ಮನರಂಜನೆ

ಸಿದ್ಧಾರ್ಥ್‍ಗೆ ಚೈತ್ರಾ ಆಚಾರ್ ನಾಯಕಿ; ತಮಿಳಿನಲ್ಲಿ ಎರಡನೇ ಚಿತ್ರ

ಕನ್ನಡದ ಚೈತ್ರಾ ಆಚಾರ್, ತಮಿಳಿನ ಚಿತ್ರವೊಂದರಲ್ಲಿ ಶಶಿಕುಮಾರ್ ಗೆ  ನಾಯಕಿಯಾಗಿ ನಟಿಸುತ್ತಿರುವ ಸುದ್ದಿಯೊಂದು ಇತ್ತೀಚೆಗಷ್ಟೇ ಬಂದಿತ್ತು. ಆ ಚಿತ್ರದ ಕೆಲಸಗಳೇ ಇನ್ನು ಮುಗಿದಿಲ್ಲ, ಚೈತ್ರಾ ಇನ್ನೊಂದು ಹೊಸ ತಮಿಳು ಚಿತ್ರಕ್ಕೆ ನಾಯಕಿಯಾಗಿರುವ ಸುದ್ದಿ ಬಂದಿದೆ.

ಅಂದಹಾಗೆ, ಚೈತ್ರಾ ಆಚಾರ್ ಈ ಬಾರಿ ನಾಯಕಿಯಾಗುತ್ತಿರುವುದು ಸಿದ್ಧಾರ್ಥ್ ಗೆ. ಇತ್ತೀಚೆಗಷ್ಟೇ ಬಿಡುಗಡೆಯಾ ‘ಇಂಡಿಯನ್‍ 2’ ಚಿತ್ರದಲ್ಲಿ ಸಿದ್ಧಾರ್ಥ್ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈಗ ಶ್ರೀಗಣೇಶ್‍ ಅಭಿನಯದ ಹೊಸ ಚಿತ್ರವೊಂದರಲ್ಲಿ ಅವರು ನಟಿಸುತ್ತಿದ್ದು, ಈ ಚಿತ್ರಕ್ಕೆ ಚೈತ್ರಾ ನಾಯಕಿಯಾಗಿ ಆಯ್ಕೆಯಾಗಿದ್ದಾರಂತೆ.

ಇದು ಸಿದ್ಧಾರ್ಥ್ ಅಭಿನಯದ 40ನೇ ಚಿತ್ರವಾಗಿರುವುದರಿಂದ, ಚಿತ್ರಕ್ಕೆ ಸದ್ಯಕ್ಕೆ ‘ಸಿದ್ಧಾರ್ಥ್ 40’ ಎಂಬ ಹೆಸರಿಡಲಾಗಿದೆ. ಚಿತ್ರದಲ್ಲಿ ಶರತ್‍ ಕುಮಾರ್ ಮತ್ತು ದೇವಯಾನಿ ಸಹ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಇಂದಿನಿಂದ ಚಿತ್ರೀಕರಣ ಪ್ರಾರಂಭವಾಗಲಿದೆ.

ಹಾಗೆ ನೋಡಿದರೆ, ಇದು ಚೈತ್ರಾ ಒಪ್ಪಿಕೊಂಡ ಮೊದಲ ಚಿತ್ರವಂತೆ. ಆದರೆ, ಸ್ವಲ್ಪ ತಡವಾಗಿದ್ದರಿಂದ ಮೊದಲು ಶಶಿಕುಮಾರ್ ಅಭಿನಯದ ಚಿತ್ರ ಪ್ರಾರಂಭವಾಗಿ, ಇದು ಎರಡನೆಯ ಚಿತ್ರವಾಗಿ ಪ್ರಾರಂಭವಾಗುತ್ತಿದೆ. ಮೂರು ತಿಂಗಳ ಹಿಂದೆಯೇ ಈ ಚಿತ್ರವನ್ನು ಒಪ್ಪಿದ್ದು, ಈಗ ಚಿತ್ರ ಶುರುವಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ.

ಇದಲ್ಲದೆ, ಶಿವರಾಜಕುಮಾರ್ ಮತ್ತು ಧನಂಜಯ್‍ ಅಭಿನಯದ ‘ಉತ್ತರಕಾಂಡ’, ಚಿತ್ರದಲ್ಲೂ ಚೈತ್ರಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅದಿನ್ನಷ್ಟೇ ಬಿಡುಗಡೆಯಾಗಬೇಕಿದೆ. ಇನ್ನು, ‘ಹ್ಯಾಪಿ ಬರ್ಥ್‍ಡೇ ಟು ಮಿ’ ಎಂಬ ಇನ್ನೊಂದು ಚಿತ್ರದಲ್ಲೂ ಅವರು ನಟಿಸಿದ್ದು, ಅದು ಇತ್ತೀಚೆಗೆ ಓಟಿಟಿಯಲ್ಲಿ ನೇರವಾಗಿ ಬಿಡುಗಡೆ ಆಗಿದೆ.

ಭೂಮಿಕಾ

Recent Posts

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರಿದ ಟೇಲ್ಸ್ ಬೈ ಪರಿ ಕೃತಿಯ ಪುಟ್ಟ ಲೇಖಕಿ ಪರಿಣಿತಾ

ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…

2 hours ago

ಅಕ್ರಮ ನಿವಾಸಿಗಳಿಗೆ ಮನೆ: ಸರ್ಕಾರದ ವಿರುದ್ಧ ವಿ.ಸೋಮಣ್ಣ ಆಕ್ರೋಶ

ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…

2 hours ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ಕಾಡು ಬೆಕ್ಕು ಪತ್ತೆ

ಗುಂಡ್ಲುಪೇಟೆ: ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಕಾಣಿಸಿಕೊಂಡಿ ಕಾಡುಬೆಕ್ಕನ್ನು ಅರಣ್ಯಾಧಿಕಾರಿಗಳು ಸುರಕ್ಷಿತವಾಗಿ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ತಾಲ್ಲೂಕಿನ ಬರಗಿ ಗ್ರಾಮದಲ್ಲಿ…

2 hours ago

ಗುಂಡ್ಲುಪೇಟೆ: ಚಿರತೆ ದಾಳಿಗೆ ಮೇಕೆ ಹಾಗೂ ಕರು ಬಲಿ

ಗುಂಡ್ಲುಪೇಟೆ: ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲ್ಲೂಕಿನ ಬೆಟ್ಟದಮಾದಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಂಕರ್‌ ಎಂಬುವವರು ತಮಗೆ ಸೇರಿದ…

2 hours ago

ಹೊಸ ವರ್ಷಾಚರಣೆ ನಡುವೆಯೇ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಹೊಸ ವರ್ಷಾಚರಣೆ ನಡುವೆಯೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

2 hours ago

ಚಿತ್ರದುರ್ಗ ಬಸ್‌ ದುರಂತ ಪ್ರಕರಣ: ಮತ್ತೋರ್ವ ಗಾಯಾಳು ಸಾವು

ಚಿತ್ರದುರ್ಗ: ಚಿತ್ರದುರ್ಗ ಬಸ್‌ ದುರಂತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಗಾಯಾಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 8ಕ್ಕೇ ಏರಿಕೆಯಾಗಿದೆ. ಮೃತರನ್ನು…

2 hours ago