ರದಲ್ಲಿ ರಾಜೀವ್ ರೆಡ್ಡಿ, ಪ್ರೇರಣ, ಸುಮನ್, ರವಿಶಂಕರ್, ಶರತ್ ಲೋಹಿತಾಶ್ವ, ಕೆ.ಎಸ್.ಶ್ರೀಧರ್ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ನಾಗು ಸಂಗೀತ ಹಾಗೂ ಪ್ರದೀಪ್‍ ಅವರ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

3 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

3 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

3 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

4 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

4 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

5 hours ago