Rajavardhans new film
‘ಬಿಚ್ಚುಗತ್ತಿ’ ನಂತರ ರಾಜವರ್ಧನ್ ಅಭಿನಯದ ಯಾವೊಂದು ಚಿತ್ರ ಸಹ ದೊಡ್ಡ ಸದ್ದು ಮಾಡಲಿಲ್ಲ. ಕಳೆದ ವರ್ಷ ಬಿಡುಗಡೆಯಾದ ‘ಹಿರಣ್ಯ’ ಮತ್ತು ‘ಪ್ರಣಯಂ’, ಈ ವರ್ಷ ಬಿಡುಗಡೆಯಾದ ‘ಗಜರಾಮ’ ಚಿತ್ರಗಳು ಗಮನಸೆಳೆಯುವಲ್ಲಿ ವಿಫಲವಾದವು. ಈ ಮಧ್ಯೆ, ರಾಜವರ್ಧನ್, ತೆಲುಗಿಗೆ ಹೋಗುತ್ತಾರೆ ಎಂಬುದೂ ಸುದ್ದಿಯಾಯಿತು.
ಹೀಗಿರುವಾಗಲೇ, ರಾಜವರ್ಧನ್ ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿರುವ ಸುದ್ದಿಯೊಂದು ಬಂದಿದೆ. ವಿಶೇಷವೆಂದರೆ, ಈ ಚಿತ್ರವನ್ನು ‘ಬಿಗ್ ಬಾಸ್’ ಸ್ಪರ್ಧಿ ಮತ್ತು ಸದ್ಯ ಸುದೀಪ್ ಅವರ ಮ್ಯಾನೇಜರ್ ಆಗಿ ಗುರುತಿಸಿಕೊಂಡಿರುವ ಚಕ್ರವರ್ತಿ ಚಂದ್ರಚೂಡ್ ನಿರ್ದೇಶನ ಮಾಡುತ್ತಿದ್ದಾರೆ.
ಪಕ್ಕಾ ಕನ್ನಡದ ಸೂಗಡಿನ ಮಾಸ್ ಮನರಂಜನೆಯ ಕಥೆಯನ್ನು ರಾಜವರ್ಧನ್ಗಾಗಿ ಚಕ್ರವರ್ತಿ ಚಂದ್ರಚೂಡ್ ಬರೆದಿದ್ದು, ಅದನ್ನು ತಾವೇ ನಿರ್ದೇಶನ ಮಾಡುತ್ತಿದ್ದಾರೆ. ಹಲವು ತಿಂಗಳುಗಳಿಂದ ಈ ಚಿತ್ರದ ಕುರಿತು ಚರ್ಚೆಗಳು ನಡೆಯುತ್ತಿದ್ದು, ಮೇ ತಿಂಗಳಲ್ಲಿ ಚಿತ್ರದ ಸಂಪೂರ್ಣ ವಿವರಗಳನ್ನು ಚಿತ್ರತಂಡದವರು ನೀಡುವ ಸಾಧ್ಯತೆ ಇದೆ. ಸದ್ಯಕ್ಕೆ ಈ ಚಿತ್ರವನ್ನು ಯಾರು ನಿರ್ಮಿಸುತ್ತಾರೆ ಮತ್ತು ಚಿತ್ರದಲ್ಲಿ ಯಾರೆಲ್ಲಾ ನಟಿಸುತ್ತಾರೆ ಎಂಬ ವಿಷಯವನ್ನು ಗೌಪ್ಯವಾಗಿ ಇಡಲಾಗಿದೆ.
ಈ ಮಧ್ಯೆ, ರಾಜವರ್ಧನ್, ನಟಿ ರಾಗಿಣಿ ಮತ್ತು ‘ಚಿತ್ರಸಂತೆ’ ನಿಯತಕಾಲಿಕೆಯ ಗಿರೀಶ್ ಗೌಡ ಅವರ ಜೊತೆಗೆ ಸೇರಿ ಇವೆಂಟ್ ಮ್ಯಾನೇಜ್ಮೆಂಟ್ ಸಂಸ್ಥೆಯನ್ನು ಪ್ರಾರಂಭಿಸುತ್ತಿರುವ ಸುದ್ದಿ ಇದ್ದು, ಮೇ 01ರಂದು ಈ ಬಗ್ಗೆ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆ ಇದೆ.
ತಿರುವನಂತಪುರಂ : ಬೆಂಗಳೂರಿನಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ಶೋಧದ ವೇಳೆ ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ.ರಾಯ್ ಅವರ ಆತ್ಮಹತ್ಯೆ…
ಟಿಬೆಟ್ ಬೌದ್ಧ ಧರ್ಮಗುರು ಮತ್ತು ಜಾಗತಿಕ ಶಾಂತಿದೂತ ಎಂದು ಪ್ರಖ್ಯಾತರಾದ ದಲೈಲಾಮಾ ಅವರು ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ತಮ್ಮ…
ಮಂಡ್ಯ: ಕೋಟ್ಯಾಂತರ ಭಕ್ತರ ಮನೆ-ಮನಗಳಲ್ಲಿ ನೆಲೆಗೊಂಡಿರುವ ಡಾ.ಶಿವಕುಮಾರಸ್ವಾಮೀಜಿಯವರ ಆದರ್ಶ ಅಜರಾಮರ ಎಂದು ಮನ್ಮುಲ್ ಅಧ್ಯಕ್ಷ ಯು.ಸಿ.ಶಿವಕುಮಾರ್ ಹೇಳಿದರು. ಮಂಡ್ಯ ನಗರದ…
ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಪ್ರತಿ ಇಲಾಖೆಯಲ್ಲಿಯೂ ನಡೆಯುತ್ತಿದೆ. ಸರ್ಕಾರ ದಿವಾಳಿಯಾಗಿದ್ದು, ಲೂಟಿ ಮಾಡುವುದನ್ನೇ ಕಾಯಕವನ್ನಾಗಿ ಮಾಡಿಕೊಂಡಿದೆ ಎಂದು ವಿಪಕ್ಷ…
ಚಾಮರಾಜನಗರ: ಫ್ಲೋರೈಡ್ ಮಿಶ್ರಿತ ನೀರು ಕುಡಿದು 47 ಮಂದಿ ಕಿಡ್ನಿ ಕಳೆದುಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹನೂರು…
ಹುಣಸೂರು: ತಾಲ್ಲೂಕಿನ ಬೋಳನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸರಾಮನಹಳ್ಳಿ ಗ್ರಾಮದಲ್ಲಿ ಬಾರ್ ತೆರೆಯಲು ಅನುಮತಿ ನೀಡದಂತೆ ಒತ್ತಾಯಿಸಿ ಗ್ರಾಮಸ್ಥರು ಪಿಡಿಓಗೆ…