ಮನರಂಜನೆ

ಸೆಲೆಬ್ರಿಟಿ ಕ್ರಿಕೆಟ್‌ ಲೀಗ್‌: ಕರ್ನಾಟಕ ಬುಲ್ಡೋಜರ್ಸ್‌ ತಂಡ ಪ್ರಕಟ

ಬೆಂಗಳೂರು: ಫೆಬ್ರವರಿ 8ರಂದು ಆರಂಭವಾಗಲಿರುವ 11ನೇ ವರ್ಷದ ಸೆಲೆಬ್ರಿಟಿ ಕ್ರಿಕೆಟ್‌ ಲೀಗ್‌(CCL) ಟೂರ್ನಿಗೆ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ.

ಈ ಬಾರಿಯೂ ತಂಡವನ್ನು ಕಿಚ್ಚ ಸುದೀಪ್‌ ಮುನ್ನಡೆಸಲಿದ್ದು, ಉದ್ಯಮಿ ಆಶೋಕ್‌ ಖೇಣಿ ತಂಡದ ಮಾಲೀಕರಾಗಿದ್ದಾರೆ. ಕಳೆದ ಬಾರಿ ಟೂರ್ನಿಗೆ ತಪ್ಪಿಸಿಕೊಂಡಿದ್ದ ಗಣೇಶ್‌ ಈ ಬಾರಿ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನಲ್ಲಿ ಫೆ.8ರಂದು ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ರೈನ್ಹೋಸ್‌ ಮತ್ತು ಬೆಂಗಾಲ್‌ ಟೈಗರ್ಸ್‌ ಮುಖಾಮುಖಿಯಾಗಲಿದ್ದು, ಅದೇ ದಿನ ನಡೆಯಲಿರುವ ಎರಡನೇ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್‌ ಮತ್ತು ತೆಲುಗು ವಾರಿಯರ್ಸ್‌ ಸೆಣಸಾಡಲಿವೆ.

ಲೀಗ್‌ನಲ್ಲಿ ಒಟ್ಟು ಏಳು ತಂಡಗಳು ಭಾಗವಹಿಸಲಿವೆ. ಅವುಗಳೆಂದರೆ ಚೆನ್ನೈ ರೈನ್ಹೋಸ್‌, ಬೆಂಗಾಲ್‌ ಟೈಗರ್ಸ್‌, ಪಂಜಾಬ್‌ ಡಿ ಶೇರ್‌, ಮುಂಬೈ ಹೀರೋಸ್‌, ಭೋಜ್‌ಪುರಿ ದಬಾಂಗ್ಸ್‌, ತೆಲುಗು ವಾರಿಯರ್ಸ್‌, ಕರ್ನಾಟಕ ಬುಲ್ಡೋಜರ್ಸ್‌.

ಕರ್ನಾಟಕ ಬುಲ್ಡೋಜರ್ಸ್‌ ತಂಡ: ಸುದೀಪ್‌, ಗಣೇಶ್‌, ಕಾರ್ತಿಕ್‌ ಜಯರಾಮ್‌, ಡಾರ್ಲಿಂಗ್‌ ಕೃಷ್ಣ, ಸುನಿಲ್‌ ರಾವ್‌, ರಾಜೀವ್‌ ಹನು, ಚಂದನ್‌ ಕುಮಾರ್‌, ಪ್ರತಾಪ್‌ ನಾರಾಯಣ್‌, ನಿರೂಪ್‌ ಭಂಡಾರಿ, ಅನೂಒ ಭಂಡಾರಿ, ಕರಣ್‌ ಆರ್ಯನ್‌, ಮಂಜುನಾಥ ಗೌಡ, ಸಾಗರ್‌ ಗೌಡ, ಅಲಕಾನಂದ, ತ್ರಿವಿಕ್ರಮ್‌.

ಆಂದೋಲನ ಡೆಸ್ಕ್

Recent Posts

ನಾಳೆ ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಟಾಕ್ಸಿಕ್‌ ಚಿತ್ರದ 2ನೇ ಟೀಸರ್‌ ರಿಲೀಸ್‌

ಬೆಂಗಳೂರು: ಕೆಜಿಎಫ್‌-2 ಯಶಸ್ಸಿನ ನಂತರ ಇಡೀ ದೇಶದ ಕಾತುರದಿಂದ ಕಾಯುತ್ತಿರುವ ಸಿನಿಮಾ ಎಂದರೆ ಅದು ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ…

1 hour ago

ದಲಿತರು ಯಾಕೆ ಮುಖ್ಯಮಂತ್ರಿಯಾಗಬಾರದು?: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಸ್ತಾಂತರ ಚರ್ಚೆ ನಡುವೆಯೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮತ್ತೆ ದಲಿತ ಸಿಎಂ ವಿಚಾರ ಪ್ರಸ್ತಾಪಿಸಿದ್ದಾರೆ.…

2 hours ago

ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತ: ಆಸ್ಪತ್ರೆಗೆ ದಾಖಲು

ರಾಯಚೂರು: ರಾಯಚೂರು ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.…

2 hours ago

ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಗ್ರೀನ್‌ಸಿಗ್ನಲ್:‌ ಅನ್ನದಾತರ ಆಕ್ರೋಶ

ಚಾಮರಾಜನಗರ: ಕಳೆದ ಮೂರು ತಿಂಗಳಿನಿಂದಲೂ ಬಂದ್‌ ಆಗಿದ್ದ ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಆರಂಭಕ್ಕೆ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ.…

2 hours ago

ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದ ಸಾವು

ಹಾಸನ: ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಹನುಮಂತಪುರ ಬಳಿ ನಡೆದಿದೆ. 27 ವರ್ಷ…

2 hours ago

ರಾಜ್ಯದಲ್ಲಿ ಹೆಚ್ಚಿದ ಗರಿಷ್ಠ ತಾಪಮಾನ: ಚರ್ಮದ ಬಗ್ಗೆ ಇರಲಿ ಎಚ್ಚರ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಝಳ ಆರಂಭವಾಗಿದೆ. ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ಕರಾವಳಿ…

3 hours ago