ಬೆಂಗಳೂರು: ಫೆಬ್ರವರಿ 8ರಂದು ಆರಂಭವಾಗಲಿರುವ 11ನೇ ವರ್ಷದ ಸೆಲೆಬ್ರಿಟಿ ಕ್ರಿಕೆಟ್ ಲೀಗ್(CCL) ಟೂರ್ನಿಗೆ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ.
ಈ ಬಾರಿಯೂ ತಂಡವನ್ನು ಕಿಚ್ಚ ಸುದೀಪ್ ಮುನ್ನಡೆಸಲಿದ್ದು, ಉದ್ಯಮಿ ಆಶೋಕ್ ಖೇಣಿ ತಂಡದ ಮಾಲೀಕರಾಗಿದ್ದಾರೆ. ಕಳೆದ ಬಾರಿ ಟೂರ್ನಿಗೆ ತಪ್ಪಿಸಿಕೊಂಡಿದ್ದ ಗಣೇಶ್ ಈ ಬಾರಿ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನಲ್ಲಿ ಫೆ.8ರಂದು ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ರೈನ್ಹೋಸ್ ಮತ್ತು ಬೆಂಗಾಲ್ ಟೈಗರ್ಸ್ ಮುಖಾಮುಖಿಯಾಗಲಿದ್ದು, ಅದೇ ದಿನ ನಡೆಯಲಿರುವ ಎರಡನೇ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ಮತ್ತು ತೆಲುಗು ವಾರಿಯರ್ಸ್ ಸೆಣಸಾಡಲಿವೆ.
ಲೀಗ್ನಲ್ಲಿ ಒಟ್ಟು ಏಳು ತಂಡಗಳು ಭಾಗವಹಿಸಲಿವೆ. ಅವುಗಳೆಂದರೆ ಚೆನ್ನೈ ರೈನ್ಹೋಸ್, ಬೆಂಗಾಲ್ ಟೈಗರ್ಸ್, ಪಂಜಾಬ್ ಡಿ ಶೇರ್, ಮುಂಬೈ ಹೀರೋಸ್, ಭೋಜ್ಪುರಿ ದಬಾಂಗ್ಸ್, ತೆಲುಗು ವಾರಿಯರ್ಸ್, ಕರ್ನಾಟಕ ಬುಲ್ಡೋಜರ್ಸ್.
ಕರ್ನಾಟಕ ಬುಲ್ಡೋಜರ್ಸ್ ತಂಡ: ಸುದೀಪ್, ಗಣೇಶ್, ಕಾರ್ತಿಕ್ ಜಯರಾಮ್, ಡಾರ್ಲಿಂಗ್ ಕೃಷ್ಣ, ಸುನಿಲ್ ರಾವ್, ರಾಜೀವ್ ಹನು, ಚಂದನ್ ಕುಮಾರ್, ಪ್ರತಾಪ್ ನಾರಾಯಣ್, ನಿರೂಪ್ ಭಂಡಾರಿ, ಅನೂಒ ಭಂಡಾರಿ, ಕರಣ್ ಆರ್ಯನ್, ಮಂಜುನಾಥ ಗೌಡ, ಸಾಗರ್ ಗೌಡ, ಅಲಕಾನಂದ, ತ್ರಿವಿಕ್ರಮ್.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…