ಮನರಂಜನೆ

ಬೆಂಗಳೂರು ಭೂಗತ ಜಗತ್ತಿನ ಸುತ್ತ ‘ಕ್ಯಾಪಿಟಲ್‍ ಸಿಟಿ’…

ಈ ಹಿಂದೆ ‘ಜಮಾನ’ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿದ್ದ ರಾಜೀವ್‍ ರೆಡ್ಡಿ, ಇದೀಗ ಒಂದು ದೊಡ್ಡ ಗ್ಯಾಪ್‍ನೊಂದಿಗೆ ವಾಪಸ್ಸಾಗಿದ್ದಾರೆ. ಕೋವಿಡ್‍ ಮುಗಿದ ಮೇಲೆ ಅವರ ಅಭಿನಯದಲ್ಲಿ ‘ಕ್ಯಾಪಿಟಲ್‍ ಸಿಟಿ’ ಎಂಬ ಚಿತ್ರ ಪ್ರಾರಂಭವಾಗಿತ್ತು. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಜುಲೈ.04ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

20ಕ್ಕೂ ಹೆಚ್ಚು ಸಮಾನ ಮನಸ್ಕರು ಆರಂಭಿಸಿರುವ ಇನಿಫಿನಿಟಿ ಕ್ರಿಯೇಷನ್ಸ್ ಸಂಸ್ಥೆ ಲಾಂಛನದಲ್ಲಿ ನಿರ್ಮಾಣವಾಗಿರುವ, ‘ಅಪ್ಪು‌ ಪಪ್ಪು’, ‘ಮಸ್ತ್ ಮಜಾ ಮಾಡಿ’, ‘ನಂದ’ ಮುಂತಾದ ಚಿತ್ರಗಳನ್ನು ನಿರ್ದೇಶಿಸಿರುವ ಆರ್.ಅನಂತರಾಜು ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರ ಬಿಡುಗಡೆಯಾಗುತ್ತಿರುವ ಖುಷಿಯನ್ನು ಇತ್ತೀಚೆಗೆ ಚಿತ್ರತಂಡ ಹಂಚಿಕೊಂಡಿತು.

ಮೊದಲು ಮಾತನಾಡಿದ ಖ್ಯಾತ ನಟ ರವಿಶಂಕರ್, ‘ಈ ಚಿತ್ರದ ಜರ್ನಿ ಚೆನ್ನಾಗಿತ್ತು. ಚಿತ್ರದ ತುಣುಕುಗಳನ್ನು ನೋಡಿದಾಗ ನಾಯಕ ರಾಜೀವ್ ರೆಡ್ಡಿ ಅವರ ಅಭಿನಯ ಬಹಳ ಇಷ್ಟವಾಯಿತು. ನನ್ನದು ಈ ಚಿತ್ರದಲ್ಲಿ ವಿಭಿನ್ನ ಪಾತ್ರ. ಜುಲೈ.4ರಂದು ಬಿಡುಗಡೆಯಾಗುತ್ತಿರುವ ಈ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.

‘ಕ್ಯಾಪಿಟಲ್‍ ಸಿಟಿ’ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ಅನಂತರಾಜು, ‘ಇದು ನನ್ನ ನಿರ್ದೇಶನದ 11ನೇ ಚಿತ್ರ. ರವಿಶಂಕರ್ ಅವರು ಬಹಳ ವರ್ಷಗಳ ಪರಿಚಯ. ಆದರೆ, ಅವರ ಜೊತೆಗೆ ಕೆಲಸ ಮಾಡಿರುವುದು ಇದೇ ಮೊದಲು. ಇದೊಂದು ಬೆಂಗಳೂರು ಭೂಗತ ಜಗತ್ತಿನ ಸುತ್ತ ನಡೆಯುವ ಕಥೆ. 90ರ ಕಾಲಘಟ್ಟದ ಕಥೆಯೂ ಹೌದು. ತೊಂದರೆಗೀಡಾದ ನಾಯಕ ಹೇಗೆ ತನ್ನ ಕಷ್ಟವನ್ನು ನಿಭಾಯಿಸಿಕೊಂಡು ಬರುತ್ತಾನೆ ಎನ್ನುವುದೇ ಪ್ರಮುಖ ಕಥಾಹಂದರ. ಆಕ್ಷನ್ ಚಿತ್ರ ಎನಿಸಿದರೂ, ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ.

ಇದೊಂದು ರಿವೆಂಜ್ ಸ್ಟೋರಿ ಎಂದ ನಾಯಕ ರಾಜೀವ್‍ ರೆಡ್ಡಿ, ‘ನಿಮಗೆ ತೊಂದರೆಯಾದಾಗ ನಿಮ್ಮನ್ನು ನೀವು ಹೇಗೆ ಕಾಪಾಡಿಕೊಳ್ಳುತ್ತೀರಾ ಎಂಬುದೇ ಪ್ರಮುಖ ಕಥಾಹಂದರ.‌ ರವಿಶಂಕರ್, ಸುಮನ್ ಮುಂತಾದ ಹಿರಿಯ ಕಲಾವಿದರೊಂದಿಗೆ ಅಭಿನಯಿಸಿದ್ದು ಬಹಳ ಖುಷಿಯಾಗಿದೆ’ ಎಂದರು.

‘ಕ್ಯಾಪಿಟಲ್‍ ಸಿಟಿ’ ಚಿತ್ರದಲ್ಲಿ ರಾಜೀವ್ ರೆಡ್ಡಿ, ಪ್ರೇರಣ, ಸುಮನ್, ರವಿಶಂಕರ್, ಶರತ್ ಲೋಹಿತಾಶ್ವ, ಕೆ.ಎಸ್.ಶ್ರೀಧರ್ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ನಾಗು ಸಂಗೀತ ಹಾಗೂ ಪ್ರದೀಪ್‍ ಅವರ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಮುಸ್ಲಿಂ ಸಮುದಾಯದ ಜಹಾನ ಈಗ ವೈದ್ಯೆ!

ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ   ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…

7 hours ago

ಚೇತನ್ ಅಹಿಂಸಾ ಗಡಿಪಾರಿಗೆ ಆಗ್ರಹ

ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…

11 hours ago

ಕೊಡಗು | ಗುಂಡು ಹೊಡೆದುಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…

11 hours ago

ಬಿಜೆಪಿಗೆ ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…

11 hours ago

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…

12 hours ago

ಜನಗಣತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ ಅತ್ಯಗತ್ಯ: ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…

12 hours ago