ಕನ್ನಡದ ಚೈತ್ರಾ ಆಚಾರ್, ತಮಿಳಿನ ಚಿತ್ರವೊಂದರಲ್ಲಿ ಶಶಿಕುಮಾರ್ ಗೆ ನಾಯಕಿಯಾಗಿ ನಟಿಸುತ್ತಿರುವ ಸುದ್ದಿಯೊಂದು ಇತ್ತೀಚೆಗಷ್ಟೇ ಬಂದಿತ್ತು. ಆ ಚಿತ್ರದ ಕೆಲಸಗಳೇ ಇನ್ನು ಮುಗಿದಿಲ್ಲ, ಚೈತ್ರಾ ಇನ್ನೊಂದು ಹೊಸ ತಮಿಳು ಚಿತ್ರಕ್ಕೆ ನಾಯಕಿಯಾಗಿರುವ ಸುದ್ದಿ ಬಂದಿದೆ.
ಅಂದಹಾಗೆ, ಚೈತ್ರಾ ಆಚಾರ್ ಈ ಬಾರಿ ನಾಯಕಿಯಾಗುತ್ತಿರುವುದು ಸಿದ್ಧಾರ್ಥ್ ಗೆ. ಇತ್ತೀಚೆಗಷ್ಟೇ ಬಿಡುಗಡೆಯಾ ‘ಇಂಡಿಯನ್ 2’ ಚಿತ್ರದಲ್ಲಿ ಸಿದ್ಧಾರ್ಥ್ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈಗ ಶ್ರೀಗಣೇಶ್ ಅಭಿನಯದ ಹೊಸ ಚಿತ್ರವೊಂದರಲ್ಲಿ ಅವರು ನಟಿಸುತ್ತಿದ್ದು, ಈ ಚಿತ್ರಕ್ಕೆ ಚೈತ್ರಾ ನಾಯಕಿಯಾಗಿ ಆಯ್ಕೆಯಾಗಿದ್ದಾರಂತೆ.
ಇದು ಸಿದ್ಧಾರ್ಥ್ ಅಭಿನಯದ 40ನೇ ಚಿತ್ರವಾಗಿರುವುದರಿಂದ, ಚಿತ್ರಕ್ಕೆ ಸದ್ಯಕ್ಕೆ ‘ಸಿದ್ಧಾರ್ಥ್ 40’ ಎಂಬ ಹೆಸರಿಡಲಾಗಿದೆ. ಚಿತ್ರದಲ್ಲಿ ಶರತ್ ಕುಮಾರ್ ಮತ್ತು ದೇವಯಾನಿ ಸಹ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಇಂದಿನಿಂದ ಚಿತ್ರೀಕರಣ ಪ್ರಾರಂಭವಾಗಲಿದೆ.
ಹಾಗೆ ನೋಡಿದರೆ, ಇದು ಚೈತ್ರಾ ಒಪ್ಪಿಕೊಂಡ ಮೊದಲ ಚಿತ್ರವಂತೆ. ಆದರೆ, ಸ್ವಲ್ಪ ತಡವಾಗಿದ್ದರಿಂದ ಮೊದಲು ಶಶಿಕುಮಾರ್ ಅಭಿನಯದ ಚಿತ್ರ ಪ್ರಾರಂಭವಾಗಿ, ಇದು ಎರಡನೆಯ ಚಿತ್ರವಾಗಿ ಪ್ರಾರಂಭವಾಗುತ್ತಿದೆ. ಮೂರು ತಿಂಗಳ ಹಿಂದೆಯೇ ಈ ಚಿತ್ರವನ್ನು ಒಪ್ಪಿದ್ದು, ಈಗ ಚಿತ್ರ ಶುರುವಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ.
ಇದಲ್ಲದೆ, ಶಿವರಾಜಕುಮಾರ್ ಮತ್ತು ಧನಂಜಯ್ ಅಭಿನಯದ ‘ಉತ್ತರಕಾಂಡ’, ಚಿತ್ರದಲ್ಲೂ ಚೈತ್ರಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅದಿನ್ನಷ್ಟೇ ಬಿಡುಗಡೆಯಾಗಬೇಕಿದೆ. ಇನ್ನು, ‘ಹ್ಯಾಪಿ ಬರ್ಥ್ಡೇ ಟು ಮಿ’ ಎಂಬ ಇನ್ನೊಂದು ಚಿತ್ರದಲ್ಲೂ ಅವರು ನಟಿಸಿದ್ದು, ಅದು ಇತ್ತೀಚೆಗೆ ಓಟಿಟಿಯಲ್ಲಿ ನೇರವಾಗಿ ಬಿಡುಗಡೆ ಆಗಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…