ಆಂಧ್ರಪ್ರದೇಶ: ಇಂದು (ಮೇ.13) ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ನಡೆಯುತ್ತಿದೆ. 10 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಗೆ ಇಂದು ಮತದಾನ ನಡೆಯಯುತ್ತಿದೆ. ಒಟ್ಟು 96 ಕೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಇಂದು ಲೋಕಸಭಾ ಚುನಾವಣೆ ಜತೆಗೆ ಆಂಧ್ರಪ್ರದೇಶದ ವಿಧಾನ ಸಭಾ ಚುನಾವಣೆಗೂ ಮತದಾನ ನಡೆಯುತ್ತಿದ್ದು, ಟಾಲಿವುಟ್ ಸ್ಟಾರ್ ಅಲ್ಲು ಅರ್ಜುನ್ ಎಲ್ಲರು ಬಂದು ಮತದಾನ ಮಾಡಿ ಇದು ನಿಮ್ಮ ಮುಂದಿನ ಐದು ವರ್ಷಗಳ ನಿರ್ಣಾಯಕ ದಿನ ಎಂದು ಹೇಳಿದ್ದಾರೆ.
ಅಲ್ಲು ಅರ್ಜುನ್ ಇಂದು ಮತದಾನ ಮಾಡಿ ಬಳಿಕ ತಮ್ಮ ಅಭಿಮಾನಿಗಳಿಗೆ ಮತದಾನ ಮಾಡುವಂತೆ ಮನವಿ ಮಾಡಿದ್ದಾರೆ. ಇಂದು ಬಿಸಿಲಿನ ಬೇಗೆ ಜಾಸ್ತಿಯಿದೆ. ಸ್ವಲ್ಪ ಸಹಿಸಿಕೊಂಡು ಮತದಾನ ಮಾಡಿ, ಇದು ನಿಜಕ್ಕೂ ನಿಮಗೆ ಜವಾಬ್ದಾರಿಯುತ ದಿನವಾಗಿದೆ. ಸ್ವಲ್ಪ ಹೆಚ್ಚಿನ ಶ್ರಮ ವಹಿಸಿ ಮತದಾನ ಮಾಡುವ ಮೂಲಕ ತಮ್ಮ ಮುಂದಿನ ಐದು ವರ್ಷಗಳ ಉತ್ತಮ ಆಡಳಿತಕ್ಕೆ ಬುನಾದಿ ಹಾಕಿ ಎಂದು ಹೇಳಿದ್ದಾರೆ.
ಇನ್ನು ದೇಶಾದ್ಯಂತ ಆಂಧ್ರಪ್ರದೇಶದ ಎಲ್ಲಾ 25 ಕ್ಷೇತ್ರಗಳು, ತೆಲಂಗಾಣದ 17 ಕ್ಷೇತ್ರಗಳು, ಉತ್ತರ ಪ್ರದೇಶ 13, ಮಹಾರಾಷ್ಟ್ರ 11, ಪಶ್ಚಿಮ ಬಂಗಾಳ 8, ಮಧ್ಯಪ್ರದೇ 8, ಬಿಹಾರ 5, ಜಾರ್ಖಂಡ್ ಹಾಗೂ ಒಡಿಸ್ಸಾದ 4 ಕ್ಷೇತ್ರ ಮತ್ತು ಜಮ್ಮು ಕಾಶ್ಮೀರಾದ 1 ಕ್ಷೇತ್ರಗಳಿಗ ಮತದಾನ ನಡೆಯುತ್ತಿದೆ.
ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…
ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…
ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್ಐಸಿ ಫಿಲೇಚರ್ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…
ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…