ಮನರಂಜನೆ

ಸಿದ್ಧಾರ್ಥ್‍ಗೆ ಚೈತ್ರಾ ಆಚಾರ್ ನಾಯಕಿ; ತಮಿಳಿನಲ್ಲಿ ಎರಡನೇ ಚಿತ್ರ

ಕನ್ನಡದ ಚೈತ್ರಾ ಆಚಾರ್, ತಮಿಳಿನ ಚಿತ್ರವೊಂದರಲ್ಲಿ ಶಶಿಕುಮಾರ್ ಗೆ  ನಾಯಕಿಯಾಗಿ ನಟಿಸುತ್ತಿರುವ ಸುದ್ದಿಯೊಂದು ಇತ್ತೀಚೆಗಷ್ಟೇ ಬಂದಿತ್ತು. ಆ ಚಿತ್ರದ ಕೆಲಸಗಳೇ ಇನ್ನು ಮುಗಿದಿಲ್ಲ, ಚೈತ್ರಾ ಇನ್ನೊಂದು ಹೊಸ ತಮಿಳು ಚಿತ್ರಕ್ಕೆ ನಾಯಕಿಯಾಗಿರುವ ಸುದ್ದಿ ಬಂದಿದೆ.

ಅಂದಹಾಗೆ, ಚೈತ್ರಾ ಆಚಾರ್ ಈ ಬಾರಿ ನಾಯಕಿಯಾಗುತ್ತಿರುವುದು ಸಿದ್ಧಾರ್ಥ್ ಗೆ. ಇತ್ತೀಚೆಗಷ್ಟೇ ಬಿಡುಗಡೆಯಾ ‘ಇಂಡಿಯನ್‍ 2’ ಚಿತ್ರದಲ್ಲಿ ಸಿದ್ಧಾರ್ಥ್ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈಗ ಶ್ರೀಗಣೇಶ್‍ ಅಭಿನಯದ ಹೊಸ ಚಿತ್ರವೊಂದರಲ್ಲಿ ಅವರು ನಟಿಸುತ್ತಿದ್ದು, ಈ ಚಿತ್ರಕ್ಕೆ ಚೈತ್ರಾ ನಾಯಕಿಯಾಗಿ ಆಯ್ಕೆಯಾಗಿದ್ದಾರಂತೆ.

ಇದು ಸಿದ್ಧಾರ್ಥ್ ಅಭಿನಯದ 40ನೇ ಚಿತ್ರವಾಗಿರುವುದರಿಂದ, ಚಿತ್ರಕ್ಕೆ ಸದ್ಯಕ್ಕೆ ‘ಸಿದ್ಧಾರ್ಥ್ 40’ ಎಂಬ ಹೆಸರಿಡಲಾಗಿದೆ. ಚಿತ್ರದಲ್ಲಿ ಶರತ್‍ ಕುಮಾರ್ ಮತ್ತು ದೇವಯಾನಿ ಸಹ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಇಂದಿನಿಂದ ಚಿತ್ರೀಕರಣ ಪ್ರಾರಂಭವಾಗಲಿದೆ.

ಹಾಗೆ ನೋಡಿದರೆ, ಇದು ಚೈತ್ರಾ ಒಪ್ಪಿಕೊಂಡ ಮೊದಲ ಚಿತ್ರವಂತೆ. ಆದರೆ, ಸ್ವಲ್ಪ ತಡವಾಗಿದ್ದರಿಂದ ಮೊದಲು ಶಶಿಕುಮಾರ್ ಅಭಿನಯದ ಚಿತ್ರ ಪ್ರಾರಂಭವಾಗಿ, ಇದು ಎರಡನೆಯ ಚಿತ್ರವಾಗಿ ಪ್ರಾರಂಭವಾಗುತ್ತಿದೆ. ಮೂರು ತಿಂಗಳ ಹಿಂದೆಯೇ ಈ ಚಿತ್ರವನ್ನು ಒಪ್ಪಿದ್ದು, ಈಗ ಚಿತ್ರ ಶುರುವಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ.

ಇದಲ್ಲದೆ, ಶಿವರಾಜಕುಮಾರ್ ಮತ್ತು ಧನಂಜಯ್‍ ಅಭಿನಯದ ‘ಉತ್ತರಕಾಂಡ’, ಚಿತ್ರದಲ್ಲೂ ಚೈತ್ರಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅದಿನ್ನಷ್ಟೇ ಬಿಡುಗಡೆಯಾಗಬೇಕಿದೆ. ಇನ್ನು, ‘ಹ್ಯಾಪಿ ಬರ್ಥ್‍ಡೇ ಟು ಮಿ’ ಎಂಬ ಇನ್ನೊಂದು ಚಿತ್ರದಲ್ಲೂ ಅವರು ನಟಿಸಿದ್ದು, ಅದು ಇತ್ತೀಚೆಗೆ ಓಟಿಟಿಯಲ್ಲಿ ನೇರವಾಗಿ ಬಿಡುಗಡೆ ಆಗಿದೆ.

ಭೂಮಿಕಾ

Recent Posts

ಮುಸ್ಲಿಂ ಸಮುದಾಯದ ಜಹಾನ ಈಗ ವೈದ್ಯೆ!

ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ   ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…

2 hours ago

ಚೇತನ್ ಅಹಿಂಸಾ ಗಡಿಪಾರಿಗೆ ಆಗ್ರಹ

ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…

6 hours ago

ಕೊಡಗು | ಗುಂಡು ಹೊಡೆದುಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…

7 hours ago

ಬಿಜೆಪಿಗೆ ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…

7 hours ago

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…

7 hours ago

ಜನಗಣತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ ಅತ್ಯಗತ್ಯ: ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…

8 hours ago