ಮನರಂಜನೆ

ಸಿದ್ಧಾರ್ಥ್‍ಗೆ ಚೈತ್ರಾ ಆಚಾರ್ ನಾಯಕಿ; ತಮಿಳಿನಲ್ಲಿ ಎರಡನೇ ಚಿತ್ರ

ಕನ್ನಡದ ಚೈತ್ರಾ ಆಚಾರ್, ತಮಿಳಿನ ಚಿತ್ರವೊಂದರಲ್ಲಿ ಶಶಿಕುಮಾರ್ ಗೆ  ನಾಯಕಿಯಾಗಿ ನಟಿಸುತ್ತಿರುವ ಸುದ್ದಿಯೊಂದು ಇತ್ತೀಚೆಗಷ್ಟೇ ಬಂದಿತ್ತು. ಆ ಚಿತ್ರದ ಕೆಲಸಗಳೇ ಇನ್ನು ಮುಗಿದಿಲ್ಲ, ಚೈತ್ರಾ ಇನ್ನೊಂದು ಹೊಸ ತಮಿಳು ಚಿತ್ರಕ್ಕೆ ನಾಯಕಿಯಾಗಿರುವ ಸುದ್ದಿ ಬಂದಿದೆ.

ಅಂದಹಾಗೆ, ಚೈತ್ರಾ ಆಚಾರ್ ಈ ಬಾರಿ ನಾಯಕಿಯಾಗುತ್ತಿರುವುದು ಸಿದ್ಧಾರ್ಥ್ ಗೆ. ಇತ್ತೀಚೆಗಷ್ಟೇ ಬಿಡುಗಡೆಯಾ ‘ಇಂಡಿಯನ್‍ 2’ ಚಿತ್ರದಲ್ಲಿ ಸಿದ್ಧಾರ್ಥ್ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈಗ ಶ್ರೀಗಣೇಶ್‍ ಅಭಿನಯದ ಹೊಸ ಚಿತ್ರವೊಂದರಲ್ಲಿ ಅವರು ನಟಿಸುತ್ತಿದ್ದು, ಈ ಚಿತ್ರಕ್ಕೆ ಚೈತ್ರಾ ನಾಯಕಿಯಾಗಿ ಆಯ್ಕೆಯಾಗಿದ್ದಾರಂತೆ.

ಇದು ಸಿದ್ಧಾರ್ಥ್ ಅಭಿನಯದ 40ನೇ ಚಿತ್ರವಾಗಿರುವುದರಿಂದ, ಚಿತ್ರಕ್ಕೆ ಸದ್ಯಕ್ಕೆ ‘ಸಿದ್ಧಾರ್ಥ್ 40’ ಎಂಬ ಹೆಸರಿಡಲಾಗಿದೆ. ಚಿತ್ರದಲ್ಲಿ ಶರತ್‍ ಕುಮಾರ್ ಮತ್ತು ದೇವಯಾನಿ ಸಹ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಇಂದಿನಿಂದ ಚಿತ್ರೀಕರಣ ಪ್ರಾರಂಭವಾಗಲಿದೆ.

ಹಾಗೆ ನೋಡಿದರೆ, ಇದು ಚೈತ್ರಾ ಒಪ್ಪಿಕೊಂಡ ಮೊದಲ ಚಿತ್ರವಂತೆ. ಆದರೆ, ಸ್ವಲ್ಪ ತಡವಾಗಿದ್ದರಿಂದ ಮೊದಲು ಶಶಿಕುಮಾರ್ ಅಭಿನಯದ ಚಿತ್ರ ಪ್ರಾರಂಭವಾಗಿ, ಇದು ಎರಡನೆಯ ಚಿತ್ರವಾಗಿ ಪ್ರಾರಂಭವಾಗುತ್ತಿದೆ. ಮೂರು ತಿಂಗಳ ಹಿಂದೆಯೇ ಈ ಚಿತ್ರವನ್ನು ಒಪ್ಪಿದ್ದು, ಈಗ ಚಿತ್ರ ಶುರುವಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ.

ಇದಲ್ಲದೆ, ಶಿವರಾಜಕುಮಾರ್ ಮತ್ತು ಧನಂಜಯ್‍ ಅಭಿನಯದ ‘ಉತ್ತರಕಾಂಡ’, ಚಿತ್ರದಲ್ಲೂ ಚೈತ್ರಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅದಿನ್ನಷ್ಟೇ ಬಿಡುಗಡೆಯಾಗಬೇಕಿದೆ. ಇನ್ನು, ‘ಹ್ಯಾಪಿ ಬರ್ಥ್‍ಡೇ ಟು ಮಿ’ ಎಂಬ ಇನ್ನೊಂದು ಚಿತ್ರದಲ್ಲೂ ಅವರು ನಟಿಸಿದ್ದು, ಅದು ಇತ್ತೀಚೆಗೆ ಓಟಿಟಿಯಲ್ಲಿ ನೇರವಾಗಿ ಬಿಡುಗಡೆ ಆಗಿದೆ.

ಭೂಮಿಕಾ

Recent Posts

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

32 mins ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

1 hour ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

6 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

6 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

6 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

6 hours ago