ಆಂಧ್ರಪ್ರದೇಶ: ಇಂದು (ಮೇ.13) ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ನಡೆಯುತ್ತಿದೆ. 10 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಗೆ ಇಂದು ಮತದಾನ ನಡೆಯಯುತ್ತಿದೆ. ಒಟ್ಟು 96 ಕೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಇಂದು ಲೋಕಸಭಾ ಚುನಾವಣೆ ಜತೆಗೆ ಆಂಧ್ರಪ್ರದೇಶದ ವಿಧಾನ ಸಭಾ ಚುನಾವಣೆಗೂ ಮತದಾನ ನಡೆಯುತ್ತಿದ್ದು, ಟಾಲಿವುಟ್ ಸ್ಟಾರ್ ಅಲ್ಲು ಅರ್ಜುನ್ ಎಲ್ಲರು ಬಂದು ಮತದಾನ ಮಾಡಿ ಇದು ನಿಮ್ಮ ಮುಂದಿನ ಐದು ವರ್ಷಗಳ ನಿರ್ಣಾಯಕ ದಿನ ಎಂದು ಹೇಳಿದ್ದಾರೆ.
ಅಲ್ಲು ಅರ್ಜುನ್ ಇಂದು ಮತದಾನ ಮಾಡಿ ಬಳಿಕ ತಮ್ಮ ಅಭಿಮಾನಿಗಳಿಗೆ ಮತದಾನ ಮಾಡುವಂತೆ ಮನವಿ ಮಾಡಿದ್ದಾರೆ. ಇಂದು ಬಿಸಿಲಿನ ಬೇಗೆ ಜಾಸ್ತಿಯಿದೆ. ಸ್ವಲ್ಪ ಸಹಿಸಿಕೊಂಡು ಮತದಾನ ಮಾಡಿ, ಇದು ನಿಜಕ್ಕೂ ನಿಮಗೆ ಜವಾಬ್ದಾರಿಯುತ ದಿನವಾಗಿದೆ. ಸ್ವಲ್ಪ ಹೆಚ್ಚಿನ ಶ್ರಮ ವಹಿಸಿ ಮತದಾನ ಮಾಡುವ ಮೂಲಕ ತಮ್ಮ ಮುಂದಿನ ಐದು ವರ್ಷಗಳ ಉತ್ತಮ ಆಡಳಿತಕ್ಕೆ ಬುನಾದಿ ಹಾಕಿ ಎಂದು ಹೇಳಿದ್ದಾರೆ.
ಇನ್ನು ದೇಶಾದ್ಯಂತ ಆಂಧ್ರಪ್ರದೇಶದ ಎಲ್ಲಾ 25 ಕ್ಷೇತ್ರಗಳು, ತೆಲಂಗಾಣದ 17 ಕ್ಷೇತ್ರಗಳು, ಉತ್ತರ ಪ್ರದೇಶ 13, ಮಹಾರಾಷ್ಟ್ರ 11, ಪಶ್ಚಿಮ ಬಂಗಾಳ 8, ಮಧ್ಯಪ್ರದೇ 8, ಬಿಹಾರ 5, ಜಾರ್ಖಂಡ್ ಹಾಗೂ ಒಡಿಸ್ಸಾದ 4 ಕ್ಷೇತ್ರ ಮತ್ತು ಜಮ್ಮು ಕಾಶ್ಮೀರಾದ 1 ಕ್ಷೇತ್ರಗಳಿಗ ಮತದಾನ ನಡೆಯುತ್ತಿದೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…